AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದದ ವಿವರ ಇಲ್ಲಿದೆ ನೋಡಿ

ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು ಇದೀಗ ಅವರ ಜಾಮೀನಿ ಅರ್ಜಿ ಆದೇಶವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.

ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದದ ವಿವರ ಇಲ್ಲಿದೆ ನೋಡಿ
ಬಿಜೆಪಿ ಶಾಸಕ ಮುನಿರತ್ನ
ರಮೇಶ್​ ಎಮ್​.
| Edited By: |

Updated on: Sep 18, 2024 | 2:47 PM

Share

ಬೆಂಗಳೂರು, (ಸೆಪ್ಟೆಂಬರ್ 18): ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ​ ಇಂದು (ಸೆ.18) ಬೆಂಗಳೂರಿನ ವಿಶೇಷ ನ್ಯಾಯಾಲಯವು, ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ(ಸೆಪ್ಟೆಂಬರ್ 19) ಕಾಯ್ದಿರಿಸಿದ್ದಾರೆ. ಈ

ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) r,s ಸೆಕ್ಷನ್ ಅನ್ವಯಿಸುವುದಿಲ್ಲವೆಂದು ಎಸ್ ಪಿಪಿ ಒಪ್ಪಿಕೊಂಡಿದ್ದಾರೆ. 3 (1) u ಅಡಿಯೂ ದೂರಿನಲ್ಲಿನ ಆರೋಪ ಅನ್ವಯವಾಗುವುದಿಲ್ಲ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ (ಸೆ.19) ಆದೇಶ ಕಾಯ್ದಿರಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮೊದಲ ಎಫ್‌ಐಆರ್​ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!