AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ. ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ […]

ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ
ಬಿ.ಎಸ್​.ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on: Nov 04, 2020 | 5:55 PM

Share

ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ನಾಳೆ ಮಂಗಳೂರಿನಲ್ಲಿ ನಡೆಯುವ ಮಧ್ಯೆ ರಾಜ್ಯ ಕೋರ್ ಕಮೀಟಿ ಸಭೆ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪಕ್ಷದ ಮೂಲಗಳ ಪ್ರಕಾರ, ಅಶೋಕ್ ಗಸ್ತಿ ಅವರ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರ ಈ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ಹಿಂದೆ ರಾಜ್ಯ ಕೋರ್ ಕಮಿಟಿ ಕಳಿಸಿದ ಹೆಸರುಗಳನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಮಂಡಳಿ ಬೇರೆ ಹೆಸರನ್ನು ಆಯ್ಕೆ ಮಾಡಿತ್ತು. ಅದೇ ರೀತಿ ಈ ಬಾರಿ ಕೂಡ ರಾಜ್ಯ ಕೋರ್ ಕಮಿಟಿ ಔಪಚಾರಿಕವಾಗಿ ಎರಡು ಹೆಸರು ಕಳಿಸುವ ಸಾಧ್ಯತೆ ಇದೆ. ಆದರೆ ಪಕ್ಷದ ಹೈ ಕಮಾಂಡ್ ಅದನ್ನು ಒಪ್ಪಿಕೊಳ್ಳುತ್ತದೆ ಎಂಬ ವಿಶ್ವಾಸ ರಾಜ್ಯದ ನಾಯಕರಿಗೂ ಇಲ್ಲ.

ನಾಳಿನ ಸಭೆಯಲ್ಲಿ ಲವ್ ಜಿಹಾದ್ ಕುರಿತಾಗಿ ಕಾನೂನು ತರಬೇಕೆ ಎಂಬ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಮಂತ್ರಿಮಂಡಳ ವಿಸ್ತರಣೆ ಅಥವಾ ಪುನರ್ ರಚನೆ ವಿಚಾರ ಚರ್ಚೆಗೆ ಬರುವ ಸಾಧ್ಯತೆ ತೀರಾ ಕಡಿಮೆ. ಏಕೆಂದರೆ, ಮಂಗಳವಾರ ನಡೆದ ಎರಡು ಉಪ-ಚುನಾವಣೆಯ ಫಲಿತಾಂಶವನ್ನು ನೋಡಿಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಇರುವುದರಿಂದ ನಾಳೆ ಆ ವಿಚಾರದ ಚರ್ಚೆಯ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

Follow Us
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ
W,W,W.. ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಭುವಿ
ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ
ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಮಹದೇವಪ್ಪ
ಸಿದ್ದರಾಮಯ್ಯ ಟಗರು ಇದ್ದಂತೆ; ಯಾವಾಗ ಗುದ್ದಬೇಕೋ ಗುದ್ದುತ್ತದೆ: ಮಹದೇವಪ್ಪ