AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೇ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​
ಮುನಿರತ್ನ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 22, 2024 | 11:23 AM

Share

ಬೆಂಗಳೂರು, ಸೆಪ್ಟೆಂಬರ್​ 22: ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ವಾಹನ ನೀಡಲು 1 ಲಕ್ಷ ರೂ. ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಉಷಾ ಕೇಳಿದ್ದಾರೆ ಅಂತ ಫಲಾನುಭವಿಯೊಬ್ಬರು ಕಾಂಗ್ರೆಸ್​ ಮುಖಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿದ ಸರ್ಕಾರ

3 ಲಕ್ಷ ರೂ. ಮೌಲ್ಯದ ವಾಹನ ನೀಡಲು 1 ಲಕ್ಷ ರೂ. ಲಂಚ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಲೇ 20 ಸಾವಿರ ರೂ. ಕೊಟ್ಟಿದ್ದೇನೆ. ವಾಹನ ಕೊಡಬೇಕೆಂದರೆ ಇನ್ನೂ 80 ಸಾವಿರ ಕೊಡಿ ಎಂದು ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದಾರೆ ಎಂದು ಫಲಾನುಭವಿ ಮತ್ತು ಕಾಂಗ್ರೆಸ್​ ಮುಖಂಡ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ.

ಸಾಕ್ಷಿಗಳಿಗೆ ಬೆದರಿಕೆ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Sun, 22 September 24

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ