AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್.ಸಿ. ಮಹದೇವಪ್ಪಗೆ ಬಿಜೆಪಿ ಸಚಿವರ ಮೆಚ್ಚುಗೆ, ಕಾಂಗ್ರೆಸ್‌ ಬಗ್ಗೆ HC ವಿಷಾದ!

ಮೈಸೂರು: ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ರಸ್ತೆ ಕಾಮಗಾರಿ ಚೆನ್ನಾಗಿ ನಡೆದಿತ್ತು ಎಂದು ಬಿಜೆಪಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿ, ಮಾಜಿ ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆವರು ಕಾಂಗ್ರೆಸ್​ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವಿದ್ದಾಗ ಅವರ ತವರು ಜಿಲ್ಲೆಯಲ್ಲಿಯೇ ಅವರ ಅತ್ಯಾಪ್ತ ಮಿತ್ರನ ತುಳಿಯುವ ಪ್ರಯತ್ನ ನಡೆದಿತ್ತಾ ಎಂಬ ಗುಮಾನಿ ಎದ್ದಿದೆ. ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಮಹದೇವಪ್ಪ ಅವರು ಬಿಜೆಪಿ ಸಚಿವರ ಮೆಚ್ಚುಗೆಯಂತಹ ಬೆಳವಣಿಗೆ ರಾಜಕೀಯ ವ್ಯವಸ್ಥೆಯಲ್ಲಿ ಆಗಬೇಕು. ಒಂದು ಸರ್ಕಾರದ […]

ಹೆಚ್.ಸಿ. ಮಹದೇವಪ್ಪಗೆ ಬಿಜೆಪಿ ಸಚಿವರ ಮೆಚ್ಚುಗೆ, ಕಾಂಗ್ರೆಸ್‌ ಬಗ್ಗೆ HC ವಿಷಾದ!
ಸಾಧು ಶ್ರೀನಾಥ್​
|

Updated on:Dec 21, 2019 | 3:25 PM

Share

ಮೈಸೂರು: ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ರಸ್ತೆ ಕಾಮಗಾರಿ ಚೆನ್ನಾಗಿ ನಡೆದಿತ್ತು ಎಂದು ಬಿಜೆಪಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿ, ಮಾಜಿ ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆವರು ಕಾಂಗ್ರೆಸ್​ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತವಿದ್ದಾಗ ಅವರ ತವರು ಜಿಲ್ಲೆಯಲ್ಲಿಯೇ ಅವರ ಅತ್ಯಾಪ್ತ ಮಿತ್ರನ ತುಳಿಯುವ ಪ್ರಯತ್ನ ನಡೆದಿತ್ತಾ ಎಂಬ ಗುಮಾನಿ ಎದ್ದಿದೆ.

ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಮಹದೇವಪ್ಪ ಅವರು ಬಿಜೆಪಿ ಸಚಿವರ ಮೆಚ್ಚುಗೆಯಂತಹ ಬೆಳವಣಿಗೆ ರಾಜಕೀಯ ವ್ಯವಸ್ಥೆಯಲ್ಲಿ ಆಗಬೇಕು. ಒಂದು ಸರ್ಕಾರದ ಯೋಜನೆಗಳನ್ನ ಮತ್ತೊಂದು ಸರ್ಕಾರ ಪ್ರಶಂಸೆ ಮಾಡುವಂತಿರಬೇಕು. ನನ್ನ ಕೆಲಸದ ಬಗ್ಗೆ ಹೊಗಳಿಕೆ ಮಾಡಿದ್ದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಎಲ್ಲಿ ದೊಡ್ಡಮಟ್ಟದ ನಾಯಕನಾಗುತ್ತೇನೋ ಎಂಬ ಆತಂಕ ನಮ್ಮ ನಾಯಕರಿಗಿತ್ತು! ನನ್ನ ಅವಧಿ ಕೆಲಸಗಳ ಬಗ್ಗೆ ಸಿಎಂ ಹಾಗೂ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ. ಆದ್ರೆ ನನ್ನ ಕೆಲಸವನ್ನ‌ ನಮ್ಮವರೇ ಬಳಸಿಕೊಳ್ಳಲಿಲ್ಲ. ಅದ್ಯಾಕೋ ಏನೋ ನಮ್ಮವರು ಅದನ್ನ ಉಪಯೋಗಿಕೊಳ್ಳಲೇ ಇಲ್ಲ. ಎಲ್ಲಿ ಕಾಂಗ್ರೆಸ್‌ನಲ್ಲಿ ನಾನು ದೊಡ್ಡಮಟ್ಟದ ನಾಯಕನಾಗುತ್ತೇನೋ ಅಂತಾನೋ ಏನೋ ಗೊತ್ತಿಲ್ಲ. ವಿಪರ್ಯಾಸವೆಂದ್ರೆ ನಮ್ಮ ಕೆಲಸದ ಬಗ್ಗೆ ಈಗ ಬೇರೆಯವರು ಮಾತನಾಡುತ್ತಿದ್ದಾರೆ ಎಂದು ವಿಷಾದದ ದನಿಯಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.

Published On - 1:44 pm, Sat, 21 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?