AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್
ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on: Sep 09, 2023 | 9:35 AM

Share

ಬೆಂಗಳೂರು, ಸೆ.9: ಲೋಕಸಭೆ ಚುನಾವಣೆಗೆ (Loka Sabha Elections) ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಆದರೆ, ಜೆಡಿಎಸ್ ಕೇಳಿದಷ್ಟು ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ರಾಜ್ಯ ನಾಯಕರು ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ಕನಿಷ್ಠ 2 ಹಾಗೂ ಗರಿಷ್ಠ 3 ಸೀಟುಗಳನ್ನು ಮಾತ್ರ ಬಿಟ್ಟು ಕೊಡಲು ಒಲವು ಹೊಂದಿದ್ದಾರೆ. ಆದರೆ, ಮೈತ್ರಿ ಯಶಸ್ವಿಯಾಗಬೇಕಾದರೆ ಸೀಟುಗಳ ಹಂಚಿಕೆಯಲ್ಲಿ ತೃಪ್ತಿ ತರಬೇಕು. ಒಂದೊಮ್ಮೆ ಹೆಚ್ಚಿನ ಸ್ಥಾನಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟರೆ ಏನು ಮಾಡೋದು ಎಂಬ ಚಿಂತೆ ಬಿಜೆಪಿ ನಾಯಕರನ್ನು ಕಾಡಿದೆ.

ಹೆಚ್ಚಿನ ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹೇರುವ ಸಾಧ್ಯತೆ ಹಿನ್ನೆಲೆ ಬಿಜೆಪಿ ಮೆಗಾ ಪ್ಲಾನ್ ಹಾಕಿಕೊಂಡಿದೆ. ಜೆಡಿಎಸ್ ಕೇಳಿದಷ್ಟು ಐದಾರು ಕ್ಷೇತ್ರಗಳನ್ನು ನೇರವಾಗಿ ಬಿಟ್ಟುಕೊಡಲು ಸಿದ್ದವಿಲ್ಲದ ರಾಜ್ಯ ಬಿಜೆಪಿ ನಾಯಕರು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸುವ ಫಾರ್ಮುಲಾ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ, ಶಾ ರವಾನಿಸಿದ ಮಾಹಿತಿ ಬಿಚ್ಚಿಟ್ಟ ಯಡಿಯೂರಪ್ಪ

ಸದ್ಯ, ಮೂರು ಕ್ಷೇತ್ರಗಳನ್ನ ಕಮಲ ದಳ ನಾಯಕರು ಸರಿ ಮಾಡಿಕೊಂಡಿದ್ದಾರೆ. ಮಂಡ್ಯ ಲೋಕಾಸಭಾ ಕ್ಷೇತ್ರದ ಎರಡು ಕ್ಷೇತ್ರಗಳು ಮಾತ್ರ ಕಗ್ಗಾಂಟಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮಾತುಕತೆ ಆಗಿದ್ದು, ಇಲ್ಲಿ ಜೆಡಿಎಸ್ ಸ್ಪರ್ಧೆ ಖಚಿತವಾಗಿದೆ. ಇದರ ಜೊತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರದ ಬಗ್ಗೆ ಜೆಡಿಎಸ್ ಒಲವು ಹೊಂದಿದೆ.

ಆದರೆ, ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತಿಳಿಸಿಲ್ಲ. ಮಂಡ್ಯದಲ್ಲಿ ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ಘೋಷಣೆ ಮಾಡಿದ್ದಾರೆ. ಹಾಗಾಗಿ ಸುಮಲತಾಗೆ ಪರಿಯಾಯ ಕ್ಷೇತ್ರ ನೀಡಿದರೆ ಮಂಡ್ಯ ಜೆಡಿಎಸ್​ಗೆ ಸಿಗಬಹುದು.

ಆದರೆ, ತುಮಕೂರಿನಲ್ಲಿ ಬಿಜೆಪಿ ಸಂಸದ ಇದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಟ್ಟರೆ ಕ್ಷೇತ್ರ ಕಾಂಗ್ರೆಸ್ ಪಾಲು ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!