AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್​ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ
ಬಿಜೆಪಿ ಶಾಸಕ ಮುನಿರತ್ನ
Shivaprasad B
| Edited By: |

Updated on: Sep 20, 2024 | 9:26 AM

Share

ಬೆಂಗಳೂರು, ಸೆಪ್ಟೆಂಬರ್ 20: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಇದೀಗ ಬೆಳಕಿಗೆ ಬರುತ್ತಿದೆ. ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ ಎಂದು ಅತ್ಯಾಚಾರ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು. ಅತ್ಯಾಚಾರ ಸಂತ್ರಸ್ತೆ ಮೂಲಕ ಹನಿಟ್ರ್ಯಾಪ್​​ಗೆ ಯತ್ನಿಸಿದ್ದರು. ಹನಿಟ್ರ್ಯಾಪ್​ಗೆ ಅಮಾಯಕ ಹೆಚ್​​ಐವಿ ಸೋಂಕಿತರನ್ನೂ ಬಳಸಾಗುತ್ತಿತ್ತು ಎಂಬ ಗಂಭೀರ ಆರೋಪಗಳು ಇದೀಗ ಕೇಳಿಬಂದಿವೆ. ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಟ್ರಾಸಿಟಿ ಕೇಸ್ ದುರ್ಬಳಕೆಯ ಆರೋಪ

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್​​ಗಳ ದುರ್ಬಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್​​ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್​​ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್​ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್​ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.

ಮುನಿರತ್ನ ಮತ್ತೆ ಬಂಧನ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನರನ್ನು ಮತ್ತೆ ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ

ಮುನಿರತ್ನ ವಿರುದ್ಧ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಗುರುವಾರವಷ್ಟೇ ಜಾಮೀನು‌ ಮಂಜೂರಾಗಿತ್ತು. ಜೈಲಿನಿಂದ ಹೊರಬಂದ ಕೂಡಲೇ ಇದೀಗ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Shivaprasad B
Shivaprasad B
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು