AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ ವ್ಯಕ್ತಪಡಿಸಿದ್ದಾರೆ.

ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ
ಆರ್​ ಅಶೋಕ್
ವಿವೇಕ ಬಿರಾದಾರ
|

Updated on:Sep 11, 2024 | 1:06 PM

Share

ಬೆಂಗಳೂರು, ಸೆಪ್ಟೆಂಬರ್​​ 11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ (Department of Information and Public Relations) ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ (R Ashok) ವಿರೋಧ ವ್ಯಕ್ತಪಡಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರೇ, ಜಾಹೀರಾತುಗಳನ್ನ ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​

“ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

“ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ” ಎಂದು ವಾಗ್ದಾಳಿ ಮಾಡಿದರು.

ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 11 September 24

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ