AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ‌ ಕೇಸ್​: 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ ಎಸ್‌ಐಟಿ

ಆರ್‌ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ 590 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ. ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳ ಜೊತೆಗೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಒಳಗೊಂಡಿದೆ. ಮುನಿರತ್ನರ ಧ್ವನಿ ಮಾದರಿಯನ್ನು ಎಫ್‌ಎಸ್‌ಎಲ್ ಪರೀಕ್ಷಿಸಿದ್ದು, ಅವರದೇ ಧ್ವನಿ ಎಂಬುದು ದೃಢಪಟ್ಟಿತ್ತು.

ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ‌ ಕೇಸ್​: 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ ಎಸ್‌ಐಟಿ
ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ‌ ಕೇಸ್​: 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ ಎಸ್‌ಐಟಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 30, 2024 | 5:09 PM

ಬೆಂಗಳೂರು, ನವೆಂಬರ್​ 30: ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ಧದ ಜಾತಿನಿಂದನೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಟೆಕ್ನಿಕಲ್, ವೈಜ್ಞಾನಿಕ ಸಾಕ್ಷ್ಯ ಸೇರಿ ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 14ರಂದು ಮುನಿರತ್ನ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ರು. ಸದ್ಯ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. 53 ಸಾಕ್ಷಿಗಳು ಹಾಗೂ ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆ ಕೂಡ ದಾಖಲಾಗಿದೆ.

ಇದನ್ನೂ ಓದಿ: ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವುದು ದೃಢಪಟ್ಟಿದ್ದು, ಜಾತಿ ನಿಂದನೆ, ಬೆದರಿಕೆ ಹಾಕಿದ್ದು ತನಿಖೆಯಲ್ಲಿ ದೃಢಪಟ್ಟ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಸೆ.13ರಂದು ವೈಯಾಲಿಕಾವಲ್ ‌ಠಾಣೆಗೆ ವೇಲುನಾಯ್ಕರ್ ದೂರು ನೀಡಿದ್ದರು. ಬಳಿಕ ಪ್ರಕರಣದ ತನಿಖೆ ಸಿಐಡಿ ಎಸ್‌ಐಟಿಗೆ ವರ್ಗಾವಣೆ ಮಾಡಲಾಗಿತ್ತು.

ಇತ್ತೀಚೆಗೆ ಎಫ್​​ಎಸ್​ಎಲ್​ ರಿಪೋರ್ಟ್‌ನಲ್ಲಿ ಆಡಿಯೋ ಮುನಿರತ್ನರದ್ದೇ ಎಂದು ದೃಢಪಟ್ಟಿತ್ತು. ಮುನಿರತ್ನ ಗುತ್ತಿಗೆದಾರ ಚೆಲುವರಾಜುಗೆ ಕರೆ ಮಾಡಿ ಮಾತನಾಡಿದ್ದು ಎನ್ನಲಾದ ಆಡಿಯೋದ್ದಲ್ಲಿದ್ದ ಧ್ವನಿ ಅವರದ್ದೇ ಧ್ವನಿ ಎಂದು ದೃಢಪಟ್ಟಿತ್ತು.

ಶಾಸಕ ಮುನಿರತ್ನ ಬಂಧಿಸಿದ್ದ ಪೊಲೀಸರು ಅವರ ವಾಯ್ಸ್ ಸ್ಯಾಂಪಲ್ ಕಲೆಕ್ಟ್ ಮಾಡಿ FSLಗೆ ಕಳಿಸಿದ್ದರು. FSL ಅಧಿಕಾರಿಗಳು ಆಡಿಯೋ ಮತ್ತು ಮುನಿರತ್ನ ಧ್ವನಿ ಮ್ಯಾಚ್ ಮಾಡಿದ್ದು, ಆಡಿಯೋದಲ್ಲಿದ್ದ ಧ್ವನಿ ಮುನಿರತ್ನರದ್ದೇ ಎಂದು ರಿಪೋರ್ಟ್ ಕೊಟ್ಟಿದ್ದರು.

ಇದನ್ನೂ ಓದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಗುತ್ತಿಗೆದಾರ ಚೆಲುವರಾಜು ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಮುನಿರತ್ನ ಬಳಿಕ ಆತನಿಗೆ ನಿಂದನೆ ಮಾತುಗಳನ್ನಾಡಿದ್ದರು. ಜೊತೆಗೆ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಬಗ್ಗೆ ಜಾತಿ ನಿಂದನೆ ಮಾಡಿದ್ದರು. ಇದೆಲ್ಲವನ್ನ ರೆಕಾರ್ಡ್ ಮಾಡಿದ್ದ ಚೆಲುವರಾಜು, ವೇಲು ನಾಯ್ಕರ್ ಮುನಿರತ್ನ ವಿರುದ್ಧ ಕೇಸ್ ದಾಖಲಿಸಿದ್ದರು. ಬಳಿಕ ಮುನಿರತ್ನ ಬಂದನವಾಗಿ ಅವರ ವಾಯ್ಸ್ ಸ್ಯಾಂಪಲ್ ಪರೀಕ್ಷೆಗೆ ಕಳಿಸಲಾಗಿತ್ತು.

ವರದಿ: ಪ್ರದೀಪ್​ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್