AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕವಿ, ಸಾಹಿತಿ ಸಿದ್ದಲಿಂಗಯ್ಯ ಹೆಸರನ್ನು ಬಿಬಿಎಂಪಿ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡುವಂತೆ ಶ್ರೀರಾಮುಲು ಮನವಿ

ಬಿಬಿಎಂಪಿ ವ್ಯಾಪ್ತಿ ವೃತ್ತ ಅಥವಾ ರಸ್ತೆ ಅಥವಾ ಮೇಲ್ಸೇತುವೆ ಇದು ಯಾವುದಕ್ಕಾದರೂ ಸಿದ್ದಲಿಂಗಯ್ಯ ಅವರ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶ್ರೀರಾಮುಲು ಪತ್ರ ಬರೆದು ತಿಳಿಸಿದ್ದಾರೆ.

ಕವಿ, ಸಾಹಿತಿ ಸಿದ್ದಲಿಂಗಯ್ಯ ಹೆಸರನ್ನು ಬಿಬಿಎಂಪಿ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡುವಂತೆ ಶ್ರೀರಾಮುಲು ಮನವಿ
ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ (ಚಿತ್ರ ಕೃಪೆ: ಎಎನ್​ಐ ಸುದ್ಧಿ ಸಂಸ್ಥೆ)
TV9 Web
| Updated By: ganapathi bhat|

Updated on: Jun 14, 2021 | 5:48 PM

Share

ಬೆಂಗಳೂರು: ದಲಿತ ಕವಿ, ಸಾಹಿತಿ ದಿವಂಗತ ಡಾ. ಸಿದ್ದಲಿಂಗಯ್ಯ ಅವರ ಹೆಸರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡಬೇಕು ಎಂದು ಸೂಚಿಸಿ ಬಿಬಿಎಂಪಿ ಆಡಳಿತಾಧಿಕಾರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಪತ್ರ ಬರೆದಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ವೃತ್ತ ಅಥವಾ ರಸ್ತೆ ಅಥವಾ ಮೇಲ್ಸೇತುವೆ ಇದು ಯಾವುದಕ್ಕಾದರೂ ಸಿದ್ದಲಿಂಗಯ್ಯ ಅವರ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶ್ರೀರಾಮುಲು ಪತ್ರ ಬರೆದು ತಿಳಿಸಿದ್ದಾರೆ.

ಖ್ಯಾತ ಕವಿ, ಸಾಹಿತಿ, ದಲಿತ ಹೋರಾಟಗಾರ ಡಾ. ಸಿದ್ದಲಿಂಗಯ್ಯ ಜೂನ್ 11ರಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದರು. ಕೆಲವು ದಿನಗಳ ಕಾಲ ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಿದ ಅವರು ಮೊನ್ನೆಯಷ್ಟೇ ಕೊನೆಯುಸಿರೆಳೆದಿದ್ದರು. ವಿಧಾನಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಸಿದ್ದಲಿಂಗಯ್ಯ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದರು.

ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿತ್ತು.

ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸಹಿತ ಹಲವು ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದರು. ಸರ್ಕಾರದ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನಡೆಸಲಾಗಿತ್ತು. ಇದೀಗ, ಅವರ ಹೆಸರನ್ನು ಬೆಂಗಳೂರಿನ ರಸ್ತೆ, ವೃತ್ತ ಅಥವಾ ಮೇಲ್ಸೇತುವೆಗೆ ಇಡಲು ಶ್ರೀರಾಮುಲು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Siddalingaiah Funeral: ಸಕಲ ಸರ್ಕಾರಿ ಗೌರವದೊಂದಿಗೆ ನಡೆದ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ; ಕೊನೆಯ ಫೋಟೊಗಳು ಇಲ್ಲಿವೆ

ಸಿದ್ದಲಿಂಗಯ್ಯ ನುಡಿನಮನ : ತಮ್ಮನ್ನು ತಾವೇ ಹಾಸ್ಯಕ್ಕೆ ಒಳಪಡಿಸಿಕೊಳ್ಳುತ್ತಿದ್ದುದರ ಹಿಂದೆ ತಾತ್ವಿಕತೆ ಇತ್ತು

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್