AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್

Prabhu Chauhan: ನಾನು ಇಲಾಖೆ ಸಚಿವನಾದ ನಂತರ ಗೋ ಸಾಗಾಣಿಕೆ ಬಗ್ಗೆ ಹೆಚ್ಚು ಪ್ರಕರಣ ದಾಖಲಿಸಿದ್ದೇನೆ. ಎರಡು ಕೇಸ್ ಹಾಕಿ, ದೊಡ್ಡ ಮಟ್ಟದ ದಂಡ ಹಾಕಿದರೆ ಎಲ್ಲ ಸರಿಯಾಗುತ್ತೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಔಹಾಣ್ ಹೇಳಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 11, 2021 | 9:26 PM

Share

ಮೈಸೂರು: ಗೋಮಾತೆಯ ಸಂರಕ್ಷಣೆಯೇ ನಮ್ಮ ಹೊಣೆಯಾಗಿದೆ. ಇನ್ನುಮುಂದೆ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ ಮಾಡಲಾಗುತ್ತದೆ. ಈಗ ಕಾಯ್ದೆಯ ವಿರುದ್ಧ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಎಲ್ಲ ಮುಗಿದ ಬಳಿಕ ಕಾಯ್ದೆ ಮತ್ತಷ್ಟು ಬಿಗಿ ಮಾಡ್ತೇವೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಚೌಹಾಣ್ ಇಂದು (ಆಗಸ್ಟ್ 11) ಹೇಳಿಕೆ ನೀಡಿದ್ದಾರೆ.

ಖಾತೆಯಲ್ಲಿ ಚಿಕ್ಕದು ದೊಡ್ಡದು ಎಂಬುದು ಇಲ್ಲ. ನನಗೆ ಕೊಟ್ಟ ಖಾತೆಯನ್ನ ಖುಷಿಯಿಂದ ಸ್ವೀಕರಿಸಿದ್ದೇನೆ ಎಂದು ಸಚಿವ ಸಂಪುಟ ರಚನೆ ಬಳಿಕ ತಮಗೆ ಲಭಿಸಿರುವ ಖಾತೆಯ ಬಗ್ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನು ಹೈಕಮಾಂಡ್, ಮುಖ್ಯಮಂತ್ರಿ ಸರಿಪಡಿಸುತ್ತಾರೆ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ನನಗೆ ಕೊಟ್ಟಿರುವ ಖಾತೆ ಬಗ್ಗೆ ಖುಷಿ ಇದೆ. ಕಳೆದ ಬಾರಿ ನೀಡಿದ ಖಾತೆಯನ್ನು ಈ ಬಾರಿ ನೀಡಿದ್ದಾರೆ. ಖಾತೆಯಲ್ಲಿ ದೊಡ್ಡದು ಚಿಕ್ಕದು ಎಂಬುದಿಲ್ಲ. ನಾನು ಖುಷಿಯಿಂದಲೆ ಈ ಖಾತೆ ಪಡೆದಿದ್ದೇನೆ. ಗೋಮಾತೆ ಸಂರಕ್ಷಣೆ ನಮ್ಮ ಹೊಣೆ. ಆ ಕೆಲಸವನ್ನ ನಾನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಇಲಾಖೆ ಸಚಿವನಾದ ನಂತರ ಗೋ ಸಾಗಾಣಿಕೆ ಬಗ್ಗೆ ಹೆಚ್ಚು ಪ್ರಕರಣ ದಾಖಲಿಸಿದ್ದೇನೆ. ಎರಡು ಕೇಸ್ ಹಾಕಿ, ದೊಡ್ಡ ಮಟ್ಟದ ದಂಡ ಹಾಕಿದರೆ ಎಲ್ಲ ಸರಿಯಾಗುತ್ತೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಔಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್

ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

(BJP Minister Prabhu Chauhan on Cow Slaughter issue Gou Shala at every districts)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್