AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ

ಕೋವಿಡ್ ಸೋಂಕು ಇಳಿಮುಖ ಅಗಲಿ. ನನ್ನ ಹೋರಾಟ ಶುರುವಾಗಲಿದೆ.‌ ಯೋಗೇಶ್ವರ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸಿ ಪಿ ಯೋಗೇಶ್ವರ್​ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಬಂಧಿಸಬೇಕು: ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ
TV9 Web
| Edited By: |

Updated on:Aug 14, 2021 | 12:50 PM

Share

ದಾವಣಗೆರೆ: ಸಿ.ಪಿ.ಯೋಗೇಶ್ವರ್‌ರನ್ನು ಸಚಿವ ಸಂಪುಟದಿಂದ ಕೈಬಿಡಬೇಕು, ಮೆಗಾ ಸಿಟಿ ಹಗರಣದಲ್ಲಿ ಯೋಗೇಶ್ವರ್‌ರನ್ನು ಬಂಧಿಸಬೇಕು. ಈಗಾಗಲೇ 65 ಶಾಸಕರು ಸಹಿ ಮಾಡಿದ್ದ ಪತ್ರ ನೀಡಿದ್ದಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸ್ವಪಕ್ಷದ ಸಚಿವರ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಲೇ 65 ಜನ ಶಾಸಕರು ಸಹಿ ಮಾಡಿ ಪತ್ರ ನೀಡಿದ್ದಾರೆ. ಆ ಮೂಲಕ, ಸಿ.ಪಿ. ಯೋಗೇಶ್ವರ್​ನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಯೋಗೇಶ್ವರಗೆ ಜಲ ಸಂಪನ್ಮೂಲ ಹಾಗೂ ಇಂಧನ ಖಾತೆ ಜೊತೆಗೆ ರಾಮನಗರ ಜಿಲ್ಲೆಯ ಉಸ್ತುವಾರಿ ಬೇಕಾಗಿತ್ತು ಅದು ಸಿಕ್ಕಿಲ್ಲ. ಇದೇ ಕಾರಣಕ್ಕೆ ಅವರಿಗೆ ತಳಮಳ ಶುರುವಾಗಿದೆ ಎಂದು ಸಚಿವ ಯೋಗೇಶ್ವರ್ ವಿರುದ್ಧ ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ದೆಹಲಿ ನಾಯಕರ ಮನೆಯ ಗೇಟ್ ಮುಟ್ಟಿ ಅಲ್ಲಿ ಪೋಟೋ ತೆಗೆಸಿಕೊಂಡು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಕೋವಿಡ್ ಸೋಂಕು ಇಳಿಮುಖ ಅಗಲಿ. ನನ್ನ ಹೋರಾಟ ಶುರುವಾಗಲಿದೆ.‌ ಯೋಗೇಶ್ವರ ಅವರನ್ನ ವಜಾ ಮಾಡಬೇಕು. ಜೊತೆಗೆ ಮೆಗಾ ಸಿಟಿ ಹಗರಣದ ಹಿನ್ನೆಲೆ ಬಂಧಿಸಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಮತ್ತೊಂದೆಡೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಂದುವರಿಕೆ ವಿಚಾರವಾಗಿ ಹೊಸಕೋಟೆಯಲ್ಲಿ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ಮುಂದುವರಿಕೆ ಹೈಕಮಾಂಡ್​ಗೆ ಬಿಟ್ಟಿದ್ದು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬದಲಾವಣೆ ಸೂಕ್ತವಲ್ಲ. ನಾಯಕತ್ವ ಬದಲಾವಣೆ ಇನ್ನೇನೋ ಮಾಡುವುದು ಸೂಕ್ತವಲ್ಲ. ಈಗ ಸಿಎಂ ಬದಲಾವಣೆ, ಮುಂದುವರಿಕೆ ಬಗ್ಗೆ ಮಾತನಾಡಬಾರದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಟೌನ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

ಸಚಿವಗಿರಿ ನನ್ನ ಮಗ ಚಲಾಯಿಸಿದರೆ ಒಪ್ಪಲ್ಲ.. ಪರೋಕ್ಷವಾಗಿ ಬಿ.ವೈ. ವಿಜಯೇಂದ್ರಗೆ ಟಾಂಗ್ ಕೊಟ್ಟ ಸಚಿವ ಸಿ.ಪಿ. ಯೋಗೇಶ್ವರ್

Published On - 4:35 pm, Tue, 1 June 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ