AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಬಜೆಟ್​ಗೆ ನೂರಕ್ಕೆ ನೂರು ಮಾರ್ಕ್ಸ್​​ ಕೊಟ್ಟ ಬಿಜೆಪಿ ಶಾಸಕರು

2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ 16ನೇ ಬಾರಿಗೆ ಆಯವ್ಯಯ ಮಂಡಿಸಿದ್ದಾರೆ. ಈ ಬಗ್ಗೆ ಬಿಜೆಜೆ ರೆಬೆಲ್​ ನಾಯಕರು ಹಾಡಿಹೊಗಳಿದ್ದಾರೆ. ಬಜೆಟ್​​ಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೇನೆ ಎಂದು ಮಾತು ಮಾತಿಗೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮರ್​ರನ್ನು ಬಿಜೆಪಿ ರೆಬೆಲ್​​ ಶಾಸಕರು ಹೊಗಳಿದ್ದಾರೆ.

ಸಿದ್ದರಾಮಯ್ಯ ಬಜೆಟ್​ಗೆ ನೂರಕ್ಕೆ ನೂರು ಮಾರ್ಕ್ಸ್​​ ಕೊಟ್ಟ ಬಿಜೆಪಿ ಶಾಸಕರು
ಸಿದ್ದರಾಮಯ್ಯ ಬಜೆಟ್​ಗೆ ನೂರಕ್ಕೆ ನೂರು ಮಾರ್ಕ್ಸ್​​ ಕೊಟ್ಟ ಬಿಜೆಪಿ ಶಾಸಕರು
Sunil MH
| Edited By: |

Updated on: Mar 07, 2025 | 3:52 PM

Share

ಬೆಂಗಳೂರು, ಮಾರ್ಚ್​​ 07: ಸಿಎಂ ಸಿದ್ದರಾಮಯ್ಯ (Siddaramaiah) ಇಂದು ತಮ್ಮ 16ನೇ ಬಜೆಟ್ (Budget) ಮಂಡನೆ ಮಾಡಿದ್ದಾರೆ. ಹತ್ತು ಹಲವು ಹೊಸ ಯೋಜನೆಗಳಿಗೆ ಅನುದಾನ ಘೋಷಿಸಲಾಗಿದೆ. ಇತ್ತ ವಿಪಕ್ಷ ಬಿಜೆಪಿ ನಾಯಕರು ಬಜೆಟ್ ವಿರುದ್ಧ ಕಿಡಿಕಾರಿದ್ದಾರೆ. ಇದು ಹಲಾಲ್, ಸಾಬರ ಬಜೆಟ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಬಿಜೆಪಿಯ ರೆಬೆಲ್​ ಶಾಸಕರು ಮಾತ್ರ ಸಿದ್ದರಾಮಯ್ಯ ಬಜೆಟ್​ ಅನ್ನು ಹಾಡಿಹೊಗಳಿದ್ದು, ಬಜೆಟ್​​ಗೆ ನೂರಕ್ಕೆ ನೂರು ಮಾರ್ಕ್ಸ್ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಹೇಳಿದ್ದಾರೆ.

ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ಸಂಬಂಧಪಟ್ಟಂತೆ ನಂಬರ್ ಒನ್ ಬಜೆಟ್ ಕೊಟ್ಟಿದ್ದಾರೆ. ಬಿಜೆಪಿ ಅವರಿಗೆ ಮುಸ್ಲಿಂ ಒಂದೇ, ಬೇರೆ ಏನೂ ಕಾಣಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Karnataka Budget Size: 4.09 ಲಕ್ಷ ಕೋಟಿ ರೂ ಗಾತ್ರದ ಬಜೆಟ್​​ನಲ್ಲಿ ಸರ್ಕಾರದ ಸಾಲ, ಖರ್ಚು ಮತ್ತು ವೆಚ್ಚಗಳ ವಿವರ

ಇದನ್ನೂ ಓದಿ
Image
ಕೇಂದ್ರದ ವಿರುದ್ಧ ಸಿದ್ದರಾಮಯ್ಯ ನಡೆಸಿದ ಬಜೆಟ್ ಪ್ರಹಾರಗಳಿವು
Image
ಮುಸಲ್ಮಾನರಿಗೆ ಮೀಸಲಾತಿ ನೀಡಿದ್ದನ್ನು ಕೋರ್ಟಲ್ಲಿ ಪ್ರಶ್ನಿಸುತ್ತೇವೆ: ಶಾಸಕ
Image
ಬಜೆಟ್​​ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೆಷ್ಟು?
Image
ಮನಮೋಹನ್ ಸಿಂಗ್ ಯೂನಿವರ್ಸಿಟಿಯಾಗಲಿರುವ ಬೆಂಗಳೂರು ವಿವಿ

ಬಿಜೆಪಿ ಶಾಸಕನಾಗಿ ಹೇಳುತ್ತಿದ್ದೇನೆ ನೂರಕ್ಕೆ ನೂರು ಬೆಂಗಳೂರಿಗೆ ಒಳ್ಳೆಯ ಬಜೆಟ್ ಘೋಷಣೆ ಮಾಡಿದ್ದಾರೆ. ಯಾವ ಸರ್ಕಾರದಲ್ಲಿ ಸಾಲ ಮಾಡಿಲ್ಲ ಹೇಳಿ. ಸಾಲ ಮಾಡಲಿ ಏನೇ ಮಾಡಲಿ ಬೆಂಗಳೂರಿಗೆ ಒಳ್ಳೆಯ ಬಜೆಟ್ ಘೋಷಣೆ ಮಾಡಿದ್ದಾರೆ ಎಂದಿದ್ದಾರೆ.

ಇದೊಂದು ಒಳ್ಳೆಯ ಬಜೆಟ್ ಎಂದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸಮಾಜಮುಖಿ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ವರ್ಗದ ಸಮುದಾಯಕ್ಕೂ ಯೋಜನೆಗಳನ್ನು ನೀಡಿದ್ದಾರೆ. ಕರಾವಳಿ ಭಾಗದಲ್ಲಿ ಒಳ್ಳೆಯ ಯೋಜನೆಗಳನ್ನು ಘೋಷಿಸಿದ್ದಾರೆ ಎಂದು ತಿಳಿಸಿದರು.

ನಾನು ಯಾವುದೇ ಪಕ್ಷದ ಪರವಾಗಿ ಮಾತನಾಡುತ್ತಿಲ್ಲ. ಶಾಸಕನಾಗಿ ಹೇಳುತ್ತಿದ್ದೇನೆ, ಇದೊಂದು ಒಳ್ಳೆಯ ಬಜೆಟ್. ಬಜೆಟ್​ ಕುರಿತು ಬಿಜೆಪಿ ನಾಯಕರು ಆರೋಪ ಮಾಡಲಿ. ನಾನು ಶಾಸಕನಾಗಿ ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Budget 2025: ಬಜೆಟ್ ಬ್ಯಾಗ್​ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ಶಾಸಕ ಎಸ್​​ಟಿ ಸೋಮಶೇಖರ್, ಶಾಸಕ ಶಿವರಾಮ್ ಹೆಬ್ಬಾರ್​ ಇತ್ತೀಚೆಗೆ ಕಾಂಗ್ರೆಸ್​​ನಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಕೆಲ ದಿನಗಳಿಂದ ರೆಬೆಲ್​ ನಾಯಕರ ಪೈಕಿ ಇವರು ಬಿಜೆಪಿ ಕಾರ್ಯಕ್ರಮಗಳಿಂದ ಸ್ವಲ್ಪ ಕಾಯ್ದುಕೊಂಡಿದ್ದರು. ಹಾಗಾಗಿ ವಾಪಸ್​​​ ಕಾಂಗ್ರೆಸ್​​ಗೆ ಸೇರ್ಪಡೆಗೊಳ್ಳುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಬಳಿಕ ಆ ವಿಚಾರ ತಣ್ಣಗಾಗಿತ್ತು. ಇದೀಗ ರಾಜ್ಯ ಸರ್ಕಾರದ ಬಜೆಟ್​ಗೆ ಇಬ್ಬರು ಶಾಸಕರು ಹಾಡಿಹೊಗಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!