AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ; ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಆಕ್ರೋಶ

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಗಳಿಗೆ ಅನುಭವಿ ಜಿಲ್ಲಾಧಿಕಾರಿಗಳ ಅವಶ್ಯಕತೆಯಿದೆ. ಜಿಲ್ಲೆಗಳಿಗೆ ಐಎಎಸ್ ಕಾರ್ಯದರ್ಶಿಗಳನ್ನು ನೇಮಿಸಿ. ಪ್ರತಿಯೊಬ್ಬರಿಗೂ 100 ಕೋಟಿ ರೂಪಾಯಿ ನೀಡಿ. ಎಲ್ಲಾ ಅಧಿಕಾರ, ಜವಾಬ್ದಾರಿಯನ್ನು ಅವರಿಗೆ ನೀಡಿ.

ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ; ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಆಕ್ರೋಶ
MLC ಹೆಚ್​.ವಿಶ್ವನಾಥ್​
sandhya thejappa
|

Updated on: May 19, 2021 | 11:22 AM

Share

ಮೈಸೂರು: ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್, ಎಲ್ಲ ಅಧಿಕಾರ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಬಳಿ ಇದೆ. ರಾಜ್ಯ ಸರ್ಕಾರದ ಆಡಳಿತ ಕೇಂದ್ರೀಕರಣ ಆಗಿದೆ. ಇದೆಲ್ಲವೂ ಪರ್ಸಂಟೇಜ್​ಗಾಗಿ ಮಾಡಿಕೊಂಡಿರುವುದು. ಮೈಸೂರು ಡಿಸಿಗೆ 10 ಪೈಸೆ ಖರ್ಚು ಮಾಡುವ ಅಧಿಕಾರವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಆ ಅಧಿಕಾರವಿಲ್ಲ. ಯಾವುದೇ ಬಿಲ್ ಪಾಸಾಗಲು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಗಳಿಗೆ ಅನುಭವಿ ಜಿಲ್ಲಾಧಿಕಾರಿಗಳ ಅವಶ್ಯಕತೆಯಿದೆ. ಜಿಲ್ಲೆಗಳಿಗೆ ಐಎಎಸ್ ಕಾರ್ಯದರ್ಶಿಗಳನ್ನು ನೇಮಿಸಿ. ಪ್ರತಿಯೊಬ್ಬರಿಗೂ 100 ಕೋಟಿ ರೂಪಾಯಿ ನೀಡಿ. ಎಲ್ಲಾ ಅಧಿಕಾರ, ಜವಾಬ್ದಾರಿಯನ್ನು ಅವರಿಗೆ ನೀಡಿ. ಸಾವುಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿ ಎಂದು ಸರ್ಕಾರಕ್ಕೆ ವಿಶ್ವನಾಥ್ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳು ನಮಗೆ ಅಧಿಕಾರ ಇಲ್ಲ ಎನ್ನುವುದನ್ನು ಪ್ರಧಾನಿಗೆ ಹೇಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಡಿಸಿಗೆ ಮನವಿ ಮಾಡಬಾರದು. ಕಮಾಂಡ್ ಮಾಡಬೇಕು. ಡಿಸಿ ಒಂದು ದಿನ ಹಳ್ಳಿ ಕಡೆ ಹೋಗಲಿಲ್ಲ. ಟಾಸ್ಕ್ ಫೋರ್ಸ ಸಹಾ ಹೋಗಲಿಲ್ಲ. ಹಳ್ಳಿಗಳ ಗೋಳು ಯಾರು ಕೇಳುತ್ತಿಲ್ಲ. ಸಿದ್ದರಾಮಯ್ಯ ಅವರೇ ಮಾತಾಡಿ ಗ್ರಾಮೀಣ ಭಾಗದಲ್ಲಿ ಅಹಿಂದ ಜನರು ಸಾಯುತ್ತಿದ್ದಾರೆ ಎಂದು ಹೇಳಿದರು.

ಎಲ್ಲವನ್ನೂ ಕೊಟ್ಟು ಮತ್ತೆ 15 ದಿನ ಲಾಕ್​ಡೌನ್​ ಮಾಡಿ. ಸಾಮನ್ಯ ಜ್ಞಾನವಿಲ್ಲದೆ ಏನೇನೋ ತೀರ್ಮಾನ ಮಾಡಬಾರದು. ವಾರಕ್ಕೆ 1 ದಿನ ಮಾತ್ರ ಅವಕಾಶ ಕೊಟ್ಟು ಲಾಕ್​ಡೌನ್​ ಮಾಡಿ ಎಂದರು.

ಇದನ್ನೂ ಓದಿ

CM Yediyurappa PC LIVE: ಲಾಕ್​ಡೌನ್​ ಮುಂದುವರೆಸುವಿಕೆ, ಪ್ಯಾಕೇಜ್​ ಘೋಷಣೆ ಸೇರಿದಂತೆ ಮಹತ್ತರ ವಿಚಾರಗಳ ಬಗ್ಗೆ ಯಡಿಯೂರಪ್ಪ ಸಭೆ

ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಕಾಣಿಸುತ್ತಿವೆ ಖಾಲಿ ಬೆಡ್

(BJP MLC H Vishwanath has expressed outrage against the Karnataka government)

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು