AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

ಕೋವಿಡ್ ಸೋಂಕು ಇಳಿಮುಖ ಅಗಲಿ. ನನ್ನ ಹೋರಾಟ ಶುರುವಾಗಲಿದೆ.‌ ಯೋಗೇಶ್ವರ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
TV9 Web
| Edited By: |

Updated on:Aug 14, 2021 | 12:50 PM

Share

ದಾವಣಗೆರೆ: ಸಿ.ಪಿ.ಯೋಗೇಶ್ವರ್‌ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಯೋಗೇಶ್ವರ್‌ರನ್ನು ಬಂಧಿಸಬೇಕು. ಈಗಾಗಲೇ 65 ಶಾಸಕರು ಸಹಿ ಮಾಡಿದ್ದ ಪತ್ರ ನೀಡಿದ್ದಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸ್ವಪಕ್ಷದ ಸಚಿವರ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಲೇ 65 ಜನ ಶಾಸಕರು ಸಹಿ ಮಾಡಿ ಪತ್ರ ನೀಡಿದ್ದಾರೆ. ಆ ಮೂಲಕ, ಸಿ.ಪಿ. ಯೋಗೇಶ್ವರ್​ನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಯೋಗೇಶ್ವರಗೆ ಜಲ ಸಂಪನ್ಮೂಲ ಹಾಗೂ ಇಂಧನ ಖಾತೆ ಜೊತೆಗೆ ರಾಮನಗರ ಜಿಲ್ಲೆಯ ಉಸ್ತುವಾರಿ ಬೇಕಾಗಿತ್ತು ಅದು ಸಿಕ್ಕಿಲ್ಲ. ಇದೇ ಕಾರಣಕ್ಕೆ ಅವರಿಗೆ ತಳಮಳ ಶುರುವಾಗಿದೆ ಎಂದು ಸಚಿವ ಯೋಗೇಶ್ವರ್ ವಿರುದ್ಧ ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದೆಹಲಿ ನಾಯಕರ ಮನೆಯ ಗೇಟ್ ಮುಟ್ಟಿ ಅಲ್ಲಿ ಪೋಟೋ ತೆಗೆಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಕೋವಿಡ್ ಸೋಂಕು ಇಳಿಮುಖ ಅಗಲಿ. ನನ್ನ ಹೋರಾಟ ಶುರುವಾಗಲಿದೆ.‌ ಯೋಗೇಶ್ವರ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಮತ್ತೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಂದುವರಿಕೆ ವಿಚಾರವಾಗಿ ಹೊಸಕೋಟೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಮುಂದುವರಿಕೆ ಹೈಕಮಾಂಡ್​ಗೆ ಬಿಟ್ಟಿದ್ದು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬದಲಾವಣೆ ಸೂಕ್ತವಲ್ಲ. ನಾಯಕತ್ವ ಬದಲಾವಣೆ ಇನ್ನೇನೋ ಮಾಡುವುದು ಸೂಕ್ತವಲ್ಲ. ಈಗ ಸಿಎಂ ಬದಲಾವಣೆ, ಮುಂದುವರಿಕೆ ಬಗ್ಗೆ ಮಾತನಾಡಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಟೌನ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

ಸಚಿವಗಿರಿ ನನ್ನ ಮಗ ಚಲಾಯಿಸಿದರೆ ಒಪ್ಪಲ್ಲ.. ಪರೋಕ್ಷವಾಗಿ ಬಿ.ವೈ. ವಿಜಯೇಂದ್ರಗೆ ಟಾಂಗ್ ಕೊಟ್ಟ ಸಚಿವ ಸಿ.ಪಿ. ಯೋಗೇಶ್ವರ್

Published On - 4:35 pm, Tue, 1 June 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ