AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಸುಧಾ ಮೂರ್ತಿ ದಂಪತಿ ಖಾಸಗಿ ಮಾಹಿತಿ ಬಹಿರಂಗ; ಶಾಸಕ ಸುರೇಶ್​ ಕುಮಾರ್​ ಕಿಡಿ

ಜಾತಿ ಗಣತಿಯಲ್ಲಿ ಭಾಗವಹಿಸಲ್ಲ ಎಂದು ಇನ್ಪೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಬರೆದಿದ್ದ ಪತ್ರ ವೈರಲ್​ ಆಗಿರುವ ಬಗ್ಗೆ ಬಿಜೆಪಿ ಶಾಸಕ ಸುರೇಶ್​ ಕುಮಾರ್​ ಕಿಡಿ ಕಾರಿದ್ದಾರೆ. ಜನರ ಖಾಸಗಿ ಸ್ವಾತಂತ್ರ್ಯ ಉಲ್ಲಂಘಿಸೋದಾಗಿ ಭರವಸೆ ನೀಡಿದ್ದು ಮಾತ್ರವಲ್ಲದೇ, ಹೈಕೋರ್ಟ್​ನಲ್ಲೂ ಈ ಬಗ್ಗೆ ತಿಳಿಸಿದ್ದ ಸರ್ಕಾರ ಈಗ ಮಾತ ತಪ್ಪಿದೆ ಎಂದು ಅವರು ಆರೋಪಿಸಿದ್ದಾರೆ.

ಜಾತಿ ಗಣತಿ: ಸುಧಾ ಮೂರ್ತಿ ದಂಪತಿ ಖಾಸಗಿ ಮಾಹಿತಿ ಬಹಿರಂಗ; ಶಾಸಕ ಸುರೇಶ್​ ಕುಮಾರ್​ ಕಿಡಿ
ಮಾತು ತಪ್ಪಿತಾ ರಾಜ್ಯ ಸರ್ಕಾರ?
ಪ್ರಸನ್ನ ಹೆಗಡೆ
|

Updated on: Oct 16, 2025 | 7:35 PM

Share

ಬೆಂಗಳೂರು, ಅಕ್ಟೋಬರ್​ 16: ರಾಜ್ಯದಲ್ಲಿ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ (Caste Census) ನಡೆಯುತ್ತಿದ್ದು, ಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು. ಹೈಕೋರ್ಟ್​ ಮುಂದೆ ಈ ವಿಚಾರ ಬಂದಾಗಲೂ ಎಲ್ಲರ ಖಾಸಗಿ ಸ್ವಾತಂತ್ರ್ಯವನ್ನು ರಕ್ಷಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರ ವಂಚಿಸಿದೆ. ನ್ಯಾಯಾಂಗಕ್ಕೆ ಕೊಟ್ಟಿರುವ ಭರವಸೆಯನ್ನು ಉಲ್ಲಂಘಿಸಿದೆ ಎಂದು ಬಿಜೆಪಿ ಶಾಸಕ ಎಸ್​. ಸುರೇಶ್​ ಕುಮಾರ್​ ಅರೋಪಿಸಿದ್ದಾರೆ.

ಇನ್ಪೋಸಿಸ್‌ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಸಮೀಕ್ಷೆಯ ಸಂದರ್ಭದಲ್ಲಿ ಅವರ ಮನೆಗೆ ಬಂದಿದ್ದ ತಂಡಕ್ಕೆ ನೀಡಿರುವ ಪತ್ರ ಸಾಮಾಜಿಕ ಜಾಲತಾಣವೂ ಸೇರಿದಂತೆ ಎಲ್ಲ ಕಡೆ ಹರಿದಾಡುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯ. ನಾರಾಯಣ ಮೂರ್ತಿ ಮತ್ತು ಕುಟುಂಬದವರು ಸಹಿ ಮಾಡಿರುವ ಪತ್ರ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಸಮೀಕ್ಷೆಯ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆಂದು ಸರ್ಕಾರ ಹೇಳಿರುವಾಗ ಇದು ಜನರಿಗೆ ಮಾಡಿದ ವಂಚನೆ ಅಲ್ಲವೆ? ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾರಾಯಣಮೂರ್ತಿ ಕುಟುಂಬದವರು ನೀಡಿರುವ ಪತ್ರದ ಖಾಸಗಿತನಕ್ಕೆ ಗೌರವ ಕೊಟ್ಟಿಲ್ಲ. ಆ ಪತ್ರ ಬಹಿರಂಗವಾಗಿರುವ ಬಗ್ಗೆ ರಾಜ್ಯಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಆಗ್ರಹಿಸುತ್ತೇನೆ. ಇದು ಸರ್ಕಾರದ ಅಸಮರ್ಥತೆಯನ್ನು ಅಥವಾ ರಾಜ್ಯಕ್ಕೆ ಸರ್ಕಾರ ಸುಳ್ಳು ಹೇಳಿದೆ ಎಂಬುದನ್ನು ಸಾಬೀತುಗೊಳಿಸಿರುವ ವಿದ್ಯಮಾನ ಎಂದು ಸುರೇಶ್​ ಕುಮಾರ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿಗೆ ಮಾಹಿತಿ ನೀಡಲು ನಿರಾಕರಿಸಿದ ನಾರಾಯಣ ಮೂರ್ತಿ, ಸುಧಾಮೂರ್ತಿ ಕೊಟ್ಟ ಕಾರಣವಿದು

ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ದಂಪತಿ ಜಾತಿ ಸಮೀಕ್ಷೆಗೆ ಬರುವ ಸಿಬ್ಬಂದಿಗೆ ಮಾಹಿತಿ ನೀಡಲು ಹಿಂದೇಟು ಹಾಕಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ. ನಾವು ಹಿಂದುಳಿದ ಯಾವ ಜಾತಿಗೂ ಸೇರುವರಲ್ಲ ಎಂದು ಹೇಳಿದ್ದರು. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ದಂಪತಿ ಬರೆದಿದ್ದ ಪತ್ರ ವೈರಲ್​ ಆಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ