AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ವಿರೋಧ

ಪ್ರಧಾನಿಯವರೇ ಜೀವ ಮುಖ್ಯ, ನಂತರ ಜೀವನ ಎಂದಿದ್ದಾರೆ. ಆದರೆ ಎಸ್.ಸುರೇಶ್​ ಕುಮಾರ್​ಗೆ ಎಲ್ಲ ಗೊತ್ತೆಂಬ ಅಹಂ ಇದೆ. ಇಂತಹ ಅಹಂ ಇರಬಾರದೆಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ಪರೀಕ್ಷೆ ಬೇಕಾಗಿರಲಿಲ್ಲ. ಸರ್ಕಾರದ ನಿರ್ಧಾರ ಮಕ್ಕಳನ್ನು ಸಾವಿನ ಕೂಪಕ್ಕೆ ತಳ್ಳುತ್ತಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ವಿರೋಧ
MLC ಹೆಚ್​.ವಿಶ್ವನಾಥ್​
TV9 Web
| Edited By: |

Updated on: Jun 29, 2021 | 1:49 PM

Share

ಮೈಸೂರು: ರಾಜ್ಯದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವ ಹಠಕ್ಕೆ ಬಿದ್ದು ಪರೀಕ್ಷೆ ನಡೆಸಲು ನಿರ್ಧರಿಸಿದ್ದೀರಿ? ಎಂದು ಸಚಿವ ಸುರೇಶ್ ಕುಮಾರ್​ಗೆ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಸಿಬಿಎಸ್ಇ ಪರೀಕ್ಷೆಯನ್ನೇ ರದ್ದು ಮಾಡಿದೆ. ಇಂಥ ಸಂದರ್ಭದಲ್ಲಿ ಪರೀಕ್ಷೆ ಮಾಡುವುದು ಬೇಡ ಎಂದಿದ್ದೆ. ಆದರೆ ಈಗ ಯಾವ ಪುರುಷಾರ್ಥಕ್ಕೆ ಪರೀಕ್ಷೆ ಮಾಡಲಾಗುತ್ತಿದೆ. ಜೀವ, ಜೀವನ ಎರಡನ್ನೂ ತೆಗೆಯಲು ಮುಂದಾಗಿದ್ದಾರೆ ಎಂದು ಸುರೇಶ್​ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯವರೇ ಜೀವ ಮುಖ್ಯ, ನಂತರ ಜೀವನ ಎಂದಿದ್ದಾರೆ. ಆದರೆ ಎಸ್.ಸುರೇಶ್​ ಕುಮಾರ್​ಗೆ ಎಲ್ಲ ಗೊತ್ತೆಂಬ ಅಹಂ ಇದೆ. ಇಂತಹ ಅಹಂ ಇರಬಾರದೆಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ಪರೀಕ್ಷೆ ಬೇಕಾಗಿರಲಿಲ್ಲ. ಸರ್ಕಾರದ ನಿರ್ಧಾರ ಮಕ್ಕಳನ್ನು ಸಾವಿನ ಕೂಪಕ್ಕೆ ತಳ್ಳುತ್ತಿದೆ. ಸರ್ಕಾರ, ಸಚಿವರು ಅಹಂ ಬಿಟ್ಟು ಕೆಲಸ ಮಾಡಬೇಕಾಗಿದೆ. ಇದು ಮಗುವನ್ನು ಮರೆತ ಸರ್ಕಾರವೆಂದು ವಿಶ್ವನಾಥ್ ಹೇಳಿದರು.

10-15 ದಿನದಲ್ಲಿ 3ನೇ ಅಲೆ ಆರಂಭವಾಗುತ್ತೆಂದು ಹೇಳುತ್ತಿದ್ದಾರೆ. ಈ ಸಮಯದಲ್ಲಿ ಪರೀಕ್ಷೆ ನಡೆಸುವುದಕ್ಕೆ ಮುಂದಾಗಿದ್ದಾರೆ. ಏಕಾಏಕಿ ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ವಿಶ್ವವೇ ಕೊರೊನಾ ಸೋಂಕು ಸವಾಲನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ಮಾಡುವುದು ಅವೈಜ್ಞಾನಿಕ ಎಂದು ತಿಳಿಸಿದರು.

ಶಾಲೆ ಶುಲ್ಕಕ್ಕೆ ಬಸವರಾಜ ಹೊರಟ್ಟಿ ಸಲಹೆ ಹುಬ್ಬಳ್ಳಿ: ಶಾಲೆ ಶುಲ್ಕ ವಿಚಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳ ವಿಚಾರವಾಗಿ ನಾನು ಸರ್ಕಾರಕ್ಕೆ ಸಲಹೆ ನೀಡಿರುವೆ. ಎಬಿಸಿಡಿ ಆಧಾರದ ಮೇಲೆ ಸಲಹೆ ನೀಡಿರುವೆ. ಫೀ ವಿಚಾರದ ಬಗ್ಗೆ ನಾನು ಮನವಿ ಮಾಡಿರುವೆ. ಆದ್ಯತೆ ಮೇರೆಗೆ ಅಧಿಕಾರಿಗಳು ಶುಲ್ಕ ಮಾರ್ಗಸೂಚಿ ರಚಿಸಬೇಕು ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯರನ್ನ ಮೂಲೆಗುಂಪಾಗಿಸಿದ್ದ ಜಾತಿಗಣತಿ ಬ್ರಹ್ಮಾಸ್ತ್ರ ಮತ್ತೆ ಮುನ್ನೆಲೆಗೆ; 2023ರ ಚುನಾವಣೆಗೆ ಬಿಜೆಪಿಯಿಂದ ಮಾಸ್ಟರ್ ಪ್ಲಾನ್!?

ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ವಿಚಾರದಲ್ಲಿ ಮಾಡಿದ್ದ ದೊಡ್ಡ ತಪ್ಪಿನ ಬಗ್ಗೆ ಬಾಯ್ಬಿಟ್ಟ ರಮ್ಯಾ

(BJP MLC H Vishwanath has opposed the SSLC exam )

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ