AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನ ಭೇಟಿಯಾದ ಸ್ಪೀಕರ್: ಬಿಜೆಪಿ ಆಕ್ಷೇಪ

ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ. ಆದ್ರೆ. ಇತ್ತೀಚೆಗೆಷ್ಟೇ ಕಾಂಗ್ರೆಸ್ ಹೈಕಮಾಂಡ್ ತನ್ನ ಲೆಟರ್ ಹೆಡ್​​ನಲ್ಲಿ ಪ್ರಕಟಿಸಿದ ಸಚಿವರ ಪಟ್ಟಿಯಲ್ಲಿ ಸ್ಪೀಕರ್ ಹಾಗೂ ಸಭಾಪತಿ ಹೆಸರು ಉಲ್ಲೇಖಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಕರ್ನಾಟಕ ಕಾಂಗ್ರೆಸ ಉಸ್ತುವಾರಿ ಅವರನ್ನ ಭೇಟಿ ಮಾಡಿ ವಿವಾದಕ್ಕೀಡಾಗಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನ ಭೇಟಿಯಾದ ಸ್ಪೀಕರ್: ಬಿಜೆಪಿ ಆಕ್ಷೇಪ
ಸಲೀಂ ಅಹ್ಮದ್, ಜಿಎಸ್ ಪಾಟೀಲ್
ರಮೇಶ್ ಬಿ. ಜವಳಗೇರಾ
|

Updated on: Sep 02, 2026 | 8:07 PM

Share

ಬೆಂಗಳೂರು, (ಸೆಪ್ಟೆಂಬರ್ 02): ವಿಧಾನಸಭೆ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ವಿಧಾನಸಭೆ ಸ್ಪೀಕರ್ ಜಿಎಸ್ ಪಾಟೀಲ್ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ  ವಿಪಕ್ಷ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದವರು ಪಕ್ಷದ ಸದಸ್ಯತ್ವಕ್ಕೆ ಮೊದಲು ರಾಜೀನಾಮೆ ನೀಡಬೇಕು. ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಸಭಾಧ್ಯಕ್ಷರೇ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭೇಟಿಯಾಗಿ ಕೃತಜ್ಞತೆಯ ” ಸಂದಾಯ” ಮಾಡಿರುವುದು ಅವರ ಕಾರ್ಯವೈಖರಿಯನ್ನು ಪ್ರಶ್ನಾರ್ಹವಾಗಿಸುತ್ತದೆ. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಲ್ಲೇ ಇನ್ನು ಮುಂದೆ ಸದನ ನಡೆಯಬಹುದು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಆಕ್ರೋಶ ವ್ಯಕ್ತಡಿಸಿದ್ದಾರೆ.

ಹೈಕಮಾಂಡ್ ನಿರ್ದೇಶನದಂತೆ ಸದನ ನಡೆಯಬಹುದು

ಟ್ವೀಟ್ ಮಾಡಿರುವ ಸುನಿಲ್ ಕುಮಾರ್, ಸಾಂವಿಧಾನಿಕ ಹುದ್ದೆಯ ಘನತೆಯನ್ನು ಲೆಟರ್ ಹೆಡ್ ಗೆ ಇಳಿಸಿದ ಕಾಂಗ್ರೆಸ್ ಹೈಕಮಾಂಡ್ ಈಗ ಸ್ಪೀಕರ್ ಹುದ್ದೆಯನ್ನು ಅಕ್ಷರಶಃ ರಾಜಕೀಯ ನೇಮಕಾತಿಯನ್ನಾಗಿಸಿದೆ. ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದವರು ಪಕ್ಷದ ಸದಸ್ಯತ್ವಕ್ಕೆ ಮೊದಲು ರಾಜೀನಾಮೆ ನೀಡಬೇಕು. ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಸಭಾಧ್ಯಕ್ಷರೇ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭೇಟಿಯಾಗಿ ಕೃತಜ್ಞತೆಯ ” ಸಂದಾಯ” ಮಾಡಿರುವುದು ಅವರ ಕಾರ್ಯವೈಖರಿಯನ್ನು ಪ್ರಶ್ನಾರ್ಹವಾಗಿಸುತ್ತದೆ. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಲ್ಲೇ ಇನ್ನು ಮುಂದೆ ಸದನ ನಡೆಯಬಹುದೆಂಬ ಅಪಾಯವನ್ನು ಈ ಭೇಟಿ ಧ್ವನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೆಪಿಎಸ್​​ಸಿ ಹಗರಣ: ಪ್ರಿಯಾಂಕ್ ಖರ್ಗೆ RDPR ಮಂತ್ರಿಯಾಗಿದ್ದಾಗ ಏನೇನಾಯ್ತು ಅಂತ ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ

ಕಾಂಗ್ರೆಸ್ ವೀಕ್ಷಕರಿಗೆ ಕೃತಜ್ಞತೆ ಸಮರ್ಪಣೆಯೇ?

ಇನ್ನು ಈ ಬಗ್ಗೆ ಮತ್ತೋರ್ವ ಬಿಜೆಪಿ ಶಾಸಕ ಸುರೇಶ್ ಕುಮಾರ ಸಹ ಆಕ್ಷೇಪಿಸಿದ್ದು, ಕರ್ನಾಟಕ ವಿಧಾನಸಭೆಯ ವಿಧಾನಸಭಾಧ್ಯಕ್ಷರಿಂದ ರಾಜ್ಯದ ಕಾಂಗ್ರೆಸ್ ವೀಕ್ಷಕರಿಗೆ ಕೃತಜ್ಞತೆ ಸಮರ್ಪಣೆಯೇ? ಅಂದು ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ ಮೂಲಕ ಸಭಾಧ್ಯಕ್ಷರ ಸ್ಥಾನಕ್ಕೆ ಸೂಚಿಸಲಾಗಿತ್ತು. ಇಂದು ಸಭಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿರುವ ಈ ಚಿತ್ರ ಒಂದು ಅಪಸವ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪಕ್ಷದ ಲೆಟರ್‌ಹೆಡ್‌ನಲ್ಲಿ ಪ್ರಕಟಿಸಿತ್ತು. ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್, ಡೆಪ್ಯುಟಿ ಸ್ಪೀಕರ್, ಸಭಾಪತಿ, ಉಪಸಭಾಪತಿ ಹುದ್ದೆಗಳಿಗೆ ಹೆಸರು ಆಯ್ಕೆ ಮಾಡಿ ಪ್ರಕಟಿಸಿರುವ ವಿಚಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್‌ ಪಕ್ಷ ನಾಂದಿ ಹಾಡಿದೆ ಎಂದು ವಾಗ್ದಾಳಿ ನಡೆಸಿತ್ತು. ಇದೀಗ ಖುದ್ದು ಸ್ಪೀಕರ್ ಹಾಗೂ ಸಭಾಪತಿ, ಕಾಂಗ್ರೆಸ್ ಹೈಕಮಾಂಡ್ ನಾಯಕನನ್ನು ಭೇಟಿ ಮಾಡಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!