ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಮತ್ತಷ್ಟು ಸೀಟ್​ಗಳಿಗಾಗಿ ಜೆಡಿಎಸ್ ಒತ್ತಡ ಸಾಧ್ಯತೆ, ಬಿಜೆಪಿಯಿಂದ ಮೆಗಾ ಪ್ಲಾನ್
ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ
Follow us
| Updated By: Rakesh Nayak Manchi

Updated on: Sep 09, 2023 | 9:35 AM

ಬೆಂಗಳೂರು, ಸೆ.9: ಲೋಕಸಭೆ ಚುನಾವಣೆಗೆ (Loka Sabha Elections) ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ (BJP JDS Alliance) ಮಾತುಕತೆ ನಡೆಯುತ್ತಿದೆ. ಜೆಡಿಎಸ್​ಗೆ ನಾಲ್ಕು ಸೀಟು ಬಿಟ್ಟು ಕೊಡಲು ಅಮಿತ್ ಶಾ ಹೇಳಿದ್ದಾಗಿ ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗಪಡಿಸಿದ್ದಾರೆ. ಒಂದೊಮ್ಮೆ ಈ ಮೈತ್ರಿ ಮಾತುಕತೆ ಯಶಸ್ವಿಯಾದರೆ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದೇ ಒಂದು ಸೀಟು ಗೆಲ್ಲದಂತೆ ಮಾಡಲು ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಾಗಿದೆ.

ಆದರೆ, ಜೆಡಿಎಸ್ ಕೇಳಿದಷ್ಟು ಸೀಟುಗಳನ್ನು ಬಿಟ್ಟುಕೊಡಲು ಬಿಜೆಪಿ ರಾಜ್ಯ ನಾಯಕರು ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ಕನಿಷ್ಠ 2 ಹಾಗೂ ಗರಿಷ್ಠ 3 ಸೀಟುಗಳನ್ನು ಮಾತ್ರ ಬಿಟ್ಟು ಕೊಡಲು ಒಲವು ಹೊಂದಿದ್ದಾರೆ. ಆದರೆ, ಮೈತ್ರಿ ಯಶಸ್ವಿಯಾಗಬೇಕಾದರೆ ಸೀಟುಗಳ ಹಂಚಿಕೆಯಲ್ಲಿ ತೃಪ್ತಿ ತರಬೇಕು. ಒಂದೊಮ್ಮೆ ಹೆಚ್ಚಿನ ಸ್ಥಾನಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟರೆ ಏನು ಮಾಡೋದು ಎಂಬ ಚಿಂತೆ ಬಿಜೆಪಿ ನಾಯಕರನ್ನು ಕಾಡಿದೆ.

ಹೆಚ್ಚಿನ ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹೇರುವ ಸಾಧ್ಯತೆ ಹಿನ್ನೆಲೆ ಬಿಜೆಪಿ ಮೆಗಾ ಪ್ಲಾನ್ ಹಾಕಿಕೊಂಡಿದೆ. ಜೆಡಿಎಸ್ ಕೇಳಿದಷ್ಟು ಐದಾರು ಕ್ಷೇತ್ರಗಳನ್ನು ನೇರವಾಗಿ ಬಿಟ್ಟುಕೊಡಲು ಸಿದ್ದವಿಲ್ಲದ ರಾಜ್ಯ ಬಿಜೆಪಿ ನಾಯಕರು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸುವ ಫಾರ್ಮುಲಾ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ, ಶಾ ರವಾನಿಸಿದ ಮಾಹಿತಿ ಬಿಚ್ಚಿಟ್ಟ ಯಡಿಯೂರಪ್ಪ

ಸದ್ಯ, ಮೂರು ಕ್ಷೇತ್ರಗಳನ್ನ ಕಮಲ ದಳ ನಾಯಕರು ಸರಿ ಮಾಡಿಕೊಂಡಿದ್ದಾರೆ. ಮಂಡ್ಯ ಲೋಕಾಸಭಾ ಕ್ಷೇತ್ರದ ಎರಡು ಕ್ಷೇತ್ರಗಳು ಮಾತ್ರ ಕಗ್ಗಾಂಟಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮಾತುಕತೆ ಆಗಿದ್ದು, ಇಲ್ಲಿ ಜೆಡಿಎಸ್ ಸ್ಪರ್ಧೆ ಖಚಿತವಾಗಿದೆ. ಇದರ ಜೊತೆಗೆ ಮಂಡ್ಯ ಮತ್ತು ತುಮಕೂರು ಕ್ಷೇತ್ರದ ಬಗ್ಗೆ ಜೆಡಿಎಸ್ ಒಲವು ಹೊಂದಿದೆ.

ಆದರೆ, ಬಿಜೆಪಿ ವರಿಷ್ಠರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತಿಳಿಸಿಲ್ಲ. ಮಂಡ್ಯದಲ್ಲಿ ಹಾಲಿ ಸಂಸದೆ ಸುಮಲತಾ ಬಿಜೆಪಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ಘೋಷಣೆ ಮಾಡಿದ್ದಾರೆ. ಹಾಗಾಗಿ ಸುಮಲತಾಗೆ ಪರಿಯಾಯ ಕ್ಷೇತ್ರ ನೀಡಿದರೆ ಮಂಡ್ಯ ಜೆಡಿಎಸ್​ಗೆ ಸಿಗಬಹುದು.

ಆದರೆ, ತುಮಕೂರಿನಲ್ಲಿ ಬಿಜೆಪಿ ಸಂಸದ ಇದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್​ಗೆ ಕ್ಷೇತ್ರ ಬಿಟ್ಟು ಕೊಟ್ಟರೆ ಕ್ಷೇತ್ರ ಕಾಂಗ್ರೆಸ್ ಪಾಲು ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ