AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್​ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ
ಬಿಜೆಪಿ ಶಾಸಕ ಮುನಿರತ್ನ
Shivaprasad B
| Edited By: |

Updated on: Sep 20, 2024 | 9:26 AM

Share

ಬೆಂಗಳೂರು, ಸೆಪ್ಟೆಂಬರ್ 20: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಇದೀಗ ಬೆಳಕಿಗೆ ಬರುತ್ತಿದೆ. ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ ಎಂದು ಅತ್ಯಾಚಾರ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು. ಅತ್ಯಾಚಾರ ಸಂತ್ರಸ್ತೆ ಮೂಲಕ ಹನಿಟ್ರ್ಯಾಪ್​​ಗೆ ಯತ್ನಿಸಿದ್ದರು. ಹನಿಟ್ರ್ಯಾಪ್​ಗೆ ಅಮಾಯಕ ಹೆಚ್​​ಐವಿ ಸೋಂಕಿತರನ್ನೂ ಬಳಸಾಗುತ್ತಿತ್ತು ಎಂಬ ಗಂಭೀರ ಆರೋಪಗಳು ಇದೀಗ ಕೇಳಿಬಂದಿವೆ. ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಟ್ರಾಸಿಟಿ ಕೇಸ್ ದುರ್ಬಳಕೆಯ ಆರೋಪ

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್​​ಗಳ ದುರ್ಬಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್​​ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್​​ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್​ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್​ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.

ಮುನಿರತ್ನ ಮತ್ತೆ ಬಂಧನ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನರನ್ನು ಮತ್ತೆ ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ

ಮುನಿರತ್ನ ವಿರುದ್ಧ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಗುರುವಾರವಷ್ಟೇ ಜಾಮೀನು‌ ಮಂಜೂರಾಗಿತ್ತು. ಜೈಲಿನಿಂದ ಹೊರಬಂದ ಕೂಡಲೇ ಇದೀಗ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ