AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಪ್ರತಿಯೊಂದು ಸ್ಟೇಷನ್​​ಗಳನ್ನು ಹರಾಜಿಗಿಟ್ಟಿದ್ದಾರೆ: ಸಚಿವ ಕೃಷ್ಣ ಭೈರೇಗೌಡ

ಬಿಜೆಪಿಯವರು ಪ್ರತಿಯೊಂದು ಸ್ಟೇಷನ್​ನನ್ನೂ ಹರಾಜಿಗಿಟ್ಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರು ಪ್ರತಿಯೊಂದು ಸ್ಟೇಷನ್​​ಗಳನ್ನು ಹರಾಜಿಗಿಟ್ಟಿದ್ದಾರೆ: ಸಚಿವ ಕೃಷ್ಣ ಭೈರೇಗೌಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 29, 2022 | 6:32 PM

Share

ಬೆಂಗಳೂರು: ಬಿಜೆಪಿಯವರು ಪ್ರತಿಯೊಂದು ಸ್ಟೇಷನ್​ನನ್ನೂ ಹರಾಜಿಗಿಟ್ಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಕೃಷ್ಣ ಭೈರೇಗೌಡ ನನ್ನ ಕ್ಷೇತ್ರದಲ್ಲಿ ಒಂದೇ ಸ್ಟೇಷನ್​ನಲ್ಲಿ 4 ಇನ್ಸ್​ಪೆಕ್ಟರ್​​ಗಳು​ ಸಸ್ಪೆಂಡ್​ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಾಲ್ಕು ಇನ್ಸ್​​ಪೆಕ್ಟರ್​ಗಳು ಟ್ರ್ಯಾಪ್​ ಕೇಸ್​​ನಲ್ಲಿ ಸಿಲುಕಿಕೊಂಡಿದ್ದಾರೆ. ಚಿಕ್ಕಜಾಲ ಸ್ಟೇಷನ್​​ನಲ್ಲಿ 4 ಇನ್ಸ್​ಪೆಕ್ಟರ್​​ಗಳು ಈ ಟ್ರ್ಯಾಪ್​ ಕೇಸ್​​ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಅಸ್ತ್ರ ಪ್ರಯೋಗ

ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಅಸ್ತ್ರ ಪ್ರಯೋಗ ಮಾಡಿದೆ. ಪೊಲೀಸ್ ಇಲಾಖೆ ಭ್ರಷ್ಟಾಚಾರ ಅನಾವರಣಕ್ಕೆ ಹೇಳಿಕೆಯೇ ಅಸ್ತ್ರ ಮಾಡಿಕೊಂಡಿದೆ. ಸಚಿವ ಎಂಟಿಬಿ ನಾಗರಾಜ್ ಹೇಳಿಕೆಯೇ ಕೈಪಡೆಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಪೋಸ್ಟಿಂಗ್‌ಗೆ 70 ಲಕ್ಷ ಲಂಚ ನೀಡಿದೆ ಎಂದು ಸಚಿವ ಎಂಟಿಬಿ ಹೇಳಿಕೆ ಇದೀಗ ಸರ್ಕಾರ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಎಂಟಿಬಿ ಹೇಳಿಕೆ ಮುಂದಿಟ್ಟುಕೊಂಡು ಕೈ ಪಾಳಯ ಹೋರಾಟಕ್ಕೆ ಮುಂದಾದಗಿದೆ.

ಸಸ್ಪೆಂಡ್‌ ಆಗಿದ್ದ ಕೆ.ಆರ್.ಪುರಂ ಪಿಐ ನಂದೀಶ್ ಸಾವು ಕೇಸ್‌ ಹಾಗೂ ಸಚಿವ ಎಂಟಿಬಿ ಹೇಳಿಕೆ ಜನರ ಮುಂದಿಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ. ಗೃಹ ಇಲಾಖೆಯ ಭ್ರಷ್ಟಾಚಾರ ಮತ್ತು ಹಿರಿಯ ಅಧಿಕಾರಿಗಳಿಗೆ ನೀಡುತ್ತೀರುವ ಕಿರುಕುಳ ಬಗ್ಗೆ ಜನರ ಮುಂದೆ ಪ್ರಸ್ತಾಪಿಸಲು ಕಾಂಗ್ರೆಸ್‌ ನಾಯಕರ ತೀರ್ಮಾನ ಮಾಡಿದ್ದಾರೆ.

ಈ ಹಿಂದೆ ಪಿಎಸ್ಐ ಅಕ್ರಮ ನೇಮಕಾತಿ ವಿಚಾರದ ಬಗ್ಗೆ ಹೋರಾಟ ಮಾಡುವುದಾಗಿಯು ಹೇಳಿಕೊಂಡಿದೆ. ಸರ್ಕಾರದ ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ಮಾಡಿ ಯಶಸ್ವಿಯಾಗಿತ್ತು. ಸದನದೊಳಗೆ, ಸದನದ ಹೊರಗೆ ನಿರಂತರ ಹೋರಾಟವನ್ನು ಕೈ ಮಾಡಿತ್ತು.

ಸಿಎಂಗೆ ತಾಕತ್​ ಇದ್ದರೆ ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಿಸಲಿ: ರಾಮಲಿಂಗಾರೆಡ್ಡಿ

ಸಚಿವ ಎಂಟಿಬಿ ನಾಗರಾಜ್ ಪಿಐ​ ನಂದೀಶ್ ಹಣಕೊಟ್ಟು ಟ್ರಾನ್ಸ್​​ಫರ್​ ಆಗಿದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಬಿಜೆಪಿ ವಿರುದ್ಧ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ಸ್​​ಪೆಕ್ಟರ್​ ನಂದೀಶ್​ ಸಾವಿನ ಬಗ್ಗೆ ಎಂಟಿಬಿ ಮಾತನಾಡಿದ್ದಾರೆ. 70ರಿಂದ 80 ಲಕ್ಷ ಹಣ ಕೊಟ್ಟಿದ್ದಾರೆ ಎಂದು ಎಂಟಿಬಿ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಮೊದಲಿನಿಂದಲೂ ಹೇಳುತ್ತಿದ್ದೆವು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಎಂಟಿಬಿ ಮಾತಿನಿಂದ ಸಾಬೀತಾಗಿದೆ. ಎಂಟಿಬಿ ನಾಗರಾಜ್​ ಮನಸ್ಸಿನಲ್ಲಿ ಇರುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಸಿಎಂಗೆ ತಾಕತ್​ ಇದ್ದರೆ ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಿಸಲಿ, ಎಲ್ಲ ಇಲಾಖೆಗಳ ರೇಟ್​ ಕಾರ್ಡ್​​ ಬಹಿರಂಗಪಡಿಸಿ ಎಂದು ರಾಮಲಿಂಗಾರೆಡ್ಡಿ ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.

70-80 ಲಕ್ಷದ ಬಗ್ಗೆ ಮಾತನಾಡಿದವರ ಬಳಿ ರಾಜೀನಾಮೆ ಪಡೆಯಿರಿ. 70ರಿಂದ 80 ಲಕ್ಷ ಹಣ ಯಾರಿಗೆ ಸೇರಿದೆ ಎಂಬ ಸ್ಪಷ್ಟನೆ ಸಿಗಬೇಕು. ಸಿಎಂ ಅಥವಾ ಗೃಹ ಸಚಿವರಿಗೆ ಹಣ ತಲುಪಿರುವ ಬಗ್ಗೆ ಸ್ಪಷ್ಟನೆ ಸಿಗಲಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ .

Published On - 6:32 pm, Sat, 29 October 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ