AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ ಬಿಜೆಪಿ

ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ ಬಿಜೆಪಿ
ಯತೀಂದ್ರ ಸಿದ್ದರಾಮಯ್ಯ ಮತ್ತು ಎನ್ ರವಿಕುಮಾರ್
Follow us
TV9 Web
| Updated By: Rakesh Nayak Manchi

Updated on: Sep 22, 2023 | 6:26 PM

ಬೆಂಗಳೂರು, ಸೆ.22: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.

ದೂರು ನೀಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ, ದೇಶಕ್ಕೆ ಸಿದ್ದರಾಮಯ್ಯ ನೀತಿ ಹೇಳುತ್ತಾರೆ, ನಾನೇ ಶ್ರೇಷ್ಠ ಅಂತಾರೆ. ಆದರೆ ಅವರೇ ವರುಣಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ, ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದರು.

ಇದನ್ನೂ ಓದಿ: ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾತು ವೈರಲ್: ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಯತೀಂದ್ರ ಸಿದ್ದರಾಮಯ್ಯ

ಮಡಿವಾಳ ಸಮುದಾಯಕ್ಕೆ ಐರನ್ ಬಾಕ್ಸ್ ಮತ್ತು ಮನೆ ಮನೆಗೆ ಕುಕ್ಕರ್ ಕೊಟ್ಟಿದ್ದೇವೆ, ಜತೆಗೆ ಹಣವನ್ನೂ ಕೊಟ್ಟಿದ್ದೇವೆ ಅಂತ ಯತೀಂದ್ರ ಅವರೇ ಭಾಷಣ ಮಾಡಿದ್ದಾರೆ. ಈ ವೀಡಿಯೋ ತುಣುಕು ರಾಜ್ಯಾದ್ಯಂತ ವೈರಲ್ ಆಗಿದೆ ಎಂದರು.

ಸಿದ್ದರಾಮಯ್ಯ ಮತದಾರರಿಗೆ ಆಮಿಷ ಒಡ್ಡಿ ಮತ ಹಾಕಿಸಿಕೊಂಡು ನಿಯಮ ಉಲ್ಲಂಘಿಸಿದ್ದಾರೆ. ಈ ಸಂಬಂಧ ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ. ಶಾಸಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವಂತೆ ಚುನಾವಣಾ ಆಯೋಗ ನಿರ್ದೇಶನ ಕೊಡಬೇಕೆಂದು ಮನವಿ ಮಾಡಿದ್ದೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ