AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್
ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ
ಕಿರಣ್​ ಹನಿಯಡ್ಕ
| Edited By: |

Updated on: Sep 09, 2023 | 9:35 AM

Share

ಬೆಂಗಳೂರು, ಸೆ.9: ಲೋಕಸಭೆ ಚುನಾವಣೆಗೆ (Loka Sabha Elections) ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಆದರೆ, ಜೆಡಿಎಸ್ ಕೇಳಿದಷ್ಟು ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ರಾಜ್ಯ ನಾಯಕರು ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ಕನಿಷ್ಠ 2 ಹಾಗೂ ಗರಿಷ್ಠ 3 ಸೀಟುಗಳನ್ನು ಮಾತ್ರ ಬಿಟ್ಟು ಕೊಡಲು ಒಲವು ಹೊಂದಿದ್ದಾರೆ. ಆದರೆ, ಮೈತ್ರಿ ಯಶಸ್ವಿಯಾಗಬೇಕಾದರೆ ಸೀಟುಗಳ ಹಂಚಿಕೆಯಲ್ಲಿ ತೃಪ್ತಿ ತರಬೇಕು. ಒಂದೊಮ್ಮೆ ಹೆಚ್ಚಿನ ಸ್ಥಾನಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟರೆ ಏನು ಮಾಡೋದು ಎಂಬ ಚಿಂತೆ ಬಿಜೆಪಿ ನಾಯಕರನ್ನು ಕಾಡಿದೆ.

ಹೆಚ್ಚಿನ ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹೇರುವ ಸಾಧ್ಯತೆ ಹಿನ್ನೆಲೆ ಬಿಜೆಪಿ ಮೆಗಾ ಪ್ಲಾನ್ ಹಾಕಿಕೊಂಡಿದೆ. ಜೆಡಿಎಸ್ ಕೇಳಿದಷ್ಟು ಐದಾರು ಕ್ಷೇತ್ರಗಳನ್ನು ನೇರವಾಗಿ ಬಿಟ್ಟುಕೊಡಲು ಸಿದ್ದವಿಲ್ಲದ ರಾಜ್ಯ ಬಿಜೆಪಿ ನಾಯಕರು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸುವ ಫಾರ್ಮುಲಾ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ, ಶಾ ರವಾನಿಸಿದ ಮಾಹಿತಿ ಬಿಚ್ಚಿಟ್ಟ ಯಡಿಯೂರಪ್ಪ

ಸದ್ಯ, ಮೂರು ಕ್ಷೇತ್ರಗಳನ್ನ ಕಮಲ ದಳ ನಾಯಕರು ಸರಿ ಮಾಡಿಕೊಂಡಿದ್ದಾರೆ. ಮಂಡ್ಯ ಲೋಕಾಸಭಾ ಕ್ಷೇತ್ರದ ಎರಡು ಕ್ಷೇತ್ರಗಳು ಮಾತ್ರ ಕಗ್ಗಾಂಟಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮಾತುಕತೆ ಆಗಿದ್ದು, ಇಲ್ಲಿ ಜೆಡಿಎಸ್ ಸ್ಪರ್ಧೆ ಖಚಿತವಾಗಿದೆ. ಇದರ ಜೊತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರದ ಬಗ್ಗೆ ಜೆಡಿಎಸ್ ಒಲವು ಹೊಂದಿದೆ.

ಆದರೆ, ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತಿಳಿಸಿಲ್ಲ. ಮಂಡ್ಯದಲ್ಲಿ ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ಘೋಷಣೆ ಮಾಡಿದ್ದಾರೆ. ಹಾಗಾಗಿ ಸುಮಲತಾಗೆ ಪರಿಯಾಯ ಕ್ಷೇತ್ರ ನೀಡಿದರೆ ಮಂಡ್ಯ ಜೆಡಿಎಸ್​ಗೆ ಸಿಗಬಹುದು.

ಆದರೆ, ತುಮಕೂರಿನಲ್ಲಿ ಬಿಜೆಪಿ ಸಂಸದ ಇದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಟ್ಟರೆ ಕ್ಷೇತ್ರ ಕಾಂಗ್ರೆಸ್ ಪಾಲು ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ