AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಬಂದ್ ವಿಫಲವಾಗಿದೆ, ಜನ ಜೀವನ ಯಥಾಸ್ಥಿತಿಯಲ್ಲಿದೆ: BJP

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ನಡುವೆ ಮಸೂದೆಗಳಿಂದ ರೈತರಿಗೆ ಲಾಭವಾಗುತ್ತದೆ, ನಷ್ಟವಾಗುವುದಿಲ್ಲ. ರೈತರಿಗೆ ಲಾಭವಾಗುತ್ತಿದ್ದರೂ ಏಕೆ ವಿರೋಧ ಮಾಡುತ್ತಿದ್ದೀರಿ? ಇದು ರೈತ ಪರವಾದ ಕಾಯ್ದೆ. ಬಂದ್ ಮಾಡುವ ಅಗತ್ಯವಿಲ್ಲ. ಇದು BJP ಸರ್ಕಾರಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರವಷ್ಟೇ. ಎಡಪಂಥೀಯರಿಗೆ ಕೆಲಸವೇ ಇಲ್ಲವಾಗಿದೆ. ಕರ್ನಾಟಕ ಬಂದ್ ವಿಫಲವಾಗಿದೆ. ಜನಜೀವನ ಯಥಾಸ್ಥಿತಿಯಲ್ಲಿದೆ ಎಂದು BJP ವಿಧಾನ ಪರಿಷತ್ […]

ರಾಜ್ಯದಲ್ಲಿ ಬಂದ್ ವಿಫಲವಾಗಿದೆ, ಜನ ಜೀವನ ಯಥಾಸ್ಥಿತಿಯಲ್ಲಿದೆ: BJP
KUSHAL V
| Edited By: |

Updated on: Sep 28, 2020 | 12:05 PM

Share

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ ಹಾಗೂ APMC ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ನಡುವೆ ಮಸೂದೆಗಳಿಂದ ರೈತರಿಗೆ ಲಾಭವಾಗುತ್ತದೆ, ನಷ್ಟವಾಗುವುದಿಲ್ಲ. ರೈತರಿಗೆ ಲಾಭವಾಗುತ್ತಿದ್ದರೂ ಏಕೆ ವಿರೋಧ ಮಾಡುತ್ತಿದ್ದೀರಿ? ಇದು ರೈತ ಪರವಾದ ಕಾಯ್ದೆ. ಬಂದ್ ಮಾಡುವ ಅಗತ್ಯವಿಲ್ಲ. ಇದು BJP ಸರ್ಕಾರಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರವಷ್ಟೇ. ಎಡಪಂಥೀಯರಿಗೆ ಕೆಲಸವೇ ಇಲ್ಲವಾಗಿದೆ. ಕರ್ನಾಟಕ ಬಂದ್ ವಿಫಲವಾಗಿದೆ. ಜನಜೀವನ ಯಥಾಸ್ಥಿತಿಯಲ್ಲಿದೆ ಎಂದು BJP ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ಡಾಕ್ಟರ್ ಮಗ ಮಾತ್ರ ಡಾಕ್ಟರ್ ಆಗ್ಬೇಕಾ? ಇಂಜಿನಿಯರ್ ಮಗ ಮಾತ್ರ ಇಂಜಿನಿಯರ್ ಆಗ್ಬೇಕಾ ? ರೈತನ‌ ಮಗ ಡಾಕ್ಟರ್, ಇಂಜಿನಿಯರ್ ಆಗಬಾರದಾ? APMC ಕಾಯ್ದೆಯಿಂದ ರೈತರಿಗೆ ಲಾಭವಾಗುತ್ತೆ ವಿನಃ, ನಷ್ಟವಾಗಲ್ಲ. ರೈತನಿಗೆ ಲಾಭವಾಗೋದಾದರೆ ನೀವ್ಯಾಕೆ ವಿರೋಧ ಮಾಡ್ತೀರಾ? ಎಂದು BJP ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.

ನಿಮಗೆ ಹೋರಾಟ ಮಾಡೋ ಹಕ್ಕಿದೆ. ಹಾಗೆಯೇ, ತಾವು ಬೆಳೆದ ಬೆಳೆಯನ್ನು ಯಾರಿಗಾದರೂ ಮಾರಾಟ ಮಾಡುವ ಹಕ್ಕು ಅವರಿಗಿದೆ. ರೈತರ ಪರವಾಗಿರೋ ಕಾಯ್ದೆ ಇದು. ಇದಕ್ಕಾಗಿ ಬಂದ್ ಮಾಡೋದು ಸರಿಯಲ್ಲ. ಕಾಲ ಬದಲಾಗಿದೆ. ರಘುಪತಿ ರಾಘವ ರಾಜಾರಾಂ ‘ಪೂರಾ ವೇತನ್-ಆಧಾ ಕಾಮ್’ ಹಾಗಾಗಬಾರದು ಎಂದು BJP ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದ್ದಾರೆ.

ಪ್ರಧಾನಿ ಎಷ್ಟು ಗಂಟೆ ಕೆಲಸ ಮಾಡ್ತಿದ್ದಾರೆ? ದೇವೇಗೌಡರು ಎಷ್ಟು ಗಂಟೆ ಕೆಲಸ ಮಾಡ್ತಾರೆ? ಸುಧಾಮೂರ್ತಿ ಎಷ್ಟು ಗಂಟೆ ಕೆಲಸ ಮಾಡ್ತಾರೆ? ಹಾಗೆಯೇ ಎಲ್ಲರೂ ಹೆಚ್ಚೆಚ್ಚು ಕೆಲಸ ಮಾಡಲು ರೆಡಿಯಾಗಬೇಕು. ಉದ್ದಿಮೆ ಮತ್ತು ಕಾರ್ಮಿಕ ಈ ಎರಡನ್ನೂ ಹೇಗೆ ಮೇಲೆತ್ತಬೇಕು ಅನ್ನೋದರ ಬಗ್ಗೆ ಯೋಚನೆ ಮಾಡಬೇಕು ಅಂತಾ ರವಿಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ