AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಗಿಲೆದ್ದ ಆಕ್ರೋಶ: ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!

ನಾನು ಗೃಹ ಸಚಿವನಾಗಿದ್ದಾಗ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಬಜರಂಗದಳದ ವಿರುದ್ಧ ಗೂಂಡಾ ಕಾಯ್ದೆ ಕೇಸ್ ಹಾಕಿಸಿದ್ದೆ ಎಂದು ಹೇಳಿಕೊಂಡಿದ್ದ ಆರ್ ಅಶೋಕ್​ಗೆ ಈಗ ಅದೇ ತಿರುಗುಬಾಣವಾಗಿದೆ. ತಮ್ಮ ಕಾರ್ಯವೈಖರಿಯನ್ನು ಹೇಳಿಕೊಳ್ಳುವ ಮೂಲಕ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಕೆಂಗಣ್ಣಿಗೆ ಗುರಿಯಾಗಿದ್ದು, ಇದೀಗ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅಶೋಕ್​, ಹಿಂದೂ ಸಂಘಟನೆಗಳ ಮುಂದೆ ಮಂಡಿಯೂರಿದ್ದಾರೆ.

ಭುಗಿಲೆದ್ದ ಆಕ್ರೋಶ: ಕೊನೆಗೂ ಬಜರಂಗದಳ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ ಅಶೋಕ್​​!
ಆರ್​ ಅಶೋಕ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 22, 2024 | 8:48 PM

ಬೆಂಗಳೂರು, (ಫೆಬ್ರವರಿ 22): ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳ (bajrang dal)ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ಹಾ (Rowdy Sheet) ಕಿಸಿದ್ದೆ ಎನ್ನುವ ವಿಪಕ್ಷ ನಾಯಕ ಆರ್​ ಅಶೋಕ್ (R Ashok)​ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಕೆಂಡಾಮಂಡಲವಾಗಿದ್ದು, ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್​ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪತ್ರ ಬರೆದು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಆರ್​ ಅಶೋಕ್​, ಬಜರಂಗ ದಳದ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆಶೋಕ್, ರಾಮನಗರದ ವಕೀಲರು ಜ್ಞಾನವಾಪಿ ದೇಗುಲ ಬಗ್ಗೆ ಪೋಸ್ಟ್ ಮಾಡಿದ್ರು. ಆ ವಿಚಾರವಾಗಿ ಪ್ರಸ್ತಾಪಿಸಿದ್ದೆ, ಮುಸ್ಲಿಮರು ಅಂತಾ ಓಲೈಕೆ ಮಾಡಬೇಡಿ. ಬಜರಂಗ ದಳ ಕಾರ್ಯಕರ್ತರ ಮೇಲೆ ಗೂಂಡಾಕಾಯ್ದೆ ಹಾಕಿಸಿದ್ದೆ ಎಂದೆ. ಬಜರಂಗ ದಳ, ಹಿಂದೂ ಕಾರ್ಯಕರ್ತರಿಗೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ. ನಾನು ಕೂಡ 10 ವರ್ಷ ಬಜರಂಗ ದಳದಲ್ಲೇ ಇದ್ದವನು ಎಂದು ಹೇಳಿದರು. ಈ ಮೂಲಕ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ಮುಂದೆ ಮಂಡಿಯೂರಿದರು.

ಇದನ್ನೂ ಓದಿ: ದಿಲ್ಲಿಯಿಂದ ಬೆಂಗಳೂರಿಗೆ ಕುಮಾರಸ್ವಾಮಿ ವಾಪಸ್: ಸೀಟು ಹಂಚಿಕೆ ಬಗ್ಗೆ ಹೇಳಿದ್ದಿಷ್ಟು

ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದ ಬಜರಂಗದಳ

ನಾನು ಗೃಹಸಚಿವನಾಗಿದ್ದಾಗ ಬಜರಂಗದಳದ ವಿರುದ್ಧ ಗೂಂಡಾ ಕಾಯ್ದೆ ಕೇಸ್ ಹಾಕಿಸಿದ್ದೆ ಎನ್ನುವ ಹೇಳಿಕೆಯಿಂದ ಅಶೋಕ್ ವಿರುದ್ಧ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದ್ದು, sಆರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಬಜರಂಗದಳ ಒತ್ತಾಯಿಸಿತ್ತು. ಅಲ್ಲದೇ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ, ಆರ್.ಅಶೋಕ್​ರನ್ನು ವಿಪಕ್ಷ ನಾಯಕ ಸ್ಥಾನದಿಂದ ತೆಗೆದುಹಾಕುವಂತೆ ಒತ್ತಾಯಿಸಿದೆ. ಅಲ್ಲದೇ ಆರ್.ಅಶೋಕ್ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು.

ಅಶೋಕ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಶರಣ್ ಪಂಪ್‌ವೆಲ್

ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಹಿಂದೂ ಸಂಘಟನೆ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಅಂತ ಹೇಳಿದ್ದಾರೆ. ವಿಹೆಚ್‌ಪಿ ಇದನ್ನ ಬಲವಾಗಿ ಖಂಡಿಸುತ್ತೆ. ಗೋ ಮಾತೆ, ಮಹಿಳೆಯರ ಪರ ಕೆಲಸ ಮಾಡೋ ಸಂಘಟನೆ. ಅಂತ‌ ಸಂಘಟನೆ ಮೇಲೆ ಗೂಂಡಾ ಕಾಯ್ದೆ ಹಾಕಿರೋದಾಗಿ ಹೇಳಿದ್ದು ಮನಸ್ಸಿಗೆ ಬೇಸರ ಆಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರಿಗೆ ದೂರು ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅಶೋಕ್ ಅವರನ್ನ ವಿಪಕ್ಷ ನಾಯಕರ ಸ್ಥಾನದಿಂದ ತೆಗೆಯಬೇಕು. ಅವರ ವಿರುದ್ಧ ಶಿಸ್ತು ಕ್ರಮ ಆಗಬೇಕು ಎಂದು ಆಗ್ರಹಿಸಿದರು.

ಅಶೋಕ್ ನಮ್ಮದೇ ವೈಚಾರಿಕ ಇರೋ ಪಕ್ಷದವರು. ಅವರ ಸಮರ್ಥನೆ ಸರಿಯಲ್ಲ. ಹಿಂದೂ ವಿರೋಧಿ ಹೇಳಿಕೆ ಸರಿಯಲ್ಲ. ಶಿಕ್ಷಕಿ ಮೇಲೆ ಕ್ರಮ ತೆಗೆದುಕೊಳ್ಳೋ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅದು ಬಿಟ್ಟು ಹಿಂದೂ ಸಂಘಟನೆ ಮೇಲೆ ಕ್ರಮ ತೆಗೆದುಕೊಂಡೆ ಅಂತ ಹೇಳಿದ್ದಾರೆ. ಇದು ಸರಿಯಲ್ಲ. ಕೇಂದ್ರದ ನಾಯಕರನ್ನೂ ಭೇಟಿಯಾಗುತ್ತೇವೆ. ಪತ್ರದ ಮೂಲಕ ಅಶೋಕ್ ವಿರುದ್ಧ ದೂರು ಕೂಡ ನೀಡಲಿದ್ದೇವೆ ಎಂದರು.

ಅಷ್ಟಕ್ಕೂ ಆರ್ ಅಶೋಕ್ ಹೇಳಿದ್ದೇನು?

ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು. ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಗೃಹ ಸಚಿವ ಪರಮೇಶ್ವರ್​ಗೆ​ ಆಗ್ರಹಿಸಿದ್ದರು.

ಈ ಮೂಲಕ ತಾವು ಗೃಹ ಸಚಿವರಾಗಿದ್ದಾಗ ಹೇಗೆ ಇದ್ದೆ ಎನ್ನುವುದನ್ನು ತೋರಿಸಿಕೊಳ್ಳುವ ಭರದಲ್ಲಿ ಬಜರಂಗ ದಳ ವಿರುದ್ಧ ಗುಂಡಾ ಕೇಸ್ ಹಾಕಿದ್ದೆ ಎಂದು ಹೇಳಿಕೊಂಡಿದ್ದರು. ಆದ್ರೆ, ಈ ಹೇಳಿಕೆ ವಿಪಕ್ಷ ನಾಯಕ ಆರ್ ಅಶೋಕ್​ಗೆ ತಿರುಗು ಬಾಣವಾಗಿದ್ದು, ಅಶೋಕ್​ ವಿರುದ್ಧ ಬಜರಂಗದಳ ಕೆಂಡಾಮಂಡಲವಾಗಿತ್ತು. ಇದೀಗ ಕ್ಷಮೆ ಕೇಳುವ ಮೂಲಕ ಅಶೋಕ್ ಹಿಂದೂ ಸಂಘಟನೆಗಳ ಮುಂದೆ ಮಂಡಿಯೂರಿದ್ದಾರೆ,.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲ್ ಕ್ಲಿಕ್ ಮಾಡಿ

Published On - 8:47 pm, Thu, 22 February 24

ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್