AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಮಹಾ ಪ್ಲ್ಯಾನ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೂ ಸೈಟ್​ ಹಂಚಿಕೆ ಮಾಲಾಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಹಲ್​ಚಲ್ ಎಬ್ಬಿಸಿದೆ. ಯಾವುದೇ ಭ್ರಷ್ಟಾಚಾರ, ಹಗರಣ ಮಾಡದೇ ಕ್ಲೀನ್​ ಇಮೇಜ್ ಹೊಂದಿರುವ ಸಿದ್ದರಾಮಯ್ಯನವರಿಗೆ ಇದೀಗ ಮುಡಾ ಕಂಟಕ ಎದುರಾಗಿದ್ದು, ಇದನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡು ಸಿದ್ದರಾಮ್ಯಯ ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷ ಬಿಜೆಪಿ ಮುಂದಾಗಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಮಹಾ ಪ್ಲ್ಯಾನ್
ಮುಡಾ ಹಗರಣ
ರಮೇಶ್ ಬಿ. ಜವಳಗೇರಾ
|

Updated on: Jul 02, 2024 | 4:00 PM

Share

ಬೆಂಗಳುರು, (ಜುಲೈ 02): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ‌ ಗೊಂದಲದ ಗೂಡಾಗಿದೆ. ಒಂದು ಕಡೆ 50 : 50 ಅನುಪಾತದಡಿಯ ಮಂಜೂರಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರೆ ಮತ್ತೊಂದು ಕಡೆ ಖುದ್ದು ಸಿಎಂ ಸಿದ್ದರಾಮಯ್ಯ ಪತ್ನಿ 50 : 50 ಅನುಪಾತದಡಿಯಲ್ಲಿ ಪಡೆದಿರುವ ಬದಲಿ ಜಾಗದ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ವಿಪಕ್ಷ ಬಿಜೆಪಿ ಸಹ ದಾಖಲೆ ಕಲೆಹಾಕಿತ್ತಿದ್ದು, ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ಲ್ಯಾನ್ ಮಾಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿಟಿ ರವಿ, ಮುಡಾ ಹಗರಣದ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಅಗೆದಷ್ಟು, ಬಗೆದಷ್ಟು ಹೊರಗೆ ಬರುತ್ತಿದೆ. ನನ್ನನ್ನೂ ಮಿರಿಸಿದ ಹಗರಣ ಮಾಡುತ್ತಿದ್ದಾರೆ ಎಂದು ಚಾರ್ಲ್ಸ್ ಶೋಭರಾಜ್‌ಗೂ ಅನ್ನಿಸುತ್ತಿದೆಯಂತೆ. ಅಧಿವೇಶನದಲ್ಲಿ ಎಲ್ಲಾ ದಾಖಲೆ ಇಟ್ಟು ಚರ್ಚೆ ಮಾಡುತ್ತೇವೆ. ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲರ ಜಾತಕ‌ ಬಿಚ್ಚಿಡುತ್ತೇವೆ ಎಂದರು.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಪತ್ನಿ ರಕ್ಷಣೆಗೆ ನಿಂತ್ರಾ ಸಚಿವ ಬೈರತಿ ಸುರೇಶ್? ಆರ್​ಟಿಐ ಕಾರ್ಯಕರ್ತ ಗಂಭೀರ ಆರೋಪ

ಇನ್ನು ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಒಂದು ವರ್ಷದಲ್ಲೇ ಹಗರಣ ಮೇಲೆ‌ ಹಗರಣ ಬಯಲಿಗೆ ಬರುತ್ತಿದೆ. ವಾಲ್ಮೀಕಿ ‌ನಿಗಮ ಹಗರಣ ಬೆನ್ನಲ್ಲೇ ‌ಮುಡಾದಲ್ಲಿ ಹಗರಣ ಬಯಲಿಗೆ. ಸಿಎಂ ಉಸ್ತುವಾರಿ ‌ಜಿಲ್ಲೆಯಲ್ಲಿ‌ ಹಗರಣ ಆಗಿದ್ರೂ ಸುಮ್ಮನಿದ್ದಾರೆ. ಒಂದು ರೀತಿಯಲ್ಲಿ ಅವರ ಮನೆ ಬಾಗಿಲಲ್ಲೇ ನಡೆದಿರುವ ಹಗರಣ. ಸಿಎಂ ಕುಟುಂಬ ಸದಸ್ಯರಿಗೆ ಸೈಟ್ ಹಂಚಿಕೆ ಆಗಿದ್ದು ವರದಿಯಲ್ಲಿ ಸ್ಪಷ್ಟವಾಗಿದೆ. ರಾಜ್ಯದಲ್ಲಿರೋದು ಶೂನ್ಯ ಅಭಿವೃದ್ಧಿ ಸರ್ಕಾರ. ಅಧಿವೇಶನದಲ್ಲಿ ಹಗರಣದ ಬಗ್ಗೆ ಪ್ರಸ್ತಾಪಿಸ್ತೇವೆ. ಆರೋಪ ಬಂತಂದ್ರೆ ಕೇವಲ ವರ್ಗಾವಣೆ ಮಾಡೋದು ಅಷ್ಟೇ ಆಗುತ್ತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮುಚ್ಚಿಹಾಕುವ ಯತ್ನ ನಡೆಯುತ್ತಿದೆ. ನಾಳೆ ಪ್ರತಿಭಟನೆ ಮಾಡಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ಒಟ್ಟಾರೆ ಮುಡಾದ ಫಿಫ್ಟಿ ಫಿಫ್ಟಿ ಅನುಪಾತದಲ್ಲಿ ಸಿದ್ದರಾಮಯ್ಯನವರ ಕುಟುಂಬಕ್ಕೂ ಹಂಚಿಕೆಯಾಗಿದ್ದು, ಇದನ್ನು ವಿರೋಧ ಪಕ್ಷ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಈ ಬಗ್ಗೆ ಎಲ್ಲಾ ದಾಖಲೆಗಳನ್ನು ಕಲೆಹಾಕಿ ಜುಲೈ 15ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ಲ್ಯಾನ್ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ