AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಟಿಸ್ ಬಳಿಕ ಮೊದಲ ಬಾರಿಗೆ ಸಭೆ ಸೇರಿದ ಬಿಜೆಪಿ ಭಿನ್ನರ ಬಣ: ವಿಜಯೇಂದ್ರ ನೋಟಿಸ್ ಕೊಡಿಸಿದ್ದಾರೆಂದು ಯತ್ನಾಳ್ ಕೆಂಡಾಮಂಡಲ

ಕೆಲ ದಿನಗಳ ಕಾಲ ಮೌನವಾಗಿದ್ದ ಬಿಜೆಪಿ ಭಿನ್ನರ ಬಣದ ನಾಯಕರು ಮತ್ತೆ ಸಕ್ರಿಯ ಆಗಿದ್ದಾರೆ. ಶೋಕಾಸ್ ನೊಟೀಸ್​ನಿಂದ ಮುಜುಗರಕ್ಕೀಡಾದ ಯತ್ನಾಳ್ಬಣ ಪ್ರತ್ಯೇಕ ಸಭೆ ಮುಂದುವರಿಸಿದೆ. ಹಾಗಾದ್ರೆ ಬೆಂಗಳೂರಿನಲ್ಲಿ ಗುರುವಾರ ನಡೆದ ರೆಬಲ್ಸ್ ನಾಯಕರ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಸಂಪೂರ್ಣ ವಿವರ ಇಲ್ಲಿದೆ.

ನೋಟಿಸ್ ಬಳಿಕ ಮೊದಲ ಬಾರಿಗೆ ಸಭೆ ಸೇರಿದ ಬಿಜೆಪಿ ಭಿನ್ನರ ಬಣ: ವಿಜಯೇಂದ್ರ ನೋಟಿಸ್ ಕೊಡಿಸಿದ್ದಾರೆಂದು ಯತ್ನಾಳ್ ಕೆಂಡಾಮಂಡಲ
ಪ್ರತಾಪ್ ಸಿಂಹ
Anil Kalkere
| Edited By: |

Updated on: Feb 21, 2025 | 7:32 AM

Share

ಬೆಂಗಳೂರು, ಫೆಬ್ರವರಿ 21: ಈಗಾಗಲೇ ವಕ್ಫ್ ಹೋರಾಟದ ನೆಪದಲ್ಲಿ ಹೈಕಮಾಂಡ್ ಭೇಟಿ ಮಾಡಿ, ರಾಜ್ಯಾಧ್ಯಕ್ಷರ ಬದಲಾವಣೆಗೆ ಬಿಜೆಪಿಯ ಬಸನಗೌಡ ಪಾಟೀಲ್ ನೇತೃತ್ವದ ಭಿನ್ನಮತೀಯರ ಗುಂಪು ದುಂಬಾಲು ಬಿದ್ದಿದೆ. ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಬಳಿಕ ಯತ್ನಾಳ್ ಟೀಂ ಗುರುವಾರ ಮತ್ತೆ ಸಭೆ ಸೇರಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾಜಿ‌ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಸೇರಲಾಗಿದೆ. ಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ ಹರೀಶ್, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಕೊಟ್ಟ ಬಳಿಕ ಯತ್ನಾಳ್​ ವಿಜಯೇಂದ್ರ ವಿರುದ್ಧ ನಿಗಿನಿಗಿ ಕೆಂಡ ಕಾರುತ್ತಿದ್ದಾರೆ. ವಿಜಯೇಂದ್ರ ಮೊದಲು ಹಲ್ಕಾ ಕೆಲಸ ಬಿಡಬೇಕು ಅಂತ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನನಗೆ ನೋಟಿಸ್ ಬಂದಿದೆ ಅಂತಾ ಹೇಳೋಕೆ ವಿಜಯೇಂದ್ರ ಯಾರು? ನನಗೆ ನೋಟಿಸ್ ಬಂದಿದೆ ಅಂತಾ ಅವನಿಗೆ ಹೇಗೆ ಗೊತ್ತು? ಹಾಗಿದ್ರೆ ಅವನದ್ದೇ ತಾನೇ ನೋಟಿಸ್ ಹಿಂದಿರುವ ಶಕ್ತಿ ಎಂದು ವಾಗ್ದಾಳಿ ನಡೆಸಿದ್ದಾರೆ.

ವಕ್ಪ್ ಹೋರಾಟ ಯಶಸ್ವಿಯಾಗಿದೆ ಎಂದು ವರಿಷ್ಠರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಣ್ಣ ಸಭೆ ಸೇರಿದ್ದೇವೆ ಅಷ್ಟೆ. ಹೀಗಾಗಿ ನಾವೆಲ್ಲ ಸೇರಿ ಒಂದು ಕಾಫಿ ಕುಡಿದ್ವಿ ಅಷ್ಟೇ. ಮುಂದಿನ ಹೋರಾಟ ಬಗ್ಗೆ ಚರ್ಚೆ ಮಾಡಿದ್ವಿ. ಅಷ್ಟೇ ಇವತ್ತಿನ ಸಭೆಯಲ್ಲಿ ಆಗಿದ್ದು, ಬೇರೇನೂ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಯತ್ನಾಳ್ ಬಣದ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಯ್ತು?

  • ರಾಜ್ಯಾದ್ಯಕ್ಷ ಬದಲಾವಣೆ ವಿಚಾರ.
  • ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದ ವಿಚಾರ.
  • ಶಿವರಾಜ್ ಸಿಂಗ್ ಚೌಹಣ್ ರಾಜ್ಯಕ್ಕೆ ಆಗಮಿಸಿ ಚುನಾವಣೆ ಪ್ರಕ್ರಿಯೆ ನಡೆಸಿದಲ್ಲಿ ನಾಮಪತ್ರ ಸಲ್ಲಿಸಲು ನಿರ್ಧಾರ.
  • ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಚರ್ಚೆ.
  • ಮುಂದಿನ ನಡೆ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.
  • ಅಕ್ರಮ ಬಾಂಗ್ಲಾ ನುಸಳುಕೋರರ ವಿರುದ್ದ ಹೋರಾಟಕ್ಕೆ ನಿರ್ಧಾರ.
  • ಗ್ಯಾರೆಂಟಿ ಯೋಜನೆಗಳ ಗೊಂದಲ, ವಿಳಂಬದ ವಿರುದ್ಧ ಹೋರಾಟಕ್ಕೂ ಚಿಂತನೆ.

ಶೋಕಾಸ್ ನೋಟಿಸ್​​ನಿಂದ ಹಿನ್ನಡೆ ಆಗಿದೆಯಾ ಎಂಬ ಪ್ರಶ್ನೆಗೆ ಸ್ಪಷ್ಟಿಕರಣ ನೀಡಲು ಪ್ರತಾಪ್ ಸಿಂಹ ಮುಂದಾಗಿದ್ದರು. ಈ ವೇಳೆ ಮುಜುಗರಕ್ಕೆ ಒಳಗಾಗಿ ಸಿಟ್ಟಾದ ಯತ್ನಾಳ್, ಸ್ಥಳದಿಂದ ಹೊರಡಲು ಮುಂದಾಗಿದ್ದಾರೆ. ನೊಟೀಸ್ ವಿಚಾರ ಕೇಳಿ ತಾಳ್ಮೆ ಕಳೆದುಕೊಂಡು ಯತ್ನಾಳ್ ಉದ್ವೇಗಕ್ಕೊಳಗಾಗಿದರು. ಬಳಿಕ, ‘ವಿಜಯೇಂದ್ರನನ್ನು ಕೇಳಿ ನೊಟೀಸ್ ಬಗ್ಗೆ, ಹೇಳ್ತಾರೆ. ನನ್ಯಾಕೆ ಕೇಳ್ತೀರಿ’ ಎಂದು ಸಿಟ್ಟಿನಲ್ಲೇ ಮಾತನಾಡಿದರು. ಪ್ರತಾಪ್ ಸಿಂಹ ಕರೆದರೂ ಸಿಟ್ಟಲ್ಲೇ ಯತ್ನಾಳ್ ಮನೆಯೊಳಗೆ ತೆರಳಿದರು.

ಇದನ್ನೂ ಓದಿ: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್

ಇದೀಗ ರೆಬಲ್ ಟೀಂ ನಡೆ ಮತ್ತಷ್ಟು ನಿಗೂಢವಾಗಿದೆ. ಸೌಜನ್ಯದ ಸಭೆ ಹೆಸರಲ್ಲಿ ಹತ್ತು ಹಲವು ಸಂಗತಿಗಳು ಚರ್ಚೆ ಆಗಿವೆ. ಮತ್ತೆ ವಿಜಯೇಂದ್ರ ವಿರುದ್ಧ ಸಮರ ಸಾರುತ್ತಾರೋ? ನೋಟಿಸ್​ಗೆ ಉತ್ತರ ನೀಡಿದ ನಂತರ ಇದೀಗ ತಟಸ್ಥ ನಿಲುವು ತಾಳುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್