AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ವಂಚಕರಿಗೆ ಅಡ್ಡೆಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್, ಸಿಸಿಬಿ ತನಿಖೆಗೆ ಒತ್ತಾಯಿಸಿದ ಸಚಿವ ತಂಗಡಗಿ

ಉದ್ಯಮಿ ಗೋವಿಂದ ಪೂಜಾರಿ ಅವರನ್ನು ವಂಚಿಸಿದ ರೀತಿಯಲ್ಲೇ ಕೊಪ್ಪಳದಲ್ಲೂ ಬಿಜೆಪಿ ಮುಖಂಡನಿಗೆ ವಿಶಾಲ್ ನಾಗ್ ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್​ನಲ್ಲಿ ಕುಳಿತುಕೊಂಡೇ ಡೀಲ್ ಮಾಡಿದ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ತನಿಖೆಗೆ ವಹಿಸುವಂತೆ ಸಚಿವ ಶಿವರಾಜ್ ತಂಗಡಗಿ ಒತ್ತಾಯಿಸಿದ್ದಾರೆ.

ಕೊಪ್ಪಳ: ವಂಚಕರಿಗೆ ಅಡ್ಡೆಯಾಗಿದ್ದ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್, ಸಿಸಿಬಿ ತನಿಖೆಗೆ ಒತ್ತಾಯಿಸಿದ ಸಚಿವ ತಂಗಡಗಿ
ಸಚಿವ ಶಿವರಾಜ ತಂಗಡಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi|

Updated on:Sep 17, 2023 | 12:41 PM

Share

ಕೊಪ್ಪಳ, ಸೆ.17: ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚನೆ ಎಸಗಿದ ರೀತಿಯಲ್ಲೇ ಕೊಪ್ಪಳದಲ್ಲೂ ಬಿಜೆಪಿ ಮುಖಂಡನಿಗೆ ವಿಶಾಲ್ ನಾಗ್ ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್​ನಲ್ಲಿ ಕುಳಿತುಕೊಂಡೇ ಡೀಲ್ ಮಾಡಿದ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸುವಂತೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಒತ್ತಾಯಿಸಿದ್ದಾರೆ.

ಪ್ರತಿಷ್ಠಿತ ರಿಚ್ ಕಾರ್ಲಟನ್ ಹೋಟೆಲ್​ನಲ್ಲಿ ಕುಳಿತುಕೊಂಡು ಡೀಲ್ ನಡೆಸಿದ ಶಂಕೆ ವ್ಯಕ್ತವಾಗಿದೆ. ರೂಂ ನಂಬರ್ 1132 ನಲ್ಲಿದ್ದ ಆರೋಪಿ ವಿಶಾಲ್ ನಾಗ್, ಅಲ್ಲಿಯೇ ಕುಳಿತು ಟಿಕೆಟ್ ಆಕಾಂಕ್ಷಿಗಳ ಜೊತೆ ಡೀಲ್ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ.

ಉತ್ತರ ಕರ್ನಾಟದವರನ್ನೆ ಟಾರ್ಗೇಟ್ ಮಾಡಿದ್ದ ವಿಶಾಲ್ ನಾಗ್ ಅಂಟ್ ಟೀಂ, ತಾನು ಬಿಜೆಪಿ ಕೇಂದ್ರ ಚುನಾವಣೆ ಸರ್ವೇ ಟೀಂ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಅಷ್ಟೇ ಅಲ್ಲದೆ, ತನಗೆ ಕೇಂದ್ರ ಗೃಹಸಚಿವ ಅಮಿತ್ ಶಾ, ಅರುಣ್ ಸಿಂಗ್ ಪರಿಚಯ ಇದೆ. ಅವರ ಸೂಚನೆ ಮೇರೆಗೆ ಸರ್ವೆ ಮಾಡುತ್ತಿದ್ದೆನೆಂದು ಹೇಳಿಕೊಂಡಿದ್ದ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಕೇಸ್​​ಗೆ ಸ್ಫೋಟಕ ತಿರುವು, ಕೊಟ್ಯಂತರ ರೂಪಾಯಿ ಡೀಲ್​ಗೆ ಬಿಜೆಪಿ ಕಚೇರಿ ಲಿಂಕ್

ಪ್ರಕರಣವನ್ನು ಸಿಸಿಬಿಗೆ ವಹಿಸಿದರೆ ಎಲ್ಲಾ ಡೀಲ್ ಬೆಳಕಿಗೆ ಬರುತ್ತದೆ ಎಂದು ಹೇಳಿದ ತಂಗಡಗಿ, ಬಿಜೆಪಿಯಲ್ಲಿ ಎಲ್ಲವೂ ಸೇಲ್ ಆಗಿವೆ. ಬಹುಶಃ ವಿಪಕ್ಷ ನಾಯಕ ಸ್ಥಾನ, ರಾಜ್ಯದ್ಯಕ್ಷ ಸ್ಥಾನಕ್ಕೆ ಇನ್ನು ಟೆಂಡರ್ ಆಗಿಲ್ಲ ಅನ್ಸುತ್ತದೆ. ಟೆಂಡರ್ ಯಾವಗ ಕರಿತಾರೋ ನೋಡಬೇಕು. ಟೆಂಡರ್​ನಲ್ಲಿ ಜೆಡಿಎಸ್​ನವರು ಭಾಗಹಿಸಬಹುದು. ಯಾರು ಹೆಚ್ಚು ದುಡ್ಡಿಗೆ ಬಿಡ್ ಮಾಡುತ್ತಾರೋ ಗೊತ್ತಿಲ್ಲ. ಮುಂದೆ ಎಂಪಿ ಟಿಕೆಟ್ ಕೂಡಾ ಇದೇ ರೀತಿ ಸೇಲ್ ಆಗುತ್ತದೆ. ಚಕ್ರವರ್ತಿ ಸುಲಿಬೆಲೆ ಹಾಗೂ ಚೈತ್ರಾ ಕುಂದಾಪುರ ಅಣ್ಣತಂಗಿ ಇದ್ದಂತೆ. ಬಿಜೆಪಿಯಲ್ಲಿ ಎಲ್ಲಾ ಹುದ್ದಗಳು ಮಾರಾಟಕ್ಕಿವೆ ಎಂದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದು ಇವಾಗ ನಿಜ ಆನಿಸುತ್ತಿದೆ. ಎಂಎಲ್​ಎ ಟಿಕೆಟ್​ಗೆ 5-7 ಕೋಟಿ, ಮಂತ್ರಿಗಿರಿಗೆ 50-70 ಕೋಟಿ, ಸಿಎಂ ಹುದ್ದೆಗೆ 2000 ಕೋಟಿಗೆ ಫಿಕ್ಸ್ ಆಗಿದೆ ಎಂದು ಬಿಜೆಪಿ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ ನಡೆಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 17 September 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?