‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು. ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ […]

‘ಬೋಸ್‌ರನ್ನು ಹಿಡಿದುಕೊಡ್ತೇನೆ ಎಂದಿದ್ದ ಗಾಂಧೀಜಿಯನ್ನ ದೇಶದ್ರೋಹಿ ಅನ್ನೋಕಾಗುತ್ತಾ!?’
ಸಾಧು ಶ್ರೀನಾಥ್​

Updated on: Mar 02, 2020 | 2:21 PM

ಬೆಂಗಳೂರು: ಹೆಚ್.ಎಸ್.ದೊರೆಸ್ವಾಮಿ ಹೇಳಿಕೆ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ದೊರೆಸ್ವಾಮಿ ಬಗ್ಗೆ ಬಿಜೆಪಿಗೆ ತುಂಬಾ ಗೌರವವಿದೆ. ಆದ್ರೆ ನಾವು ದೊರೆಸ್ವಾಮಿ ಹಾಗೂ ಯತ್ನಾಳ್ ಹೇಳಿಕೆಯನ್ನು ಸಮರ್ಥಿಸಲ್ಲ ಎಂದರು.

ಪಾಕ್‌ ಪರ ಕೂಗಿದ ಅಮೂಲ್ಯಳನ್ನ ಮೊಮ್ಮಗಳು ಅಂತಾರೆ. ಈ ರೀತಿಯ ಹೇಳಿಕೆಗಳಿಂದ ಅವರು ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ರೆಂಬ ಅನುಮಾನ ಬರುತ್ತೆ. ಅವರು ಈ ರೀತಿಯ ಹೇಳಿಕೆಗಳನ್ನು ಸಮರ್ಥಿಸಿಕೊಂಡರೆ, ನಾವೂ ಶಾಸಕ ಯತ್ನಾಳ್ ಹೇಳಿಕೆ ಸಮರ್ಥಿಸಿಕೊಳ್ಳುತ್ತೇವೆ. ನಮಗೆ ಮಹಾತ್ಮ ಗಾಂಧೀಜಿ, ಸಾವರ್ಕರ್ ಇಬ್ಬರೂ ಒಂದೇ. ಇಬ್ಬರ ಉದ್ದೇಶವೂ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವುದಾಗಿತ್ತು. ಆದ್ರೆ ಅವರಿಬ್ಬರ ಮಾರ್ಗಗಳು ಬೇರೆಯಾಗಿದ್ದವು ಅಷ್ಟೆ.

ಗಾಂಧಿ ಶಾಂತಿ ಮಾರ್ಗವಾದರೆ, ಸಾವರ್ಕರ್ ಕ್ರಾಂತಿ ಮಾರ್ಗದವರು. ಅಂಡಮಾನ್ ಜೈಲಿಗೆ ಹೋಗಿ ಬಂದಿರೋರಿಗೆ ಗೊತ್ತು ಅಲ್ಲಿ ಪರಿಸ್ಥಿತಿಗಳು ಏನು ಎಂದು. ಗಾಂಧೀಜಿ ವೈಭವೀಕರಿಸಿ, ಸಾವರ್ಕರ್‌ ಕಡೆಗಣನೆ ಸರಿಯಲ್ಲ. ಸುಭಾಷ್‌ಚಂದ್ರ ಬೋಸ್‌ರನ್ನು ನಾನು ಹಿಡಿದುಕೊಡುತ್ತೇನೆಂದು ಗಾಂಧೀಜಿಯವರು ಹೇಳಿದ್ರು. ಹಾಗಂತ ಅವರನ್ನು ದೇಶದ್ರೋಹಿ ಎಂದು ಹೇಳಲಾಗುತ್ತಾ? ಅವೆಲ್ಲವೂ ಸಾಂದರ್ಭಿಕ ಅಷ್ಟೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ರು.

 

Published On - 1:25 pm, Mon, 2 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us