AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ನಿವಾಸ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು

ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯಕ್ಕೆ ಕಾವೇರಿ ನಿವಾಸದಲ್ಲಿದ್ದಾರೆ. ಹಾಗಾಗಿ ಶಾಸಕರ ದಂಡು ಕಾವೇರಿ ನಿವಾಸದಲ್ಲಿ ಕಾಣಿಸಿಕೊಂಡಿದೆ. ಪಕ್ಕದಲ್ಲೇ ಇರುವ ಕುಮಾರ ಕೃಪಾ ಗೆಸ್ಟ್​ ಹೌಸ್​​ನಲ್ಲಿ ಬಿಜೆಪಿ ವರಿಷ್ಠರು ಮತ್ತು ವೀಕ್ಷಕರು ವಾಸ್ತವ್ಯ ಹೂಡಿದ್ದು, ಸದರಿ ಶಾಸಕರು ಅಲ್ಲಿಗೂ ಒಂದು ವಿಸಿಟ್ ಹಾಕುತ್ತಿದ್ದಾರೆ. ​

ಯಡಿಯೂರಪ್ಪ ನಿವಾಸ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು
ಯಡಿಯೂರಪ್ಪ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು
TV9 Web
| Updated By: ಸಾಧು ಶ್ರೀನಾಥ್​|

Updated on: Jul 28, 2021 | 9:30 AM

Share

ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡು ಅಂದರೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ನಿರ್ಗಮನಗೊಂಡಿದ್ದರೂ ಅವರ ಆಪ್ತ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿರುವುದರಿಂದ ಬಿಎಸ್​ವೈ ಮಾತು ಇನ್ನೂ ನಡೆಯುತ್ತದೆ ಎಂದು ಅವರ ಆಪ್ತ ವಲಯ ಹೇಳುತ್ತಿದೆ. ಹಾಗಾಗಿ ಬಿ ಎಸ್ ಯಡಿಯೂರಪ್ಪ ಅವರು ಪವರ್​ ಹೌಸ್​​ ಆಗಿದ್ದು, ಬೊಮ್ಮಾಯಿ ನೂತನ ಮಂತ್ರಿ ಮಂಡಲ ಸೇರುವ ತವಕದಲ್ಲಿ ಯಡಿಯೂರಪ್ಪ ಅವರನ್ನು ಅನೇಕ ಶಾಸಕರು ಎಡತಾಕತೊಡಗಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯಕ್ಕೆ ಕಾವೇರಿ ನಿವಾಸದಲ್ಲಿದ್ದಾರೆ. ಹಾಗಾಗಿ ಶಾಸಕರ ದಂಡು ಕಾವೇರಿ ನಿವಾಸದಲ್ಲಿ ಕಾಣಿಸಿಕೊಂಡಿದೆ. ಪಕ್ಕದಲ್ಲೇ ಇರುವ ಕುಮಾರ ಕೃಪಾ ಗೆಸ್ಟ್​ ಹೌಸ್​​ನಲ್ಲಿ ಬಿಜೆಪಿ ವರಿಷ್ಠರು ಮತ್ತು ವೀಕ್ಷಕರು ವಾಸ್ತವ್ಯ ಹೂಡಿದ್ದು, ಸದರಿ ಶಾಸಕರು ಅಲ್ಲಿಗೂ ಒಂದು ವಿಸಿಟ್ ಹಾಕುತ್ತಿದ್ದಾರೆ. ​ಇದೀಗ ಖುದ್ದು ಬಸವರಾಜ ಬೊಮ್ಮಾಯಿ ಅವರೂ ಸಹ ಯಡಿಯೂರಪ್ಪ ನಿವಾಸಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಯಡಿಯೂರಪ್ಪ ಆಶೀರ್ವಾದ ಪಡೆಯಲು ಬಂದಿದ್ದಾರೆ.

ಸಚಿವ ಸ್ಥಾನದ ಮೇಲೆ ಕಣ್ಣು ನೆಟ್ಟಿರುವ ಎಂಪಿ ಕುಮಾರಸ್ವಾಮಿ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಜೊತೆಗೆ ಆರಗ ಜ್ಞಾನೇಂದ್ರ ಸಹ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಇನ್ನು ಪಕ್ಕದ ಕೆ.ಕೆ.ಗೆಸ್ಟ್‌ ಹೌಸ್‌ಗೆ ಬಿಜೆಪಿ ಶಾಸಕರು ಆಗಮಿಸುತ್ತಿದ್ದಾರೆ. ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಭೈರತಿ ಬಸವರಾಜ್, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಮುರುಗೇಶ್​ ನಿರಾಣಿ, ಅರವಿಂದ ಲಿಂಬಾವಳಿ, ಎಂಎಲ್‌ಸಿ ವಿಶ್ವನಾಥ್ ಆಗಮಿಸಿದ್ದಾರೆ.

Karnataka Politics: ಮುಖ್ಯಮಂತ್ರಿ ಹೆಸರು ಘೋಷಣೆ ಬಳಿಕ ಯಡಿಯೂರಪ್ಪ ಕಾಲಿಗೆ ನಮಸ್ಕಾರ ಮಾಡಿದ ಬಸವರಾಜ ಬೊಮ್ಮಾಯಿ

(BJP MLAs visit out going chief minister bs yediyurappa)

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ