ಮತ್ತೆ ಮಹಾನಾಯಕನ ಪ್ರಸ್ತಾಪ; ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಬಿಜೆಪಿ ಕರ್ನಾಟಕ ಮಹಾ ಪ್ರಶ್ನೆ

| Updated By: ಸಾಧು ಶ್ರೀನಾಥ್​

Updated on: Mar 27, 2021 | 12:51 PM

ರಾಜಕಾರಣದಲ್ಲಿ ಅತಿಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಪಕ್ಷಕ್ಕೆ ಬದ್ಧತೆ ಎನ್ನುವುದು ಇದ್ದರೆ ಮಹಾನಾಯಕ ರಾಜೀನಾಮೆ ಪಡೆಯಲಿ ಎಂದು ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಮತ್ತೆ ಮಹಾನಾಯಕನ ಪ್ರಸ್ತಾಪ; ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಬಿಜೆಪಿ ಕರ್ನಾಟಕ ಮಹಾ ಪ್ರಶ್ನೆ
ಬಿಜೆಪಿ ಧ್ವಜ
Follow us on

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಷಡ್ಯಂತ್ರದ ಹಿಂದೆ ಮಹಾನಾಯಕನ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಇತರ ಆರೋಪಿಗಳಂತೆ ಮಹಾನಾಯಕನೂ ಆರೋಪಿಯಲ್ಲವೇ? ರಾಜಕಾರಣದಲ್ಲಿ ಅತಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಪಕ್ಷಕ್ಕೆ ಬದ್ಧತೆ ಎನ್ನುವುದು ಇದ್ದರೆ ಮಹಾನಾಯಕ ರಾಜೀನಾಮೆ ಪಡೆಯಲಿ (#DKShiMustResign) ಎಂದು ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಈ ಮಧ್ಯೆ ಬೆಂಗಳೂರಿನ ಹೊರವಲಯದಲ್ಲಿ ಸಿಡಿ ಯುವತಿ ಪತ್ತೆಯಾಗಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಉದ್ಯಮಿ ಶಿವಕುಮಾರ್ ಅವರ ಕಾರು ಚಾಲಕ ಪರಶಿವ ಮೂರ್ತಿ ಜೊತೆಯಲ್ಲಿ ಸಿಡಿಯಲ್ಲಿರುವ ಯುವತಿ ಇದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಇನ್ನು ಸಿಡಿ ಗ್ಯಾಂಗ್​ನ ನರೇಶ್ ಗೌಡ, ಶ್ರವಣ್ ಉತ್ತರ ಭಾರತದ ಭಾಗದಲ್ಲಿರುವ ಬಗ್ಗೆ ಮಾಹಿತಿ ಬಂದಿದ್ದು, ಬೆಂಗಳೂರಿನ ಹೊರಭಾಗದಿಂದಲೇ ಇಂದು ಯುವತಿ ವಿಡಿಯೋ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

ಆರೋಪಿ ಜಾರಕಿಹೊಳಿ ಗೂಳಿ ಥರಾ ಓಡಾಡಿಕೊಂಡಿದ್ದಾನೆ. ತಕ್ಷಣ ಆತನನ್ನು ಅರೆಸ್ಟ್ ಮಾಡಿ: ಸಿಡಿ ಯುವತಿ ಪರ ವಕೀಲ ಎಫ್ ಬಿ ಲೈವ್ ಮೂಲಕ ಆಗ್ರಹ

Published On - 12:49 pm, Sat, 27 March 21