AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ವೀಲ್​ಚೇರ್​​ನಲ್ಲಿ ಓಡಾಡುತ್ತಿದ್ದಾರೆ. 76 ವರ್ಷವಾದರೂ ಪಕ್ಷದ ಚಟುವಟಿಕೆ, ಓಡಾಟ ಅಂತಾ ಬಂದ್ರೆ, ತುಂಬಾನೇ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ಮಂಡಿನೋವಿನಿಂದಾಗಿ ವೀಲ್​ಚೇರ್​ನಲ್ಲಿ ಓಡಾಡ್ತಿದ್ದಾರೆ. ಆದ್ರೆ ಸಿಎಂ ಸಿದ್ದರಾಮಯ್ಯರನ್ನ ಟೀಕಿಸೋ ಭರದಲ್ಲಿ, ಛಲವಾದಿ ನಾರಾಯಣಸ್ವಾಮಿ ನಾಲಗೆ ಹರಿಬಿಟ್ಟಿದ್ದು, ಕಾಂಗ್ರೆಸ್​ ಪಾಳಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ
Siddaramaiah And Chalavadi Narayanaswamy
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 06, 2025 | 10:29 PM

Share

ಬೆಂಗಳೂರು, (ಮಾರ್ಚ್​ 06): ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್​​ಚೇರ್ ( wheelchair) ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chaluvadi Narayanaswamy) ಸಿಎಂ ಸಿದ್ದರಾಮಯ್ಯನವರ(siddaramaiah) ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಎಸ್ಸಿಪಿ ಟಿಎಸ್ಪಿ ಹಣ ದುರ್ಬಳಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು (ಮಾರ್ಚ್​ 06) ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು .ಇದಕ್ಕೆ ಬಿಜೆಪಿ ಬೆಂಬಲ ನೀಡಿದ್ದು, ರಾಜ್ಯ ಸರ್ಕಾರವನ್ನ ಕುಟುಕುವ ಭರದಲ್ಲಿ ಚೆಲುವಾದಿ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಮಂಡಿನೋವು ಉಲ್ಲೇಖಿಸಿ ವ್ಯಂಗ್ಯವಾಡಿದರು. ಇದಕ್ಕೆ ಕಾಂಗ್ರೆಸ್​​ ನಾಯಕರು ಸಿಡಿದೆದ್ದಿದ್ದಾರೆ.

ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ. ನಮ್ಮವರ ಹಣ ದುರುಪಯೋಗ ಮಾಡಿದ್ದಕ್ಕೆ ನೀವು ಈಗ ವ್ಹೀಲ್ ಚೇರ್ ನಲ್ಲೇ‌ ಬರುತ್ತಿರುವುದು. 25 ಸಾವಿರ ಕೋಟಿ ರೂ. ದಲಿತರ ಹಣ ದುರ್ಬಳಕೆ ಆಗಿದೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ರೋಶ ಹೊರಹಾಕಿದರು.

ನಾರಾಯಣಸ್ವಾಮಿ ಉಮಾಶ್ರೀ ಕೆಂಡಾಮಂಡಲ

ಛಲವಾದಿ ನಾರಾಯಣಸ್ವಾಮಿ ಅವರ ಈ ಮಾತು ರಾಜ್ಯ ಕಾಂಗ್ರೆಸ್ ಕಲಿಗಳನ್ನ ಕೆರಳಿಸುವಂತೆ ಮಾಡಿದೆ. ಸಿಎಂ ಪರಿಸ್ಥಿತಿ ಕುರಿತು ನಾಲಿಗೆ ಹರಿಬಿಟ್ಟ ಚೆಲುವಾದಿ ನಾರಾಯಣಸ್ವಾಮಿ ವಿರುದ್ದ ಕೈ ಪಡೆ ಎಗರಿ ಎಗರಿ ದಾಳಿ ನಡೆಸಿದೆ. ಅದರಲ್ಲೂವಿಧಾನಪರಿಷತ್​ ಕಾಂಗ್ರೆಸ್​ ಸದಸ್ಯೆ ಉಮ್ರಾಶ್ರೀ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಮನುಷ್ಯತ್ವ ಇದ್ದರೆ ಸಿದ್ದರಾಮಯ್ಯ ಅವರಿಗೆ ಸಾರಿ ಕೇಳಬೇಕು ಎಂದು ತಿವಿದರು.

ಇದನ್ನೂ ಓದಿ
Image
ಕೆಲಸದ ವಿಷಯದಲ್ಲಿ ಶಿವಕುಮಾರ್​ಗೆ ಸದನದಲ್ಲಿ ಸವಾಲೆಸೆದ ಅಶ್ವಥ್ ನಾರಾಯಣ
Image
ನಡೆದು ಬರಲಿ ಇಲ್ ವ್ಹೀಲ್ ಚೇರ​ಲ್ಲಿ; ಸಿದ್ದರಾಮಯ್ಯ ಗತ್ತಲ್ಲಿ ನೋ ಚೇಂಜ್
Image
ಪರಿಶಿಷ್ಟ ಜಾತಿ/ ಪಂಗಡಗಳ ಏಳ್ಗೆಗೆ ಸಿದ್ದರಾಮಯ್ಯ ಬಹಳ ಮಾಡಿದ್ದಾರೆ: ಸಚಿವ
Image
ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಚಲುವರಾಯಸ್ವಾಮಿ ಮತ್ತು ಭೈರತಿ ಸುರೇಶ್

ಹುಲಿ ಯಾವತ್ತಿದ್ರೂ ಹುಲಿನೇ

ಛಲವಾದಿ ನಾರಾಯಣಸ್ವಾಮಿ ಪರಿಷತ್ ವಿಪಕ್ಷ ನಾಯಕರು. ಸಿದ್ದರಾಮಯ್ಯನವರ ಟೀಕಿಸಿ ಏನು ಸಾಧನೆ ಮಾಡುತ್ತೀರಿ? ಈ ರೀತಿ ಮಾತನಾಡಿ ಸಿಎಂ ಅವರನ್ನ ಏನೂ ಮಾಡೋಕಾಗಲ್ಲ. ಹುಲಿ ಯಾವತ್ತಿದ್ರೂ ಹುಲಿನೇ. ಛಲವಾದಿ ಅವರಿಗೆ ಹೋಲಿಸಿದ್ರೆ ಸಿದ್ದರಾಮಯ್ಯ ಪ್ರಬುದ್ಧರು. ಇಡೀ ರಾಜ್ಯ, ದೇಶ ಸೇರಿ ಬಿಜೆಪಿ ನಾಯಕರು ಗೌರವಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಎಲ್ಲರೂ ಗೌರವಿಸುತ್ತಾರೆ. ಕ್ಷುಲ್ಲಕ, ಕೆಟ್ಟದಾಗಿ ಮಾತನಾಡುವುದು ಅತ್ಯಂತ ಕೆಳ ಮನಸ್ಥಿತಿ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರ ಟೀಕೆ ಮಾಡಿ ರಾಜಕೀಯವಾಗಿ ಏನು ಸಾಧನೆ ಮಾಡುತ್ತೇನೆ ಅಂದರೆ ಅದು ಸಾಧ್ಯವೇ ಇಲ್ಲ. ಛಲವಾದಿ ನಾರಾಯಣಸ್ವಾಮಿ ಅವರಿಗೆ ಹೋಲಿಕೆ ಮಾಡಿದರೆ ತುಂಬಾ ಪ್ರಬುದ್ಧವಾದ ರಾಜಕಾರಣಿ ಸಿದ್ದರಾಮಯ್ಯ. ಇಡೀ ರಾಜ್ಯ ದೇಶ ಸೇರಿ ಬಿಜೆಪಿ ನಾಯಕರು ಸಿದ್ದರಾಮಯ್ಯನವರನ್ನು ಗೌರವಿಸುತ್ತಾರೆ

ಬಿಜೆಪಿಯಲ್ಲಿ ಸಿದ್ದರಾಮಯ್ಯನವರ ವಿರುದ್ಧ ಮಾತನಾಡಲು ಇಂಥವರನ್ನು ಬಳಸಿ ಸ್ಥಾನಮಾನ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ ಉಮಾಶ್ರೀ, ಮಾಡಿರುವ ಕೆಲಸಗಳನ್ನು ರಾಜಕೀಯವಾಗಿ ಟೀಕೆ ಮಾಡಿ. ವೈಯಕ್ತಿಕವಾಗಿ ಟೀಕೆ ಮಾಡುತ್ತಾರೆಂದರೆ ಇವರ ನೀಚ ಮನಸ್ಥಿತಿ ಗೊತ್ತಾಗುತ್ತದೆ. ಯಾವ ಮನುಷ್ಯನಿಗೆ ದೈಹಿಕವಾಗಿ ಸಮಸ್ಯೆ ಬರುವುದಿಲ್ಲ. ಅದನ್ನ ಮಾನವೀಯತೆಯಿಂದ ನೋಡಬೇಕು. ಈ ರೀತಿ ವೈಯಕ್ತಿಕ ಟೀಕೆ ಮಾಡಲು ಯಾರು ನಿಮಗೆ ಹಕ್ಕು ಕೊಟ್ಟಿರುವುದು ಎಂದು ಛಲವಾದಿ ನಾರಾಯಣಸ್ವಾಮಿಗೆ ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ