Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​: ವಿನಯ ಕುಲಕರ್ಣಿ ಅರ್ಜಿ ವಜಾ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ನ್ಯಾಯಾಲಯವು ನಾಲ್ಕು ವಾರಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಸೂಚಿಸಿದೆ. ಮುತ್ತಗಿಯ ತಪ್ಪೊಪ್ಪಿಗೆಯಿಂದ ವಿನಯ್ ಕುಲಕರ್ಣಿ ಮೇಲಿನ ಆರೋಪಗಳು ಬಲಗೊಂಡಿವೆ. ಯೋಗೇಶ್ ಗೌಡರ ಪತ್ನಿ ಮಲ್ಲವ್ವ ಅವರ ಅರ್ಜಿಯನ್ನೂ ವಜಾಗೊಳಿಸಲಾಗಿದೆ.

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​: ವಿನಯ ಕುಲಕರ್ಣಿ ಅರ್ಜಿ ವಜಾ
ವಿನಯ ಕುಲಕರ್ಣಿ, ಯೋಗೇಶ್​ ಗೌಡ
Follow us
Ramesha M
| Updated By: ವಿವೇಕ ಬಿರಾದಾರ

Updated on: Apr 04, 2025 | 3:45 PM

ಬೆಂಗಳೂರು, ಏಪ್ರಿಲ್​ 04: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ (Dharwad BJP Leader Yogesh Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ (Vinay Kulakarni) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಲಾಗಿದೆ. ಇದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ, ಅರ್ಜಿ ವಜಾಗೊಳಿಸಿದರು. ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ ಅರ್ಜಿಯೂ ವಜಾಗೊಳಿಸಲಾಗಿದೆ.

ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ ವಿನಯ್ ಕುಲಕರ್ಣಿ ಎಂದು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿದ್ದಾನೆ. ಮಾಫಿ ಸಾಕ್ಷಿಯಾದ ಬಸವರಾಜ ಮುತ್ತಗಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದನು. ಕೊಲೆ ಮಾಡಿಸಿದ್ದು ಯಾರು? ಕೊಲೆಗೆ ಪ್ಲಾನ್​ ಮಾಡಿದ್ದು ಹೇಗೆ? ಕೊಲೆಗೆ ಸುಪಾರಿ ನೀಡಿದ್ದು ಯಾರು? ಅಂತ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದನು.

ಯೋಗೇಶ್ ಗೌಡರನ್ನು ಕೊಲೆ ಮಾಡಿಸಿದ್ದೇ ವಿನಯ ಕುಲಕರ್ಣಿ: ಮುತ್ತಗಿ

ಯೋಗೇಶ್​ ಗೌಡ ಹತ್ಯೆಗೆ ಧಾರವಾಡದ ಯುವಕರು ಒಪ್ಪಿಗೆ ಸೂಚಿಸಲಿಲ್ಲ. ಹೀಗಾಗಿ, ಶಾಸಕ ವಿನಯ್ ಕುಲಕರ್ಣಿ​ ಸೂಚನೆ ಮೇರೆಗೆ ಬೆಂಗಳೂರಿನಿಂದ ಹುಡುಗರನ್ನು ಕರೆಸಿ ಸಂಚು ರೂಪಿಸಿ ಯೋಗೀಶ್ ಗೌಡನನ್ನು ಕೊಲೆ ಮಾಡಲಾಗಿದೆ ಎಂದು ಮುತ್ತಿಗೆ ಹೇಳಿಕೆ ನೀಡಿದ್ದನು. ಇನ್ನು, ಆರೋಪಿ ಬಸವರಾಜ ಮುತ್ತಗಿ ಶಾಸಕ ವಿನಯ ಕುಲಕರ್ಣಿಯ ಆಪ್ತನಾಗಿದ್ದಾನೆ. 2016ರ ಜೂನ್ 15ರಂದು ಧಾರವಾಡದಲ್ಲಿರುವ ಜಿಮ್​ ಎದುರುಗಡೆ ಯೋಗೇಶ್ ಗೌಡನನ್ನು ಹತ್ಯೆ ಮಾಡಲಾಯಿತು ಎಂದು ಬಸವರಾಜ ಮುತ್ತಗಿ ನ್ಯಾಯಾಲಯದ ಮುಂದೆ ಹೇಳಿದ್ದನು.

ಇದನ್ನೂ ಓದಿ
Image
ಬಿಜೆಪಿ ವಿನಯ್ ಆತ್ಮಹತ್ಯೆ ಕೇಸ್​: ಸಿಎಂ ಕಾನೂನು ಸಲಹೆಗಾರರ ವಿರುದ್ಧ ದೂರು
Image
ಮತದಾನಕ್ಕೆ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್​ ಅನುಮತಿ
Image
ಧಾರವಾಡ: ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​
Image
ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ವಿನಯ್‌ಗೆ ಜೈಲು: ವಿನಯ್ ಕುಲಕರ್ಣಿ ನಿವಾಸಕ್ಕೆ ನಟ ದರ್ಶನ್ ಭೇಟಿ

ಇದನ್ನೂ ಓದಿ: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ

ಬಸವರಾಜ ಮುತ್ತಗಿ ತಪ್ಪೊಪ್ಪಿಗೆ ಹೇಳಿಕೆಯಿಂದ ಶಾಸಕ ವಿನಯ್​ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಇನ್ನು, ಬಿಜೆಪಿ ಮುಖಂಡ ಯೋಗೇಶ್​ ಗೌಡ ಕೊಲೆ ಪ್ರಕರಣವನ್ನು ಸಿಬಿಐ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು