AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್

Prabhu Chauhan: ನಾನು ಇಲಾಖೆ ಸಚಿವನಾದ ನಂತರ ಗೋ ಸಾಗಾಣಿಕೆ ಬಗ್ಗೆ ಹೆಚ್ಚು ಪ್ರಕರಣ ದಾಖಲಿಸಿದ್ದೇನೆ. ಎರಡು ಕೇಸ್ ಹಾಕಿ, ದೊಡ್ಡ ಮಟ್ಟದ ದಂಡ ಹಾಕಿದರೆ ಎಲ್ಲ ಸರಿಯಾಗುತ್ತೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಔಹಾಣ್ ಹೇಳಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ; ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ: ಪ್ರಭು ಚೌಹಾಣ್
ಪ್ರಭು ಚೌಹಾಣ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Aug 11, 2021 | 9:26 PM

Share

ಮೈಸೂರು: ಗೋಮಾತೆಯ ಸಂರಕ್ಷಣೆಯೇ ನಮ್ಮ ಹೊಣೆಯಾಗಿದೆ. ಇನ್ನುಮುಂದೆ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆ ಮತ್ತಷ್ಟು ಬಿಗಿ ಮಾಡಲಾಗುತ್ತದೆ. ಈಗ ಕಾಯ್ದೆಯ ವಿರುದ್ಧ ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಎಲ್ಲ ಮುಗಿದ ಬಳಿಕ ಕಾಯ್ದೆ ಮತ್ತಷ್ಟು ಬಿಗಿ ಮಾಡ್ತೇವೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಚೌಹಾಣ್ ಇಂದು (ಆಗಸ್ಟ್ 11) ಹೇಳಿಕೆ ನೀಡಿದ್ದಾರೆ.

ಖಾತೆಯಲ್ಲಿ ಚಿಕ್ಕದು ದೊಡ್ಡದು ಎಂಬುದು ಇಲ್ಲ. ನನಗೆ ಕೊಟ್ಟ ಖಾತೆಯನ್ನ ಖುಷಿಯಿಂದ ಸ್ವೀಕರಿಸಿದ್ದೇನೆ ಎಂದು ಸಚಿವ ಸಂಪುಟ ರಚನೆ ಬಳಿಕ ತಮಗೆ ಲಭಿಸಿರುವ ಖಾತೆಯ ಬಗ್ಗೆ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.

ಖಾತೆ ಹಂಚಿಕೆ ಬಗ್ಗೆ ಅಸಮಾಧಾನ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನು ಹೈಕಮಾಂಡ್, ಮುಖ್ಯಮಂತ್ರಿ ಸರಿಪಡಿಸುತ್ತಾರೆ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ನನಗೆ ಕೊಟ್ಟಿರುವ ಖಾತೆ ಬಗ್ಗೆ ಖುಷಿ ಇದೆ. ಕಳೆದ ಬಾರಿ ನೀಡಿದ ಖಾತೆಯನ್ನು ಈ ಬಾರಿ ನೀಡಿದ್ದಾರೆ. ಖಾತೆಯಲ್ಲಿ ದೊಡ್ಡದು ಚಿಕ್ಕದು ಎಂಬುದಿಲ್ಲ. ನಾನು ಖುಷಿಯಿಂದಲೆ ಈ ಖಾತೆ ಪಡೆದಿದ್ದೇನೆ. ಗೋಮಾತೆ ಸಂರಕ್ಷಣೆ ನಮ್ಮ ಹೊಣೆ. ಆ ಕೆಲಸವನ್ನ ನಾನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಇಲಾಖೆ ಸಚಿವನಾದ ನಂತರ ಗೋ ಸಾಗಾಣಿಕೆ ಬಗ್ಗೆ ಹೆಚ್ಚು ಪ್ರಕರಣ ದಾಖಲಿಸಿದ್ದೇನೆ. ಎರಡು ಕೇಸ್ ಹಾಕಿ, ದೊಡ್ಡ ಮಟ್ಟದ ದಂಡ ಹಾಕಿದರೆ ಎಲ್ಲ ಸರಿಯಾಗುತ್ತೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ಔಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿವರ್ಷ 2 ಲಕ್ಷ ಗೋವುಗಳ ರಕ್ಷಣೆ ಮಾಡಬೇಕಿದೆ, ಈ ಇಲಾಖೆಯಲ್ಲೇ ಮುಂದುವರೆಯುವ ಇಚ್ಛೆಯಿದೆ: ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್

ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

(BJP Minister Prabhu Chauhan on Cow Slaughter issue Gou Shala at every districts)

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ