AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಕೇಸ್​ನಲ್ಲಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಬಿಜೆಪಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಇದೀಗ ಯೂನಿಯನ್‌‌ ಬ್ಯಾಂಕ್ ವಂಚನೆ ಕೇಸ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಗಿದೆ.

ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ
ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ
Ramesha M
| Edited By: |

Updated on: Aug 05, 2024 | 6:56 PM

Share

ಬೆಂಗಳೂರು, ಆಗಸ್ಟ್​ 05: ಮುಡಾ ಮತ್ತು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಉಭಯ ಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಂಡಿವೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಪ್ರತ್ಯಾರೋಪಗಳು ಮಾಡಲಾಗುತ್ತಿದೆ. ಇನ್ನೊಂದೆಡೆ ಬಿಜೆಪಿ ಅವಧಿಯಲ್ಲಿನ ಹಗರಣಗಳನ್ನು ತನಿಖೆ ನಡೆಸಲು ಕಾಂಗ್ರೆಸ್​ ಮುಂದಾಗಿದೆ. ಈ ಮಧ್ಯೆ ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡ (LR Shivarame Gowda) ಬಂಧನ ಭೀತಿ ಎದುರಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜಾಮೀನಿಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ 20 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಕೇಸ್​ನಲ್ಲಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಎಲ್.ಆರ್.ಶಿವರಾಮೇಗೌಡ ಇದೀಗ ಯೂನಿಯನ್‌‌ ಬ್ಯಾಂಕ್ ವಂಚನೆ ಕೇಸ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ಅಭಿಯೋಜಕರು ಕಾಲಾವಕಾಶ ಕೋರಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಜಮೀನು ಮಾಲೀಕರೊಂದಿಗೆ ಸೇರಿ ಬ್ಯಾಂಕ್​ಗಳಿಂದ 32 ಕೋಟಿ ರೂ. ಪಡೆದುಕೊಳ್ಳಲಾಗಿದೆ. ಶಾಲೆಯ ಬಾಡಿಗೆಯ ಹಣವನ್ನು ಬ್ಯಾಂಕ್​ಗೆ ನೀಡುವುದಾಗಿ ಒಡಂಬಡಿಕೆ ಮಾಡಲಾಗಿದೆ. ಇನ್ನು ಎಲ್.ಆರ್.ಶಿವರಾಮೇಗೌಡ ರಾಯಲ್ ಕಾನ್​ಕಾರ್ಡ್ ಸಂಸ್ಥೆಯ ಟ್ರಸ್ಟಿ ಆಗಿದ್ದು, ವರ್ತೂರಿನ ಅಂಬಲೀಪುರದ ಜಮೀನಿನ ಮೇಲೆ ಮಾಲೀಕರು ಸಾಲ ಪಡೆದಿದ್ದಾರೆ. ಒಪ್ಪಂದದಂತೆ ಸಾಲ ತೀರಿಸದೇ ಇದ್ದಾಗ ವಂಚನೆ ಆರೋಪದಡಿ ಸಿಬಿಐ ಕೇಸ್​ ದಾಖಲಿಸಲಾಗಿದೆ.

ಆದೇಶ ಕಾಯ್ದಿರಿಸಿದ ಹೈಕೋರ್ಟ್

ಮೈಸೂರು ಜಿಲ್ಲೆಯ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಮೀನು ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ಜಾಮೀನು ಸಿಕ್ಕ ಬೆನ್ನಲ್ಲೇ ಕಾನೂನು ಹೋರಾಟಕ್ಕಿಳಿದ ಶಾಸಕ ಎಚ್​ಡಿ ರೇವಣ್ಣ

ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಜಾಮೀನು ಕೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ