AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು: ಬಿಜೆಪಿ ಕಿಡಿ

ಇದೇನು ಕಾಶ್ಮೀರವೋ ಅಥವಾ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಆಗಿದೆಯೋ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ತಾಲಿಬಾನ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ. ಘಟನೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು: ಬಿಜೆಪಿ ಕಿಡಿ
ಕಾಂಗ್ರೆಸ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು: ಬಿಜೆಪಿ ಕಿಡಿ
Follow us
Ganapathi Sharma
|

Updated on: Jun 11, 2024 | 8:05 AM

ಬೆಂಗಳೂರು, ಜೂನ್ 11: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ, ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಗುಂಪೊಂಡು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ (Bantwala) ತಾಲೂಕಿನ ಬೋಳಿಯಾರ್‌ನಲ್ಲಿ (Boliyar) ನಡೆದಿತ್ತು. ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ (Congress Givernment) ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ರಾಜ್ಯದಲ್ಲಿ ತುಘಲಕ್ ಆಡಳಿತ ಮರಳಿದೆ ಎಂದು ಟೀಕಿಸಿದೆ.

ಘಟನೆಗೆ ಸಂಬಂಧಿಸಿ ‘ಟಿವಿ9’ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಇದೇನು ಕಾಶ್ಮೀರವೋ ಅಥವಾ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಆಗಿದೆಯೋ ಗೊತ್ತಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ತಾಲಿಬಾನ್ ಆಡಳಿತದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದರೆ ರಾಜ್ಯಸಭಾ ಸೀಟು, ಭಾರತ್ ಮಾತಾ ಕೀ ಜೈ ಎಂದರೆ ಕಲ್ಲೇಟು. ರಾಮನ ಹೆಸರು ಹೇಳುವುದೂ ತಪ್ಪು, ಭಾರತ್ ಮಾತಾ ಕೀ ಜೈ ಎಂದರೂ ತಪ್ಪು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರ ಮೇಲೆ ಕಠಿಣ ಕ್ರಮ ಕೈಗೊಂಡು ಜೈಲಿಗಟ್ಟಿದ್ದರೆ ಇವತ್ತು ಭಾರತ್ ಮಾತಾ ಕಿ ಜೈ ಎನ್ನುವವರ ಮೇಲೆ ಕಲ್ಲು ತೂರುವ ಧೈರ್ಯ ಮಾಡುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಸರ್ಕಾರ ಬಂದಾಗಿನಿಂದ ಮತಾಂಧರಿಗೆ, ತೀವ್ರವಾದಿ ಸಂಘಟನೆಗಳಿಗೆ ಕೊಂಬು ಬಂತಾಗಿದ್ದು, ದೇಶವಿದ್ರೋಹಿ ಘಟನೆಗಳು ಪದೇ ಪದೇ ನಡೆಯುತ್ತಲೇ ಇವೆ. ನಿಮ್ಮ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಮುಸ್ಲಿಂ ಮತಾಂಧ ಮುಳ್ಳುಗಳೇ ಹೆಚ್ಚಾಗಿದ್ದು, ಹಿಂದೂಗಳಿಗೆ, ದೇಶಪ್ರೇಮಿಗಳಿಗೆ ನೆಮ್ಮದಿ ಇಲ್ಲದಂತಾಗಿದೆ’ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

ಮತ್ತೊಂದೆಡೆ, ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿಯೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಎಂದು ಕೂಗುವುದು ಸುರಕ್ಷಿತವಲ್ಲ. ತುಘಲಕ್ ಯುಗ ಮತ್ತೆ ಬಂದಂತೆ ಭಾಸವಾಗುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಭಾರತದ ವಿರುದ್ಧ ಬೆಳೆಯುತ್ತಿರುವ ದ್ವೇಷವು ಆತಂಕಕಾರಿಯಾಗಿದೆ. ಮಂಗಳೂರಿನಲ್ಲಿ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಾ ಪ್ರಧಾನಿ ಮೋದಿಯವರ ಚುನಾವಣಾ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಮತ್ತು ನಂದಕುಮಾರ್ ಅವರ ಮೇಲೆ ಅಬೂಬಕ್ಕರ್, ಬಶೀರ್, ಸಿದ್ದಿಕ್, ಮೋನು ಮತ್ತು ಇತರ 20 ಮಂದಿ ಬರ್ಬರವಾಗಿ ಇರಿದಿದ್ದಾರೆ. ಈ ಹೇಯ ಕೃತ್ಯವು ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಕರ್ನಾಟಕದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಹಿಂಸಾತ್ಮಕ ಘಟನೆಗಳು ಮತ್ತು ಅನಿಯಂತ್ರಿತ ಆಕ್ರಮಣಶೀಲತೆಯ ಹೆಚ್ಚಳವು ಭಯ ಮತ್ತು ಅಸ್ಥಿರತೆಯ ವಾತಾವರಣವನ್ನು ಸೃಷ್ಟಿಸುತ್ತಿದೆ. ಇದು ನಾಗರಿಕರನ್ನು ರಕ್ಷಿಸಲು ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಬಲವಾದ ಆಡಳಿತ ಮತ್ತು ಭದ್ರತಾ ಕ್ರಮಗಳ ತುರ್ತು ಅಗತ್ಯವನ್ನು ಒತ್ತಿಹೇಳುತ್ತದೆ ಎಂದು ಬಿಜೆಪಿ ಉಲ್ಲೇಖಿಸಿದೆ.

ಬಿಜೆಪಿ ಎಕ್ಸ್ ಸಂದೇಶ

ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಘಟನೆಯನ್ನು ಖಂಡಿಸಿದ್ದು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರವು ಮೂಲಭೂತವಾದಿಗಳನ್ನು ಓಲೈಸುತ್ತಿರುವ ಕಾರಣ ಮತ್ತು ಅವರು ಕಾನೂನಿಗೆ ಹೆದರುವುದಿಲ್ಲ ಎಂಬ ಕಾರಣದಿಂದಾಗಿ ಇಂಥ ಘಟನೆಗಳು ನಡೆಯುತ್ತಿವೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಭಾರತ್ ಮಾತಾ ಕೀ ಜೈ ಎಂದವರ ಅಟ್ಟಾಡಿಸಿಕೊಂಡು ಹೋಗಿ ಚೂರಿಯಿಂದ ಇರಿದರು: ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?