AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ. ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ […]

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
TV9 Web
| Edited By: |

Updated on:Jul 30, 2021 | 4:20 PM

Share

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ.

ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ ಸಚಿವರ ಪಟ್ಟಿ ಇದೆ ಎಂದು ತಿಳಿದುಬಂದಿದೆ. ಇಂದು ರಾತ್ರಿ 8 ಗಂಟೆಗೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ಆ ವೇಳೆ ಚರ್ಚೆ ನಡೆಸಿ, ಸಚಿವರ ಪಟ್ಟಿ ಹಸ್ತಾಂತರಿಸುವ ಸಾಧ್ಯತೆಯಿದೆ.

ಈ ಮಧ್ಯೆ,  ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಪ್ರಧಾನಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

Karnataka Breaking News LIVE: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

(bjp high command reportedly finalised karnataka chief minister basavaraj bommai cabinet list)

Published On - 4:08 pm, Fri, 30 July 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು