AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಕೇಸ್​ನಲ್ಲಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಬಿಜೆಪಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಇದೀಗ ಯೂನಿಯನ್‌‌ ಬ್ಯಾಂಕ್ ವಂಚನೆ ಕೇಸ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಗಿದೆ.

ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ
ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡಗೆ ಬಂಧನ ಭೀತಿ: ಜಾಮೀನಿಗಾಗಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಎಂಪಿ
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 05, 2024 | 6:56 PM

Share

ಬೆಂಗಳೂರು, ಆಗಸ್ಟ್​ 05: ಮುಡಾ ಮತ್ತು ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಉಭಯ ಪಕ್ಷಗಳು ಈಗಾಗಲೇ ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಂಡಿವೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಪ್ರತ್ಯಾರೋಪಗಳು ಮಾಡಲಾಗುತ್ತಿದೆ. ಇನ್ನೊಂದೆಡೆ ಬಿಜೆಪಿ ಅವಧಿಯಲ್ಲಿನ ಹಗರಣಗಳನ್ನು ತನಿಖೆ ನಡೆಸಲು ಕಾಂಗ್ರೆಸ್​ ಮುಂದಾಗಿದೆ. ಈ ಮಧ್ಯೆ ಬಿಜೆಪಿ ನಾಯಕ ಎಲ್​​ಆರ್​ ಶಿವರಾಮೇಗೌಡ (LR Shivarame Gowda) ಬಂಧನ ಭೀತಿ ಎದುರಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಜಾಮೀನಿಗಾಗಿ ಕೋರ್ಟ್​ ಮೊರೆಹೋಗಿದ್ದಾರೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ 20 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಕೇಸ್​ನಲ್ಲಿ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದಿರುವ ಎಲ್.ಆರ್.ಶಿವರಾಮೇಗೌಡ ಇದೀಗ ಯೂನಿಯನ್‌‌ ಬ್ಯಾಂಕ್ ವಂಚನೆ ಕೇಸ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ಅಭಿಯೋಜಕರು ಕಾಲಾವಕಾಶ ಕೋರಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಾಜಿ ಸಂಸದ ಎಲ್​ಆರ್​ ಶಿವರಾಮೇಗೌಡ ಕುಟುಂಬಕ್ಕೆ ಶುರುವಾಯ್ತು ಸಿಬಿಐ ಕಂಟಕ

ಜಮೀನು ಮಾಲೀಕರೊಂದಿಗೆ ಸೇರಿ ಬ್ಯಾಂಕ್​ಗಳಿಂದ 32 ಕೋಟಿ ರೂ. ಪಡೆದುಕೊಳ್ಳಲಾಗಿದೆ. ಶಾಲೆಯ ಬಾಡಿಗೆಯ ಹಣವನ್ನು ಬ್ಯಾಂಕ್​ಗೆ ನೀಡುವುದಾಗಿ ಒಡಂಬಡಿಕೆ ಮಾಡಲಾಗಿದೆ. ಇನ್ನು ಎಲ್.ಆರ್.ಶಿವರಾಮೇಗೌಡ ರಾಯಲ್ ಕಾನ್​ಕಾರ್ಡ್ ಸಂಸ್ಥೆಯ ಟ್ರಸ್ಟಿ ಆಗಿದ್ದು, ವರ್ತೂರಿನ ಅಂಬಲೀಪುರದ ಜಮೀನಿನ ಮೇಲೆ ಮಾಲೀಕರು ಸಾಲ ಪಡೆದಿದ್ದಾರೆ. ಒಪ್ಪಂದದಂತೆ ಸಾಲ ತೀರಿಸದೇ ಇದ್ದಾಗ ವಂಚನೆ ಆರೋಪದಡಿ ಸಿಬಿಐ ಕೇಸ್​ ದಾಖಲಿಸಲಾಗಿದೆ.

ಆದೇಶ ಕಾಯ್ದಿರಿಸಿದ ಹೈಕೋರ್ಟ್

ಮೈಸೂರು ಜಿಲ್ಲೆಯ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಮೀನು ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ.

ಇದನ್ನೂ ಓದಿ: ಜಾಮೀನು ಸಿಕ್ಕ ಬೆನ್ನಲ್ಲೇ ಕಾನೂನು ಹೋರಾಟಕ್ಕಿಳಿದ ಶಾಸಕ ಎಚ್​ಡಿ ರೇವಣ್ಣ

ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಜಾಮೀನು ಕೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!