AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಸ್ವಚ್ಛ ಬಿಜೆಪಿ ಇಲ್ಲ: ಅವರಿಗೆ ಗೆಲುವು ಬೇಕಷ್ಟೇ, ಯಾವುದೇ ತತ್ವ ಸಿದ್ಧಾಂತವಿಲ್ಲ -ಶ್ರೀರಾಮಸೇನೆ ಮುತಾಲಿಕ್​ ವಾಗ್ದಾಳಿ

Pramod Muthalik: ಗೆಲ್ಲುವವರಿದ್ದರೆ 80 ವರ್ಷದ ಮುದುಕನಿಗೂ ಬಿಜೆಪಿಯವರು ಟಿಕೆಟ್​ ಕೊಡುತ್ತಾರೆ. ಗೆಲ್ಲುವಂತಿದ್ದರೆ ಸೋನಿಯಾ ಗಾಂಧಿಗೂ ಬಿಜೆಪಿ ಟಿಕೆಟ್​ ಕೊಡ್ತಾರೆ. ಬಿಜೆಪಿಯಲ್ಲಿ ಈಗ ಶೇ. 70ರಷ್ಟು ಕಾಂಗ್ರೆಸ್, ಜೆಡಿಎಸ್​ನವರಿದ್ದಾರೆ ಎಂದು ಬಿಜೆಪಿ ವಿರುದ್ಧ ಪ್ರಮೋದ್ ಮುತಾಲಿಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈಗ ಸ್ವಚ್ಛ ಬಿಜೆಪಿ ಇಲ್ಲ: ಅವರಿಗೆ ಗೆಲುವು ಬೇಕಷ್ಟೇ, ಯಾವುದೇ ತತ್ವ ಸಿದ್ಧಾಂತವಿಲ್ಲ -ಶ್ರೀರಾಮಸೇನೆ ಮುತಾಲಿಕ್​ ವಾಗ್ದಾಳಿ
ಈಗ ಸ್ವಚ್ಛ ಬಿಜೆಪಿ ಇಲ್ಲ: ಅವರಿಗೆ ಗೆಲುವು ಬೇಕಷ್ಟೇ, ಯಾವುದೇ ತತ್ವ ಸಿದ್ಧಾಂತವಿಲ್ಲ -ಶ್ರೀರಾಮಸೇನೆ ಮುತಾಲಿಕ್​ ವಾಗ್ದಾಳಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 22, 2022 | 7:15 PM

ಬಾಲಕೋಟೆ: ಬಿಜೆಪಿಯಲ್ಲಿ (BJP) ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡುವುದಿಲ್ಲ ಅಂದ್ರು, ದಿವಂಗತ ಸುರೇಶ್ ಅಂಗಡಿ ಪತ್ನಿಗೆ ಉಪ ಚುನಾವಣೆಯಲ್ಲಿ ಟಿಕೆಟ್​ ನೀಡಿದರು. 75 ವರ್ಷ ತುಂಬಿದವರಿಗೆ ಟಿಕೆಟ್​ ನೀಡುವುದಿಲ್ಲ ಎಂದು ಹೇಳಿದ್ದರು. ಪರಿಷತ್​ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿಗೆ ಟಿಕೆಟ್​ ನೀಡಿದರು. ಒಟ್ನಲ್ಲಿ ಬಿಜೆಪಿಯವರಿಗೆ ಗೆಲ್ಲಬೇಕು ಅಷ್ಟೇ, ಯಾವುದೇ ತತ್ವ ಸಿದ್ಧಾಂತವಿಲ್ಲ ಎಂದು ಬಾಗಲಕೋಟೆಯಲ್ಲಿ ಶ್ರೀರಾಮಸೇನೆ (Sri Ram Sene) ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik)​ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗೆಲ್ಲುವವರಿದ್ದರೆ 80 ವರ್ಷದ ಮುದುಕನಿಗೂ ಬಿಜೆಪಿಯವರು ಟಿಕೆಟ್​ ಕೊಡುತ್ತಾರೆ. ಗೆಲ್ಲುವಂತಿದ್ದರೆ ಸೋನಿಯಾ ಗಾಂಧಿಗೂ ಬಿಜೆಪಿ ಟಿಕೆಟ್​ ಕೊಡ್ತಾರೆ. ಬಿಜೆಪಿಯಲ್ಲಿ ಈಗ ಶೇ. 70ರಷ್ಟು ಕಾಂಗ್ರೆಸ್, ಜೆಡಿಎಸ್​ನವರಿದ್ದಾರೆ. ಕಮ್ಯುನಿಸ್ಟರು ಬಿಜೆಪಿ ಒಳಹೊಕ್ಕಿದ್ದಾರೆ, ಇವರಿಗೆ ಅಧಿಕಾರ ಮುಖ್ಯ. ಈಗ ಸ್ವಚ್ಛ ಬಿಜೆಪಿ ಇಲ್ಲವೆಂದು ಪ್ರಮೋದ್ ಮುತಾಲಿಕ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್​ವೈ ಬಿಜೆಪಿಯನ್ನುಕಟ್ಟಿ ಬೆಳೆಸಿದ ಶ್ರೇಷ್ಠ ವ್ಯಕ್ತಿ:

ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ವಿಚಾರ ಪ್ರಸ್ತಾಪಿಸಿದ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್​ ಬಿಎಸ್​ವೈ ಬಿಜೆಪಿಯನ್ನು ದೊಡ್ಡಮಟ್ಟದಲ್ಲಿ ಕಟ್ಟಿ ಬೆಳೆಸಿದ ಶ್ರೇಷ್ಠ ವ್ಯಕ್ತಿ. ಬಿಜೆಪಿ ಅಂದರೆ ಕೇವಲ ಪಟ್ಟಣ, ಬ್ರಾಹ್ಮಣರ ಪಕ್ಷ ಎಂಬಂತಿತ್ತು. ಬಿಜೆಪಿ ಅಂದರೆ ಕೇವಲ ವಿದ್ಯಾವಂತ​ ಜನರಿಗೆ ಮಾತ್ರ ಎಂಬಂತಿತ್ತು. ಬಿಜೆಪಿಯನ್ನು ಸರ್ವವ್ಯಾಪಿಯಾಗಿ ಬೆಳೆಸಿದಂತಹ ವ್ಯಕ್ತಿ ಯಡಿಯೂರಪ್ಪ. ಮಗನ ಸಲುವಾಗಿ BSY ಎಲ್ಲೋ ಒಂದು ಕಡೆ ಎಡವುತ್ತಿದ್ದಾರೆ ಅನಿಸುತ್ತಿದೆ. ನಾನು ಇದನ್ನು ಬಹಳ ನೋವಿನಿಂದ, ದುಃಖದಿಂದ ಹೇಳುತ್ತಿದ್ದೇನೆ ಎಂದು ಮುತಾಲಿಕ್​ ಹೇಳಿದ್ದಾರೆ.

Published On - 7:03 pm, Fri, 22 July 22

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ