AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ ವ್ಯಕ್ತಪಡಿಸಿದ್ದಾರೆ.

ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ
ಆರ್​ ಅಶೋಕ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 11, 2024 | 1:06 PM

Share

ಬೆಂಗಳೂರು, ಸೆಪ್ಟೆಂಬರ್​​ 11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ (Department of Information and Public Relations) ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ (R Ashok) ವಿರೋಧ ವ್ಯಕ್ತಪಡಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರೇ, ಜಾಹೀರಾತುಗಳನ್ನ ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​

“ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

“ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ” ಎಂದು ವಾಗ್ದಾಳಿ ಮಾಡಿದರು.

ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 11 September 24

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ