AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ರಾಜ್ಯಪಾಲರನ್ನ ಭೇಟಿಯಾದ BJP,JDS​​ ಶಾಸಕರು: ಇತ್ತ ಥೀಮ್ ಪಾರ್ಕ್ ಅವ್ಯವಹಾರ SITಗೆ ನೀಡುವಂತೆ ಸಿಎಂಗೆ ಮನವಿ

ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಇಂದು ರಾಜ್ಯಪಾಲ ಥಾವರ್​​ ಚಂದ್​ ಗೆಹ್ಲೋಟ್​ರನ್ನು ಭೇಟಿ ಮಾಡಿದ್ದು, ಕೆಕೆಆರ್ ಡಿಬಿ ವತಿಯಿಂದ ಶಾಸಕರುಗಳಿಗೆ ಆಗುತ್ತಿರುವ ತಾರತಮ್ಯದ ಬಗ್ಗೆ ಶಾಸಕರ ನಿಯೋಗ ಪತ್ರ ನೀಡಲಿದೆ. ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಕೇಸ್​ ತನಿಖೆಗೆ SIT ರಚಿಸುವಂತೆ ಸಿಎಂಗೆ ಕಾಂಗ್ರೆಸ್​ ನಿಯೋಗ ಮನವಿ ಮಾಡಿದೆ.

ಅತ್ತ ರಾಜ್ಯಪಾಲರನ್ನ ಭೇಟಿಯಾದ BJP,JDS​​ ಶಾಸಕರು: ಇತ್ತ ಥೀಮ್ ಪಾರ್ಕ್ ಅವ್ಯವಹಾರ SITಗೆ ನೀಡುವಂತೆ ಸಿಎಂಗೆ ಮನವಿ
ಅತ್ತ ರಾಜ್ಯಪಾಲರನ್ನ ಭೇಟಿಯಾದ BJP,JDS​​ ಶಾಸಕರು: ಇತ್ತ ಥೀಮ್ ಪಾರ್ಕ್ ಅವ್ಯವಹಾರ SITಗೆ ನೀಡುವಂತೆ ಸಿಎಂಗೆ ಮನವಿ
ಕಿರಣ್​ ಹನಿಯಡ್ಕ
| Edited By: |

Updated on: Jul 23, 2024 | 6:12 PM

Share

ಬೆಂಗಳೂರು, ಜುಲೈ 23: ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ (R Ashoka) ನೇತೃತ್ವದಲ್ಲಿ ಇಂದು ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ-ಜೆಡಿಎಸ್ (BJP-JDS)​​ ಶಾಸಕರ ನಿಯೋಗದಿಂದ ರಾಜ್ಯಪಾಲರ ಥಾವರ್​​ ಚಂದ್​ ಗೆಹ್ಲೋಟ್ ಅವರನ್ನು​ ಭೇಟಿ ಮಾಡಿದ್ದಾರೆ. ರಾಜಭವನದಲ್ಲಿ ಭೇಟಿ ಮಾಡಿರುವ ಶಾಸಕರ ನಿಯೋಗ ಕೆಕೆಆರ್​​ಡಿಬಿಯಿಂದ 2 ಪಕ್ಷಗಳ ಶಾಸಕರಿಗೆ ಆಗುತ್ತಿರುವ ತಾರತಮ್ಯ ಬಗ್ಗೆ ರಾಜ್ಯಪಾಲರಿಗೆ ಪತ್ರ ನೀಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಿರುದ್ಧ ಎಫ್​​ಐಆರ್ ದಾಖಲಾದ ಹಿನ್ನೆಲೆ ರಾಜ್ಯಪಾಲರಿಗೆ ಬಿಜೆಪಿ ನಾಯಕರು ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!

ED ವಿರುದ್ಧ ದೂರು ನೀಡಿ ತನಿಖೆ ದಿಕ್ಕು ತಪ್ಪಿಸಲು ಯತ್ನ ಆರೋಪ ಮಾಡಿದ್ದು, ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡುಕೊಳ್ಳುತ್ತಿದೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಸಾಧ್ಯತೆ ಕೂಡ ಇದೆ.

ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಆರೋಪ: SIT ರಚಿಸುವಂತೆ ಸಿಎಂಗೆ ಮನವಿ

ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಿರ್ಮಾಣವಾಗುತ್ತಿರುವ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರ ಆರೋಪ ಪ್ರಕರಣದಲ್ಲಿ ತನಿಖೆಗೆ ಎಸ್​​ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದ ನಿಯೋಗದಿಂದ ಮನವಿ ಮಾಡಲಾಗಿದೆ. ಈ ವೇಳೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್​ ಮುಖಂಡರು ಸಾಥ್ ನೀಡಿದರು.

ವಾಲ್ಮೀಕಿ ನಿಗಮ ಹಗರಣದ ಕಿಚ್ಚು, ಇಂದು ಸದನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನಪರಿಷತ್ ಒಳಗೂ ಇಡಿ ವಿರುದ್ಧ ನಿರ್ಣಯ ಕೈಗೊಳ್ಳುವ ಮಹತ್ವದ ಹೆಜ್ಜೆ ಒಂದನ್ನು ಇಟ್ಟಿದ್ದಾರೆ. ವಿಧಾನಪರಿಷತ್ ಒಳಗೂ ಇಡಿ ಅಧಿಕಾರಿಗಳ ವಿರುದ್ಧದ ಪ್ರಕರಣ ಸದ್ದು ಮಾಡಿದೆ. ನಿಯಮ 68 ರ ಅಡಿ ಚರ್ಚೆಗೆ ಅವಕಾಶ ನೀಡಬೇಕು ಅಂತ ಕಾಂಗ್ರೆಸ್​ ಸದಸ್ಯ ಯುಬಿ ವೆಂಕಟೇಶ್​, ಸಭಾಪತಿ ಹೊರಟ್ಟಿಗೆ ಲಿಖಿತ ಮನವಿ ಸಲ್ಲಿಸಿದರು. ಆದರೆ ಸಭಾಪತಿ ಹೊರಟ್ಟಿ ತಮ್ಮ ವಿವೇಚನಾ ಅಧಿಕಾರ ಬಳಸಿ ನಿಯಮಗಳ ಅಡಿ ಚರ್ಚೆಗೆ ಅವಕಾಶ ನೀಡಲಿಲ್ಲ, ಇದರಿಂದ ವಿಧಾನ ಪರಿಷತ್ ಒಳಗೂ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ದೊಡ್ಡ ಗದ್ದಲವೇ ನಡೆಯಿತು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಅಧಿಕಾರಿಗೆ ಒತ್ತಡ ಹೇರಿರುವ ಆರೋಪ, ಇಬ್ಬರು ಇಡಿ ಆಫೀಸರ್​ ವಿರುದ್ಧ ಎಫ್​ಐಆರ್​

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ನಡೆಸುತ್ತಿರುವ  ಇಡಿ ಅಧಿಕಾರಿಗಳ ವಿರುದ್ಧ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ಜಂಟಿ ನಿರ್ದೇಶಕ ಕಲ್ಲೇಶ್​ ದೂರು ನೀಡಿದ್ದರು. ವಿಲ್ಸನ್ ಗಾರ್ಡನ್ ಠಾಣೆಗೆ ವರ್ಗಾವಣೆ ಬಳಿಕ ಎಫ್​ಐಆರ್​​ ಕೂಡ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್