AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಎಸ್ ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ, ರಾಜ್ಯದ ಆಡಳಿತದ ಆರೋಗ್ಯವೂ ಸರಿಯಾಗಬೇಕು: ಹೆಚ್ ವಿಶ್ವನಾಥ್

ಸಂಸದ ಶ್ರೀನಿವಾಸ ಪ್ರಸಾದ್​ರನ್ನು ಹೆಚ್.ವಿಶ್ವನಾಥ್ ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಭೇಟಿ‌ಯಾಗಿ ಮಾತುಕತೆ ನಡೆಸಿದ್ದಾರೆ. ಶ್ರೀನಿವಾಸ ಪ್ರಸಾದ್ ಜತೆ ಎಂಎಲ್​ಸಿ ವಿಶ್ವನಾಥ್ ಗೌಪ್ಯ ಚರ್ಚೆ ನಡೆಸಿದ್ದಾರೆ. ರಾಜಕೀಯ ವಿದ್ಯಮಾನ, ಜಿಲ್ಲೆಯಲ್ಲಿನ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬಿ ಎಸ್ ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ, ರಾಜ್ಯದ ಆಡಳಿತದ ಆರೋಗ್ಯವೂ ಸರಿಯಾಗಬೇಕು: ಹೆಚ್ ವಿಶ್ವನಾಥ್
ಹೆಚ್ ವಿಶ್ವನಾಥ್
TV9 Web
| Edited By: |

Updated on:Jun 02, 2021 | 3:47 PM

Share

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ, ಅದರ ಜೊತೆಗೆ ರಾಜ್ಯದ ಆಡಳಿತದ ಆರೋಗ್ಯವೂ ಸರಿಯಾಗಬೇಕು. ಹೀಗಾಗಿ ಹೈಕಮಾಂಡ್ ಶೀಘ್ರ ಒಂದು ನಿರ್ಧಾರ ಮಾಡಬೇಕಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಎಂಎಲ್‌ಸಿ ಹೆಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ, ಕೆಲವರು ಹೇಳಿಕೆ ನೀಡ್ತಿದ್ದಾರೆ. ಇಷ್ಟೆಲ್ಲಾ ಆದ್ರೂ ಯಡಿಯೂರಪ್ಪನವರು ಏನೂ ಮಾತಾಡ್ತಿಲ್ಲ. ಯಾರು ಏನೇ ಮಾಡಿದ್ರೂ ತೀರ್ಮಾನಿಸುವುದು ಹೈಕಮಾಂಡ್ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ ನಂತರ ಹೆಚ್. ವಿಶ್ವನಾಥ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಹೆಚ್. ವಿಶ್ವನಾಥ್ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೆಚ್. ವಿಶ್ವನಾಥ್ ಹೇಳಿಕೆ‌ ನೀಡಿದ್ದಾರೆ.

ಈಗ ಯಾವ ವಿಚಾರಕ್ಕೆ ಮುಹೂರ್ತ ಇಟ್ಟಿದ್ದೇವೆಂದು ಹೇಳಲ್ಲ! ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮುಹೂರ್ತ ಇಟ್ಟಿದ್ದೇವೆ. ಇಂದು ಸಹ ಹಲವು ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ಈಗ ಯಾವ ವಿಚಾರಕ್ಕೆ ಮುಹೂರ್ತ ಇಟ್ಟಿದ್ದೇವೆಂದು ಹೇಳಲ್ಲ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ ನಂತರ ವಿಶ್ವನಾಥ್ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿಗೂ ಇಲ್ಲೇ ಮುಹೂರ್ತ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಮುಹೂರ್ತ ಇಟ್ಟಿದ್ದು ಇಲ್ಲೇ. ರಾಜ್ಯ ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೇ ಮುಹೂರ್ತ ಇಟ್ಟಿದ್ದು. ಯಡಿಯೂರಪ್ಪ ಮುಖ್ಯಮಂತ್ರಿ ಆಗೋದಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ. ನಂತರದಲ್ಲಿ ಹಲವು ಬೆಳವಣಿಗೆಗೆ ಶ್ರೀನಿವಾಸಪ್ರಸಾದ್ ಮನೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

ಮೈಸೂರು ಜಿಲ್ಲೆ ನಿಮ್ಮಿಬ್ಬರದ್ದೇ ಅಲ್ಲ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಜಟಾಪಟಿ ವಿಚಾರವಾಗಿಯೂ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಮೈಸೂರು ಜಿಲ್ಲೆ ನಿಮ್ಮಿಬ್ಬರದ್ದೇ ಅಲ್ಲ. ಪ್ರತಾಪ್ ಸಿಂಹ, ರೋಹಿಣಿ ಸಿಂಧೂರಿಗೆ ಜಿಲ್ಲೆ ಸೀಮಿತವಲ್ಲ. ಹಾದಿರಂಪ ಬೀದಿರಂಪ ಬಿಡಿ ಎಂದು ವಿಶ್ವನಾಥ್ ಸಲಹೆ ನೀಡಿದ್ದಾರೆ.

ಪ್ರತಾಪ್ ಸಿಂಹ ಸಂಸದರು, ಹಾಗಾಗಿ ಮಾತಿನಲ್ಲಿ ಗಾಂಭೀರ್ಯ ಇರಲಿ. ನಾನು, ಶ್ರೀನಿವಾಸ ಪ್ರಸಾದ್, ರಾಮದಾಸ್, ನಾಗೇಂದ್ರ, ತನ್ವೀರ್ ಸೇಠ್‌ರಂತಹ ಹಿರಿಯರು ಜಿಲ್ಲೆಯಲ್ಲಿ ಇದ್ದೇವೆ. ನೀವು ಬೀದಿಯಲ್ಲಿ ಜಗಳ ಆಡಿದ್ರೆ ನಾವು ಯಾಕಿರಬೇಕು? ಉಸ್ತುವಾರಿ ಸಚಿವರು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ ಎಂದು ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಸಂಸದ ಶ್ರೀನಿವಾಸ ಪ್ರಸಾದ್​ರನ್ನು ಹೆಚ್.ವಿಶ್ವನಾಥ್ ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಭೇಟಿ‌ಯಾಗಿ ಮಾತುಕತೆ ನಡೆಸಿದ್ದಾರೆ. ಶ್ರೀನಿವಾಸ ಪ್ರಸಾದ್ ಜತೆ ಎಂಎಲ್​ಸಿ ವಿಶ್ವನಾಥ್ ಗೌಪ್ಯ ಚರ್ಚೆ ನಡೆಸಿದ್ದಾರೆ. ರಾಜಕೀಯ ವಿದ್ಯಮಾನ, ಜಿಲ್ಲೆಯಲ್ಲಿನ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಇರುವ ಎರಡು ಜೊತೆ ಒಳ ಉಡುಪೂ ಹರಿದಿದೆ’; ಬಟ್ಟೆ ಅಂಗಡಿ ತೆರೆಸಲು ಸಿಎಂಗೆ ಮೈಸೂರು ವ್ಯಕ್ತಿ ಮನವಿ

ಜುಲೈ 1ರೊಳಗೆ ಕೊವಿಡ್ ಮುಕ್ತ ಗುರಿ, ಮಹಿಳೆಯರಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

Published On - 3:46 pm, Wed, 2 June 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್