AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೇ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​
ಮುನಿರತ್ನ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Sep 22, 2024 | 11:23 AM

Share

ಬೆಂಗಳೂರು, ಸೆಪ್ಟೆಂಬರ್​ 22: ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ವಾಹನ ನೀಡಲು 1 ಲಕ್ಷ ರೂ. ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಉಷಾ ಕೇಳಿದ್ದಾರೆ ಅಂತ ಫಲಾನುಭವಿಯೊಬ್ಬರು ಕಾಂಗ್ರೆಸ್​ ಮುಖಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿದ ಸರ್ಕಾರ

3 ಲಕ್ಷ ರೂ. ಮೌಲ್ಯದ ವಾಹನ ನೀಡಲು 1 ಲಕ್ಷ ರೂ. ಲಂಚ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಲೇ 20 ಸಾವಿರ ರೂ. ಕೊಟ್ಟಿದ್ದೇನೆ. ವಾಹನ ಕೊಡಬೇಕೆಂದರೆ ಇನ್ನೂ 80 ಸಾವಿರ ಕೊಡಿ ಎಂದು ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದಾರೆ ಎಂದು ಫಲಾನುಭವಿ ಮತ್ತು ಕಾಂಗ್ರೆಸ್​ ಮುಖಂಡ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ.

ಸಾಕ್ಷಿಗಳಿಗೆ ಬೆದರಿಕೆ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Sun, 22 September 24

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ