AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ವಂಚಕರಿಗೆ ಅಡ್ಡೆಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್, ಸಿಸಿಬಿ ತನಿಖೆಗೆ ಒತ್ತಾಯಿಸಿದ ಸಚಿವ ತಂಗಡಗಿ

ಉದ್ಯಮಿ ಗೋವಿಂದ ಪೂಜಾರಿ ಅವರನ್ನು ವಂಚಿಸಿದ ರೀತಿಯಲ್ಲೇ ಕೊಪ್ಪಳದಲ್ಲೂ ಬಿಜೆಪಿ ಮುಖಂಡನಿಗೆ ವಿಶಾಲ್ ನಾಗ್ ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್​ನಲ್ಲಿ ಕುಳಿತುಕೊಂಡೇ ಡೀಲ್ ಮಾಡಿದ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ತನಿಖೆಗೆ ವಹಿಸುವಂತೆ ಸಚಿವ ಶಿವರಾಜ್ ತಂಗಡಗಿ ಒತ್ತಾಯಿಸಿದ್ದಾರೆ.

ಕೊಪ್ಪಳ: ವಂಚಕರಿಗೆ ಅಡ್ಡೆಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್, ಸಿಸಿಬಿ ತನಿಖೆಗೆ ಒತ್ತಾಯಿಸಿದ ಸಚಿವ ತಂಗಡಗಿ
ಸಚಿವ ಶಿವರಾಜ ತಂಗಡಗಿ
ದತ್ತಾತ್ರೇಯ ಪಾಟೀಲ್​
| Edited By: Rakesh Nayak Manchi|

Updated on:Sep 17, 2023 | 12:41 PM

Share

ಕೊಪ್ಪಳ, ಸೆ.17: ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚನೆ ಎಸಗಿದ ರೀತಿಯಲ್ಲೇ ಕೊಪ್ಪಳದಲ್ಲೂ ಬಿಜೆಪಿ ಮುಖಂಡನಿಗೆ ವಿಶಾಲ್ ನಾಗ್ ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್​ನಲ್ಲಿ ಕುಳಿತುಕೊಂಡೇ ಡೀಲ್ ಮಾಡಿದ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸುವಂತೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಒತ್ತಾಯಿಸಿದ್ದಾರೆ.

ಪ್ರತಿಷ್ಠಿತ ರಿಚ್ ಕಾರ್ಲಟನ್ ಹೋಟೆಲ್​ನಲ್ಲಿ ಕುಳಿತುಕೊಂಡು ಡೀಲ್ ನಡೆಸಿದ ಶಂಕೆ ವ್ಯಕ್ತವಾಗಿದೆ. ರೂಂ ನಂಬರ್ 1132 ನಲ್ಲಿದ್ದ ಆರೋಪಿ ವಿಶಾಲ್ ನಾಗ್, ಅಲ್ಲಿಯೇ ಕುಳಿತು ಟಿಕೆಟ್ ಆಕಾಂಕ್ಷಿಗಳ ಜೊತೆ ಡೀಲ್ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ.

ಉತ್ತರ ಕರ್ನಾಟದವರನ್ನೆ ಟಾರ್ಗೇಟ್ ಮಾಡಿದ್ದ ವಿಶಾಲ್ ನಾಗ್ ಅಂಟ್ ಟೀಂ, ತಾನು ಬಿಜೆಪಿ ಕೇಂದ್ರ ಚುನಾವಣೆ ಸರ್ವೇ ಟೀಂ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲದೆ, ತನಗೆ ಕೇಂದ್ರ ಗೃಹಸಚಿವ ಅಮಿತ್ ಶಾ, ಅರುಣ್ ಸಿಂಗ್ ಪರಿಚಯ ಇದೆ. ಅವರ ಸೂಚನೆ ಮೇರೆಗೆ ಸರ್ವೆ ಮಾಡುತ್ತಿದ್ದೆನೆಂದು ಹೇಳಿಕೊಂಡಿದ್ದ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಕೇಸ್​​ಗೆ ಸ್ಫೋಟಕ ತಿರುವು, ಕೊಟ್ಯಂತರ ರೂಪಾಯಿ ಡೀಲ್​ಗೆ ಬಿಜೆಪಿ ಕಚೇರಿ ಲಿಂಕ್

ಪ್ರಕರಣವನ್ನು ಸಿಸಿಬಿಗೆ ವಹಿಸಿದರೆ ಎಲ್ಲಾ ಡೀಲ್ ಬೆಳಕಿಗೆ ಬರುತ್ತದೆ ಎಂದು ಹೇಳಿದ ತಂಗಡಗಿ, ಬಿಜೆಪಿಯಲ್ಲಿ ಎಲ್ಲವೂ ಸೇಲ್ ಆಗಿವೆ. ಬಹುಶಃ ವಿಪಕ್ಷ ನಾಯಕ ಸ್ಥಾನ, ರಾಜ್ಯದ್ಯಕ್ಷ ಸ್ಥಾನಕ್ಕೆ ಇನ್ನು ಟೆಂಡರ್ ಆಗಿಲ್ಲ ಅನ್ಸುತ್ತದೆ. ಟೆಂಡರ್ ಯಾವಗ ಕರಿತಾರೋ ನೋಡಬೇಕು. ಟೆಂಡರ್​ನಲ್ಲಿ ಜೆಡಿಎಸ್​ನವರು ಭಾಗಹಿಸಬಹುದು. ಯಾರು ಹೆಚ್ಚು ದುಡ್ಡಿಗೆ ಬಿಡ್ ಮಾಡುತ್ತಾರೋ ಗೊತ್ತಿಲ್ಲ. ಮುಂದೆ ಎಂಪಿ ಟಿಕೆಟ್ ಕೂಡಾ ಇದೇ ರೀತಿ ಸೇಲ್ ಆಗುತ್ತದೆ. ಚಕ್ರವರ್ತಿ ಸುಲಿಬೆಲೆ ಹಾಗೂ ಚೈತ್ರಾ ಕುಂದಾಪುರ ಅಣ್ಣತಂಗಿ ಇದ್ದಂತೆ. ಬಿಜೆಪಿಯಲ್ಲಿ ಎಲ್ಲಾ ಹುದ್ದಗಳು ಮಾರಾಟಕ್ಕಿವೆ ಎಂದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದು ಇವಾಗ ನಿಜ ಆನಿಸುತ್ತಿದೆ. ಎಂಎಲ್​ಎ ಟಿಕೆಟ್​ಗೆ 5-7 ಕೋಟಿ, ಮಂತ್ರಿಗಿರಿಗೆ 50-70 ಕೋಟಿ, ಸಿಎಂ ಹುದ್ದೆಗೆ 2000 ಕೋಟಿಗೆ ಫಿಕ್ಸ್ ಆಗಿದೆ ಎಂದು ಬಿಜೆಪಿ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 17 September 23

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!