AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ […]

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ
ಬಿ.ಎಸ್​.ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 04, 2020 | 5:55 PM

Share

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಮಂಡಳಿ ಬೇರೆ ಹೆಸರನ್ನು ಆಯ್ಕೆ ಮಾಡಿತ್ತು. ಅದೇ ರೀತಿ ಈ ಬಾರಿ ಕೂಡ ರಾಜ್ಯ ಕೋರ್ ಕಮಿಟಿ ಔಪಚಾರಿಕವಾಗಿ ಎರಡು ಹೆಸರು ಕಳಿಸುವ ಸಾಧ್ಯತೆ ಇದೆ. ಆದರೆ ಪಕ್ಷದ ಹೈ ಕಮಾಂಡ್ ಅದನ್ನು ಒಪ್ಪಿಕೊಳ್ಳುತ್ತದೆ ಎಂಬ ವಿಶ್ವಾಸ ರಾಜ್ಯದ ನಾಯಕರಿಗೂ ಇಲ್ಲ.

ನಾಳಿನ ಸಭೆಯಲ್ಲಿ ಲವ್ ಜಿಹಾದ್ ಕುರಿತಾಗಿ ಕಾನೂನು ತರಬೇಕೆ ಎಂಬ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಮಂತ್ರಿಮಂಡಳ ವಿಸ್ತರಣೆ ಅಥವಾ ಪುನರ್ ರಚನೆ ವಿಚಾರ ಚರ್ಚೆಗೆ ಬರುವ ಸಾಧ್ಯತೆ ತೀರಾ ಕಡಿಮೆ. ಏಕೆಂದರೆ, ಮಂಗಳವಾರ ನಡೆದ ಎರಡು ಉಪ-ಚುನಾವಣೆಯ ಫಲಿತಾಂಶವನ್ನು ನೋಡಿಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇರುವುದರಿಂದ ನಾಳೆ ಆ ವಿಚಾರದ ಚರ್ಚೆಯ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ