AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ 394 ಪುಟಗಳ ದಾಖಲೆ ಸಮೇತ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್​ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ
ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 27, 2024 | 3:09 PM

Share

ಬೆಂಗಳೂರು, ಸೆಪ್ಟೆಂಬರ್​ 27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ ಒಂದು ಕಡೆಯಾದರೆ ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಅವರ ಕುಟುಂಬದ ಮೇಲೆ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್ ದೂರು ನೀಡಿದ್ದಾರೆ.​

7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ದೂರು

ಒಟ್ಟು 7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್​ ಅಧಿಕಾರಿಗಳು ಭಾಗಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ 5 ಎಕರೆ ಜಾಗ ಮಂಜೂರು ಮಾಡಲಾಗಿದೆ.

ಇದನ್ನೂ ಓದಿ: ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್​ಗೆ 5 ಎಕರೆ ಜಮೀನು: ಇದು ಅಧಿಕಾರ ದುರುಪಯೋಗಲ್ಲವೇ ಲಹರ್‌ ಸಿಂಗ್ ಪ್ರಶ್ನೆ

ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿ ಬಂದಿದೆ. ಇದು ರಾಜಕೀಯ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.

ಸದ್ಯ ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್​ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

2014ರಲ್ಲಿ ಬಿಟಿಎಂ 4ನೇ ಸ್ಟೇಜ್​​ನ ಎರಡನೇ ಬ್ಲಾಕ್​​ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ, 2024ರಲ್ಲಿ ಬಾಗಲೂರು ಬಳಿ 5 ಎಕರೆಯಷ್ಟು ಕೆಐಎಡಿಬಿ ಭೂಮಿಯನ್ನು ಮತ್ತೆ ಇವರ ಒಡೆತನ ಟ್ರಸ್ಟ್​ಗೆ ಪರಭಾರೆ ಮಾಡಿಕೊಳ್ಳಲಾಗಿದೆ. ಈ ಎರಡೂ ನಿವೇಶನಗಳನ್ನು ಒಂದೇ ಸಂಸ್ಥೆಗೆ ಒಂದೇ ಉದ್ದೇಶಕ್ಕೆ ಈ ಟ್ರಸ್ಟ್ ಪಡೆದುಕೊಂಡಿದೆ. ಈ ಎರಡೂ ನಿವೇಶಗಳ ಪ್ರಸ್ತುತ ಒಟ್ಟು ಮೌಲ್ಯ ಬರೋಬ್ಬರಿ 240 ಕೋಟಿ ರೂ. ಅಧಿಕ ಮೊತ್ತ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Fri, 27 September 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್