AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ದೆಹಲಿಗೆ ಹೋಗಿಲ್ಲ; ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ: ಸಿ ಪಿ ಯೋಗೇಶ್ವರ್

ಹವಾಮಾನ ವೈಪರಿತ್ಯದಿಂದ ವಿಮಾನ ಆಗಮನ ಒಂದು ಗಂಟೆ ತಡ ಆಯ್ತು ಎಂದು ಹೇಳಿದ್ದಾರೆ. ಬಳಿಕ, ರಾಜಕೀಯ ಹವಾಮಾನ ವೈಪರಿತ್ಯ ಸರಿ‌ ಹೋಗುತ್ತಾ ಸರ್ ಅನ್ನೋ ಪ್ರಶ್ನೆಗೆ ನಕ್ಕು ಸುಮ್ಮನೆ ಹೊರಟಿದ್ದಾರೆ.

ನಾನು ದೆಹಲಿಗೆ ಹೋಗಿಲ್ಲ; ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ: ಸಿ ಪಿ ಯೋಗೇಶ್ವರ್
ಸಚಿವ ಸಿ.ಪಿ.ಯೋಗೇಶ್ವರ್
TV9 Web
| Updated By: ganapathi bhat|

Updated on:Jun 16, 2021 | 7:03 PM

Share

ಬೆಂಗಳೂರು: ರಾಜಕೀಯವಾಗಿ ನಾನು ಏನೂ ಮಾತನಾಡಲ್ಲ. ನಾನು ದೆಹಲಿಗೆ ಹೋಗಿಲ್ಲ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ವೈಯಕ್ತಿಕ ಕೆಲಸಕ್ಕೆ ನಾನು ಹೈದರಾಬಾದ್‌ಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ, ಬಿಜೆಪಿ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆ ಯೋಗೇಶ್ವರ್ ಮತ್ತೆ ದೆಹಲಿಗೆ ಹೋಗಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ಏರ್​ಪೋರ್ಟ್​ನಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನು ನೇರವಾಗಿ ಅರುಣ್ ಸಿಂಗ್ ಸಭೆಗೆ ಹೋಗ್ತೀನಿ. ಎಲ್ಲಾ ಸರಿ ಹೋಗಬಹುದು. ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ. ಬಿಜೆಪಿಯ ಯಾವ ನಾಯಕರನ್ನೂ ನಾನು ಭೇಟಿಯಾಗಿಲ್ಲ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ಹವಾಮಾನ ವೈಪರಿತ್ಯದಿಂದ ವಿಮಾನ ಆಗಮನ ಒಂದು ಗಂಟೆ ತಡ ಆಯ್ತು ಎಂದು ಹೇಳಿದ್ದಾರೆ. ಬಳಿಕ, ರಾಜಕೀಯ ಹವಾಮಾನ ವೈಪರಿತ್ಯ ಸರಿ‌ ಹೋಗುತ್ತಾ ಸರ್ ಅನ್ನೋ ಪ್ರಶ್ನೆಗೆ ನಕ್ಕು ಸುಮ್ಮನೆ ಹೊರಟಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರ ಜೊತೆ ಅರುಣ್​ ಸಿಂಗ್​ ಸಭೆ ಆರಂಭವಾಗಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಭೆ ನಡೆಸುತ್ತಿದ್ದಾರೆ. ಡಿಸಿಎಂಗಳಾದ ಕಾರಜೋಳ, ಲಕ್ಷ್ಮಣ ಸವದಿ, ಡಾ.ಅಶ್ವತ್ಥ್‌ ನಾರಾಯಣ, ಸಚಿವರಾದ ಜೆ.ಸಿ.ಮಾಧುಸ್ವಾಮಿ, ಸುರೇಶ್ ಕುಮಾರ್, ಶ್ರೀರಾಮುಲು, ಈಶ್ವರಪ್ಪ, ಪ್ರಭು ಚೌಹಾಣ್, ಲಿಂಬಾವಳಿ, ಸಚಿವೆ ಜೊಲ್ಲೆ, ಅಂಗಾರ, ಕೋಟ ಶ್ರೀನಿವಾಸ​ ಪೂಜಾರಿ, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್, ಶೆಟ್ಟರ್​, ನಿರಾಣಿ, ಉಮೇಶ್​ ಕತ್ತಿ, ಯೋಗೇಶ್ವರ್‌ ಸೇರಿ 32 ಸಚಿವರು ಭಾಗಿಯಾಗಿದ್ದಾರೆ.

ಸೋಮವಾರ ಸಚಿವ ಸಂಪುಟ ಸಭೆ ಸೋಮವಾರ ಸಂಜೆ 4 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ನಿಗದಿಯಾಗಿದೆ. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಸಂಪುಟ ಸಭೆ ನಡೆಯಲಿದೆ. ಜೂನ್ 21ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ, ಯಡಿಯೂರಪ್ಪ ಸರ್ಕಾರ ಮಾತ್ರ ಫೀಲ್ಡ್​​ನಲ್ಲಿದೆ: ಅರುಣ್ ಸಿಂಗ್ ವ್ಯಾಖ್ಯಾನ

ಮುಖ್ಯಮಂತ್ರಿ ಬದಲಾವಣೆಗೆ ಅರುಣ್ ಸಿಂಗ್ ಬರುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು: ಆರ್ ಅಶೋಕ್

Published On - 6:59 pm, Wed, 16 June 21

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?