AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ

ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ನೀಡುವುದು ಉಭಯ ಪಕ್ಷಗಳಿಗೆ ಕಗ್ಗಂಟಾಗುವ ಎಲ್ಲ ಸಾಧ್ಯತೆಗಳು ಕಾಣಿಸುತ್ತಿವೆ. ಬಿಜೆಪಿ ಚಿಹ್ನೆಯಿಂದಲೇ ಟಿಕೆಟ್​ಗಾಗಿ ಸಿಪಿ ಯೋಗೇಶ್ವರ್ ಪಟ್ಟುಹಿಡಿದಿದ್ದಾರೆ. ಆದರೆ, ಅಂತಿಮವಾಗಿ ಎಲ್ಲವೂ ಹೆಚ್​ಡಿ ಕುಮಾರಸ್ವಾಮಿ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ
ಸಿಪಿ ಯೋಗೇಶ್ವರ್
ಹರೀಶ್ ಜಿ.ಆರ್​.
| Edited By: |

Updated on: Aug 14, 2024 | 11:13 AM

Share

ನವದೆಹಲಿ, ಆಗಸ್ಟ್ 14: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್​ಗಾಗಿ ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಅವರು ಇದೀಗ ಬೆಂಗಳೂರಿಗೆ ವಾಪಸಾಗಿದ್ದಾರೆ. ಈ ಮಧ್ಯೆ, ಕುಮಾರಸ್ವಾಮಿ ನಿರ್ಧಾರದ ಮೇಲೆ ಸಿಪಿ ಯೋಗೇಶ್ವರ್​ ಭವಿಷ್ಯ ನಿಂತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಒಪ್ಪಿದ್ರೆ ಮಾತ್ರ ಯೋಗೇಶ್ವರ್ ಎನ್​​​ಡಿಎಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಧ್ಯೆ, ಬಿಜೆಪಿ ಚಿಹ್ನೆಯಿಂದಲೇ ಸ್ಪರ್ಧಿಸಲು ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧೆಗೆ ಧೈರ್ಯ ಮಾಡದ ಯೋಗೇಶ್ವರ್, ಟಿಕೆಟ್​​ಗಾಗಿ ದೆಹಲಿಯಲ್ಲಿ ಕಸರತ್ತು ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಮೂಲಕ ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನಪಟ್ಟಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ನಾಯಕರು ಟಿಕೆಟ್ ವಿಚಾರದಲ್ಲಿ ನನ್ನ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಆಗಸ್ಟ್ 16ರ ಬಳಿಕ ದೆಹಲಿಗೆ ಬರುವುದಾಗಿ ಕೆಲ ನಾಯಕರು ಯೋಗೇಶ್ವರ್​​ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆಗಸ್ಟ್ 16ರ ಬಳಿಕ ದೆಹಲಿಗೆ ಬಂದು ಕುಮಾರಸ್ವಾಮಿ ಜತೆ ಚರ್ಚೆ ಮಾಡಲಿದ್ದೇವೆ. ಆಗಸ್ಟ್ 18ರ ಬಳಿಕ ದೆಹಲಿಯಲ್ಲೇ ಕುಮಾರಸ್ವಾಮಿ ಜತೆ ಸಭೆ ನಿಗದಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆಗಸ್ಟ್ 18ರ ಬಳಿಕ ದೆಹಲಿಗೆ ಬರುವಂತೆ ಯೋಗೇಶ್ವರ್​ಗೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರವಷ್ಟೇ ಸಿಪಿ ಯೋಗೇಶ್ವರ್ ಕೆಲವು ಮಂದಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಸದ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ