AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ […]

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ
ಬಿ.ಎಸ್​.ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 04, 2020 | 5:55 PM

Share

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಮಂಡಳಿ ಬೇರೆ ಹೆಸರನ್ನು ಆಯ್ಕೆ ಮಾಡಿತ್ತು. ಅದೇ ರೀತಿ ಈ ಬಾರಿ ಕೂಡ ರಾಜ್ಯ ಕೋರ್ ಕಮಿಟಿ ಔಪಚಾರಿಕವಾಗಿ ಎರಡು ಹೆಸರು ಕಳಿಸುವ ಸಾಧ್ಯತೆ ಇದೆ. ಆದರೆ ಪಕ್ಷದ ಹೈ ಕಮಾಂಡ್ ಅದನ್ನು ಒಪ್ಪಿಕೊಳ್ಳುತ್ತದೆ ಎಂಬ ವಿಶ್ವಾಸ ರಾಜ್ಯದ ನಾಯಕರಿಗೂ ಇಲ್ಲ.

ನಾಳಿನ ಸಭೆಯಲ್ಲಿ ಲವ್ ಜಿಹಾದ್ ಕುರಿತಾಗಿ ಕಾನೂನು ತರಬೇಕೆ ಎಂಬ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಮಂತ್ರಿಮಂಡಳ ವಿಸ್ತರಣೆ ಅಥವಾ ಪುನರ್ ರಚನೆ ವಿಚಾರ ಚರ್ಚೆಗೆ ಬರುವ ಸಾಧ್ಯತೆ ತೀರಾ ಕಡಿಮೆ. ಏಕೆಂದರೆ, ಮಂಗಳವಾರ ನಡೆದ ಎರಡು ಉಪ-ಚುನಾವಣೆಯ ಫಲಿತಾಂಶವನ್ನು ನೋಡಿಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇರುವುದರಿಂದ ನಾಳೆ ಆ ವಿಚಾರದ ಚರ್ಚೆಯ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ