AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Janaspandana: ಇಂದು ನಡೆಯುವ ಜನಸ್ಪಂದನ ಸಮಾವೇಶಕ್ಕೆ ನೂರಾರು ಬಸ್​ಗಳ ಬುಕ್ಕಿಂಗ್, ಗಣ್ಯಾತಿ ಗಣ್ಯರು ಸಮಾವೇಶದಲ್ಲಿ ಭಾಗಿ

BJP Janaspandana: ಕರ್ನಾಟಕ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುವ ಉದ್ದೇಶದಿಂದ ಬಿಜೆಪಿ ಆಯೋಜಿಸಿದ ಜನಸ್ಪಂದನ ಕಾರ್ಯಕ್ರಮ ಇಂದು ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ.

BJP Janaspandana: ಇಂದು ನಡೆಯುವ ಜನಸ್ಪಂದನ ಸಮಾವೇಶಕ್ಕೆ ನೂರಾರು ಬಸ್​ಗಳ ಬುಕ್ಕಿಂಗ್, ಗಣ್ಯಾತಿ ಗಣ್ಯರು ಸಮಾವೇಶದಲ್ಲಿ ಭಾಗಿ
ಬಿಜೆಪಿ ಜನಸ್ಪಂದನ ಸಮಾವೇಶ
TV9 Web
| Updated By: Rakesh Nayak Manchi|

Updated on:Sep 10, 2022 | 8:13 AM

Share

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದೆ ಇಡುವ ಉದ್ದೇಶದಿಂದ ಆಡಳಿತ ಪಕ್ಷ ಬಿಜೆಪಿ ಇಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬದಲಾಗಿ ಜನಸ್ಪಂದನ ಸಮಾವೇಶ (Janaspandana Samavesha) ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು, ಫಲಾನುಭವಿಗಳನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ. ಇದರ ಭಾಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೆ 50 ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಅಷ್ಟೇ ಅಲ್ಲದೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾಗಿರುವ ಕಾರಣ ಈ ಕಾರ್ಯಕ್ರಮವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಿಂದಲೇ 50ಸಾವಿರ ಜನರನ್ನು ಗುರಿಯಾಗಿಸಿಕೊಂಡಿರುವ ಬಿಜೆಪಿ, ಸಮಾವೇಶಕ್ಕೆ ಜನರನ್ನು ಕರೆ ತರಲು ಟಾರ್ಗೆಟ್ ನಿಗದಿ ಮಾಡಿಕೊಂಡಿದೆ. ಸ್ಥಳಿಯ ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಮುಖಂಡರುಗಳಿಗೆ ಜನರನ್ನು ಕರೆತರುವ ಕಾರ್ಯವನ್ನು ನೀಡಿದೆ. ಸಚಿವರಿಂದ ಈ ಟಾರ್ಗೆಟ್ ನಿಗದಿಯಾಗಿದ್ದು, ಪ್ರತಿಯೊಂದು ಹಳ್ಳಿ ಹಳ್ಳಿಗಳಿಂದ ಜನರನ್ನು ಕರೆ ತರುವಂತೆ ಸೂಚಿಸಲಾಗಿದೆ. ಅದರಂತೆ ಆಯಾ ಹಳ್ಳಿಗಳಿಗೆ ರಾತ್ರಿಯೇ ಬಸ್​ಗಳನ್ನು ಕಳುಹಿಸಲಾಗಿದ್ದು, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್​ಗಳ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೇ 50ಸಾವಿರ ಜನರನ್ನು ಸಮಾವೇಶಕ್ಕೆ ಕರೆತರುವ ಪ್ಲಾನ್ ಹಾಕಿಕೊಳ್ಳಲಾಗಿದ್ದು, 876 ಬಸ್​ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶ ನಡೆಯುವ ಹಿನ್ನೆಲೆ ಸಮಾವೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಓರ್ವ ಡಿವೈಎಸ್​​ಪಿ, ನಾಲ್ವರು ಇನ್ಸ್​ಪೆಕ್ಟರ್​, 13 ಪಿಎಸ್​ಐ, 23 ಎಎಸ್​ಐ ಹಾಗೂ 150 ಪೊಲೀಸ್​ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಯಾರೆಲ್ಲ ಸಮಾವೇಶಕ್ಕೆ ಭಾಗಿಯಾಗಲಿದ್ದಾರೆ?

ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇನ್ನಿತರರ ಸಚಿವರುಗಳು ಭಾಗವಹಿಸಲಿದ್ದಾರೆ.

ಆರು ಸಚಿವರು ಸಮಾವೇಶಕ್ಕೆ ಗೈರು

ಇಂದು ಜನಸ್ಪಂದನ ಸಮಾವೇಶಕ್ಕೆ ಸಚಿವರುಗಳಾದ ವಿ. ಸೋಮಣ್ಣ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಹಾಲಪ್ಪ ಆಚಾರ್ ಮತ್ತು ಶಂಕರ ಪಾಟೀಲ್ ಮುನೇನಕೊಪ್ಪ ಗೈರು ಅವರು ಗೈರಾಗಲಿದ್ದಾರೆ. ಸೋಮಣ್ಣ ಅವರು ಚಾಮರಾಜನಗರ ಜಿಲ್ಲಾ ಪ್ರಚಾರದಲ್ಲಿದ್ದು, ನಿರಾಣಿ ಅಮೆರಿಕಾ ಜಿಮ್ ರೋಡ್ ಶೋ ಕಾರ್ಯಕ್ರಮದಲ್ಲಿ, ಸುನಿಲ್ ಕುಮಾರ್ ಮಂಗಳೂರಿನಲ್ಲಿ ನಡೆಯುವ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಹೈದರಾಬಾದ್​ನಲ್ಲಿ ರಾಷ್ಟ್ರೀಯ ಗಣಿ ಸಚಿವರ ಸಮ್ಮೇಳನಲ್ಲಿ ಇರುವ ಹಿನ್ನೆಲೆ ಗೈರಾಗಲಿದ್ದಾರೆ. ಇನನ್ನು ಹಾಲಪ್ಪ ಆಚಾರ್ ಅವರು ಪೂರ್ವ ನಿಗದಿತ ಕಾರ್ಯಕ್ರಮದ ಕಾರಣ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ.

ರಾರಾಜಿಸುತ್ತಿದೆ ಬಿಜೆಪಿ ಧ್ವಜ, ಘಟಾನುಘಟಿಗಳ ಬ್ಯಾನರ್

ಸಮಾವೇಶದ ಹಿನ್ನಲೆ ದಾರಿಯುದ್ದಕ್ಕೂ ಬಿಜೆಪಿ ಭಾವುಟ ಹಾಗೂ ಘಟಾನುಘಟಿ ನಾಯಕರ ಬ್ಯಾನರ್​ಗಳು ರಾರಾಜಿಸುತ್ತಿವೆ. ಯಲಹಂಕದಿಂದ ದೊಡ್ಡಬಳ್ಳಾಪುರದವರೆಗೂ ಬ್ಯಾನರ್​ಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ಜೆಪಿ ನಡ್ಡಾ, ಡಾ.ಕೆ ಸುಧಾಕರ್, ಎಸ್.ಆರ್ ವಿಶ್ವನಾಥ್, ನಳೀನ್ ಕುಮಾರ್ ಕಟೀಲ್, ಎಂಟಿಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ನಾಯಕರ ಫೋಟೋವುಳ್ಳ ಬ್ಯಾನರ್​ಗಳನ್ನು ಹಾಕಲಾಗಿದೆ. ಆದರೆ ಈ ಹಿಂದೆ ಜನೋತ್ಸವಕ್ಕೆಂದೇ ಸಿದ್ಧಪಡಿಸಿದ್ದ ಬ್ಯಾನರ್​ಗಳನ್ನೇ ಹಾಕಲಾಗಿದೆ.

ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ಪಕ್ಷ ತೊರೆದ ಮಾಜಿ ಎಂಎಲ್​ಸಿ ಎಂ.ಡಿ.ಲಕ್ಷ್ಮೀನಾರಾಯಣ ಅವರು ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಸಮಾವೇಶದ ಸಂದರ್ಭದಲ್ಲಿ ಗಣ್ಯರ ಸಮ್ಮುಖದಲ್ಲಿಯೇ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್ ಕುಮಾರ್ ಅವರು ಕೂಡ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇವರು ಇತ್ತೀಚೆಗಷ್ಟೇ ಸೇವೆಯಿಂದ ನಿವೃತ್ತಿ ಹೊಂದಿದ್ದರು.

ಯಾರೆಲ್ಲ ಭಾಷಣ ಮಾಡಲಿದ್ದಾರೆ?

ಜನಸ್ಪಂದನ ಸಮಾವೇಶದಲ್ಲಿ ಬೆಳಗ್ಗೆ 11.30ಕ್ಕೆ ಬಿಜೆಪಿ ನಾಯಕರು ಮತ್ತು ಸಚಿವರ ಭಾಷಣ ಆರಂಭಗೊಳ್ಳಲಿದೆ. ಮಧ್ಯಾಹ್ನ 12.50ಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಭಾಷಣ ಆರಂಭಗೊಳ್ಳಲಿದ್ದು, ನಂತರ ಮಾಜಿ ಸಿಎಂ ಯಡಿಯೂರಪ್ಪ, ಅನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡಲಿದ್ದಾರೆ. ಸಮಾವೇಶದ ಕೊನೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಭಾಷಣ ನಿಗದಿಯಾಗಿದೆ.

Published On - 8:12 am, Sat, 10 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!