AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸೋಲಿಸಲು ಅ ಆ ಇ ಈ ಪ್ರಾರಂಭಿಸಿದ್ದಾರೆ: ಸಿದ್ದು ಪರ ಬಿಜೆಪಿ ನಾಯಕ ಬ್ಯಾಟಿಂಗ್

ಸಿದ್ದರಾಮಯ್ಯ ಸೋಲಿಸಲು ಅ ಆ ಇ ಈ ಪ್ರಾರಂಭಿಸಿದ್ದಾರೆ. ಆದ್ರೆ, ಸಿದ್ದರಾಮಯ್ಯ ಗೆಲ್ಲಲಿದ್ದಾರೆ ಎಂದು ಬಿಜೆಪಿ ನಾಯಕ ಅಚ್ಚರಿ ಹೇಳಿಕೆ ನೀಡಿದ್ದಾರೆ

ಸಿದ್ದರಾಮಯ್ಯ ಸೋಲಿಸಲು ಅ ಆ ಇ ಈ ಪ್ರಾರಂಭಿಸಿದ್ದಾರೆ: ಸಿದ್ದು ಪರ ಬಿಜೆಪಿ ನಾಯಕ ಬ್ಯಾಟಿಂಗ್
ಸಿದ್ದರಾಮಯ್ಯ
TV9 Web
| Edited By: |

Updated on:Nov 26, 2022 | 11:49 PM

Share

ಮೈಸೂರು: ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​.ವಿಶ್ವನಾಥ್ (H Vishwanath)  ಅವರು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddarmaiah) ವಿರುದ್ಧ ಗಂಭೀರ ಆರೋಪಗಳನ್ನ ಮಾಡಿ ಕೊನೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆದ್ರೆ, ಇದೇ ವಿಶ್ವನಾಥ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮೈಸೂರಿನಲ್ಲಿ ಇಂದು(ನವೆಂಬರ್ 26) ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಕೋಲಾರದಲ್ಲಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸೋಲಿಸಲು ಅ ಆ ಇ ಈ ಪ್ರಾರಂಭಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋಲಿಸಿದ ರೀತಿ ತಂತ್ರ ಎಣೆಯುವ ಕಾರ್ಯ ಈಗೀಗ ಪ್ರಾರಂಭವಾಗುತ್ತಿದೆ. ಆದರೆ ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರು ಗೆಲ್ಲಲಿದ್ದಾರೆ. ಕೋಲಾರದಲ್ಲಿ ಸ್ಪರ್ಧಿಸಿದರೂ ಗೆಲ್ಲಲಿದ್ದಾರೆ ಎಂದು ಹಳ್ಳಿ ಹಕ್ಕಿ ಸಿದ್ದು ಬಗ್ಗೆ ಸಾಫ್ಟ್ ಕಾರ್ನರ್ ತೋರಿದರು.

ಈ ಹಿಂದೆ ಕಾಂಗ್ರೆಸ್​ ಬಿಟ್ಟ ಬಿಟ್ಟ ಮೇಲೆ ರಾಜಕೀಯವಾಗಿ ಸಿದ್ದರಾಮಯ್ಯನವರನ್ನು ಕಡು ವಿರೋಧಿ ರೀತಿಯಲ್ಲಿ ಕಾಣುತ್ತಿದ್ದ ವಿಶ್ವನಾಥ್, ಇತ್ತೀಚೆಗೆ ಏಕಾಏಕಿ ಸಿದ್ದರಾಮಯ್ಯನವರ ಮೇಲೆ ಕನಿಕರದ ಮಾತುಳನ್ನಾಡುತ್ತಿದ್ದ ಕುತೂಲಹಲಕ್ಕೆ ಕಾರಣವಾಗಿದೆ.

ಸಿಎಂ ಕೂಡಲೇ ಹಣಕಾಸು ಇಲಾಖೆಗೆ ಒಬ್ಬ ಸಚಿವರನ್ನು ನೇಮಿಸಬೇಕು. ಸಿಎಂ ಬಳಿ 8ರಿಂದ 10 ಇಲಾಖೆಗಳಿವೆ. ಯಾವ ಯಾವ ಇಲಾಖೆಗಳು ಸಿಎಂ ಬಳಿ ಇರುತ್ತದೆಯೋ ಅದು ಸತ್ತು ಹೋಗುತ್ತದೆ. ಈ ಹಿಂದೆ ದೇವರಾಜ ಅರಸು, ವೀರಪ್ಪ ಮೊಯ್ಲಿ ಅಂತವರು ಹಣಕಾಸು ಖಾತೆಯನ್ನು ತಾವೇ ನಿಭಾಯಿಸದೆ ಇತರರಿಗೆ ನೀಡಿದ್ದರು. ಹಣಕಾಸು ಖಾತೆ ನಿಭಾಯಿಸಲು ಹೆಚ್ಚು ಸಮಯಬೇಕು. ಆದರೆ ಸಿಎಂ ಗೆ ಹೆಚ್ಚು ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಸಿಎಂ ತಮ್ಮ ಬಳಿ ಇರುವ ಹಣಕಾಸು ಖಾತೆಯನ್ನ ಬೇರೆಯವರಿಗೆ ನೀಡಬೇಕು ಎಂದು ಸಲಹೆ ನೀಡಿದರು.

ಇನ್ನು ಇದೇ ವೇಳೆ ಜಿಎಸ್‌ಟಿ ವಿರುದ್ಧ ಕಿಡಿಕಾರಿದ ವಿಶ್ವನಾಥ್, ಉಪ್ಪಿನ ಮೇಲೆ ತೆರಿಗೆ ಹಾಕಿದ್ದಕ್ಕೆ ಅಂದು ಗಾಂಧೀಜಿ ಸತ್ಯಾಗ್ರಹ ಮಾಡಿದ್ರು. ಇಂದು ಅದೇ ಉಪ್ಪಿನ ಮೇಲೆ ಟ್ಯಾಕ್ಸ್ ಹಾಕಿದ್ದಾರೆ. ರಾಜ್ಯದಲ್ಲಿ GSTಯಿಂದ 24ಸಾವಿರ ಕೋಟಿ ರೂ. ಸಂಗ್ರಹವಾಗುತ್ತಿದೆ. ಈ ಪೈಕಿ 12 ಸಾವಿರ ಕೋಟಿ ಹಣವನ್ನು ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸುತ್ತಿದ್ದೇವೆ. ಹೆಚ್ಚು GST ಕಟ್ಟುವವರ ಪೈಕಿ ದೇಶದಲ್ಲಿ ನಾವು 2ನೇ ಸ್ಥಾನದಲ್ಲಿದ್ದೇವೆ. ಗುಜರಾತ್ ಮೊದಲನೇ ಸ್ಥಾನದಲ್ಲಿ ಇದೆ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:59 pm, Sat, 26 November 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ